AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಬೌಲಿಂಗ್ ವೀಕು: ಗೆಲ್ಲೋಕೆ ರಣತಂತ್ರ ತಿಳಿಸಿದ ಫಾಫ್ ಡುಪ್ಲೆಸಿಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಆರ್​ಸಿಬಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ ಐದು ಪಂದ್ಯಗಳಲ್ಲಿ ಹೀನಾಯ ಸೋಲನುಭವಿಸಿ ಇದೀಗ IPL 2024 ರ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 14, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

1 / 6
ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

2 / 6
ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

3 / 6
ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

4 / 6
ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

5 / 6
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

6 / 6
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ