AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಬೌಲಿಂಗ್ ವೀಕು: ಗೆಲ್ಲೋಕೆ ರಣತಂತ್ರ ತಿಳಿಸಿದ ಫಾಫ್ ಡುಪ್ಲೆಸಿಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಆರ್​ಸಿಬಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ ಐದು ಪಂದ್ಯಗಳಲ್ಲಿ ಹೀನಾಯ ಸೋಲನುಭವಿಸಿ ಇದೀಗ IPL 2024 ರ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

TV9 Web
| Edited By: |

Updated on: Apr 14, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

1 / 6
ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

2 / 6
ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

3 / 6
ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

4 / 6
ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

5 / 6
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

6 / 6
Follow Us
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು