AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಬೌಲಿಂಗ್ ವೀಕು: ಗೆಲ್ಲೋಕೆ ರಣತಂತ್ರ ತಿಳಿಸಿದ ಫಾಫ್ ಡುಪ್ಲೆಸಿಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಆರ್​ಸಿಬಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ ಐದು ಪಂದ್ಯಗಳಲ್ಲಿ ಹೀನಾಯ ಸೋಲನುಭವಿಸಿ ಇದೀಗ IPL 2024 ರ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

TV9 Web
| Edited By: |

Updated on: Apr 14, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

1 / 6
ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

2 / 6
ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

3 / 6
ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

4 / 6
ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

5 / 6
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ