AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಬೌಲಿಂಗ್ ವೀಕು: ಗೆಲ್ಲೋಕೆ ರಣತಂತ್ರ ತಿಳಿಸಿದ ಫಾಫ್ ಡುಪ್ಲೆಸಿಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಆರ್​ಸಿಬಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ ಐದು ಪಂದ್ಯಗಳಲ್ಲಿ ಹೀನಾಯ ಸೋಲನುಭವಿಸಿ ಇದೀಗ IPL 2024 ರ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

TV9 Web
| Edited By: |

Updated on: Apr 14, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

1 / 6
ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

2 / 6
ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

3 / 6
ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

4 / 6
ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

5 / 6
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

6 / 6
Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್