AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಸೋಲಿಗೆ ವಿರಾಟ್ ಕೊಹ್ಲಿ ಕಾರಣ: ತಿರುಗಿ ಬಿದ್ದ ಫ್ಯಾನ್ಸ್..!

IPL 2024: ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024 ರ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ವಿರಾಟ್ ಕೊಹ್ಲಿ ಶತಕ ಬಾರಿಸಿ ಮಿಂಚಿದ್ದಾರೆ. ಈ ಶತಕದ ಬೆನ್ನಲ್ಲೇ ಕಿಂಗ್ ಕೊಹ್ಲಿಯ ಇನಿಂಗ್ಸ್ ಬಗ್ಗೆ ಪರ ವಿರೋಧ ಚರ್ಚೆಗಳು ಶುರುವಾಗಿದೆ. ಏಕೆಂದರೆ 200 ಕ್ಕಿಂತ ಮೇಲೆ ರನ್​ ಗಳಿಸಬಹುದಾಗಿದ್ದ ಪಿಚ್​ನಲ್ಲಿ ಕೊಹ್ಲಿ ಅತ್ಯಂತ ಸ್ಲೋ ಸೆಂಚುರಿ ಸಿಡಿಸಿದ್ದಾರೆ.

TV9 Web
| Edited By: |

Updated on: Apr 07, 2024 | 7:35 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)​ ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ 5 ಪಂದ್ಯಗಳಲ್ಲಿ 4 ರಲ್ಲಿ ಸೋತಿದೆ. ಈ ಹಿಂದೆ ಸಿಎಸ್​ಕೆ, ಕೆಕೆಆರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಮಕಾಡೆ ಮಲಗಿದ್ದ ಆರ್​ಸಿಬಿ ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ (Virat Kohli) RCB ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024)​ ಸೀಸನ್ 17 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ 5 ಪಂದ್ಯಗಳಲ್ಲಿ 4 ರಲ್ಲಿ ಸೋತಿದೆ. ಈ ಹಿಂದೆ ಸಿಎಸ್​ಕೆ, ಕೆಕೆಆರ್ ಮತ್ತು ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧ ಮಕಾಡೆ ಮಲಗಿದ್ದ ಆರ್​ಸಿಬಿ ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ವಿರಾಟ್ ಕೊಹ್ಲಿ (Virat Kohli) RCB ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

1 / 7
ಇದಕ್ಕೆ ಮುಖ್ಯ ಕಾರಣ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿರುವುದು. ಅಂದರೆ ಐಪಿಎಲ್​ ಇತಿಹಾಸದಲ್ಲಿ 8 ಶತಕ ಬಾರಿಸಿ ದಾಖಲೆ ಬರೆದಿರುವ ಕೊಹ್ಲಿ ಇದೇ ಮೊದಲ ಬಾರಿಗೆ ಅತ್ಯಂತ ನಿಧಾನಗತಿಯಲ್ಲಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 67 ಎಸೆತಗಳನ್ನು ಎಂಬುದು ವಿಶೇಷ.

ಇದಕ್ಕೆ ಮುಖ್ಯ ಕಾರಣ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿರುವುದು. ಅಂದರೆ ಐಪಿಎಲ್​ ಇತಿಹಾಸದಲ್ಲಿ 8 ಶತಕ ಬಾರಿಸಿ ದಾಖಲೆ ಬರೆದಿರುವ ಕೊಹ್ಲಿ ಇದೇ ಮೊದಲ ಬಾರಿಗೆ ಅತ್ಯಂತ ನಿಧಾನಗತಿಯಲ್ಲಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಕೊಹ್ಲಿ ಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 67 ಎಸೆತಗಳನ್ನು ಎಂಬುದು ವಿಶೇಷ.

2 / 7
ಅಂದರೆ ಶತಕ ಪೂರೈಸಲು ಕೊಹ್ಲಿ ಒಟ್ಟು 11.1 ಓವರ್​ಗಳನ್ನು ತೆಗೆದುಕೊಂಡಿದ್ದರು. ಈ ಮೂಲಕ ಐಪಿಎಲ್​ನಲ್ಲಿ ನಿಧಾನಗತಿಯಲ್ಲಿ ಶತಕ ಸಿಡಿಸಿ ಕಳಪೆ ದಾಖಲೆ ಬರೆದಿದ್ದ ಮನೀಶ್ ಪಾಂಡೆ ಅವರ ಕೆಟ್ಟ ರೆಕಾರ್ಡ್​ ಅನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಈ ಹೀನಾಯ ದಾಖಲೆಯ ಬೆನ್ನಲ್ಲೇ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಅಪಸ್ವರಗಳು ಕೇಳಿ ಬರಲಾರಂಭಿಸಿದೆ.

ಅಂದರೆ ಶತಕ ಪೂರೈಸಲು ಕೊಹ್ಲಿ ಒಟ್ಟು 11.1 ಓವರ್​ಗಳನ್ನು ತೆಗೆದುಕೊಂಡಿದ್ದರು. ಈ ಮೂಲಕ ಐಪಿಎಲ್​ನಲ್ಲಿ ನಿಧಾನಗತಿಯಲ್ಲಿ ಶತಕ ಸಿಡಿಸಿ ಕಳಪೆ ದಾಖಲೆ ಬರೆದಿದ್ದ ಮನೀಶ್ ಪಾಂಡೆ ಅವರ ಕೆಟ್ಟ ರೆಕಾರ್ಡ್​ ಅನ್ನು ವಿರಾಟ್ ಕೊಹ್ಲಿ ಸರಿಗಟ್ಟಿದ್ದಾರೆ. ಈ ಹೀನಾಯ ದಾಖಲೆಯ ಬೆನ್ನಲ್ಲೇ ಕೊಹ್ಲಿ ಬ್ಯಾಟಿಂಗ್ ಬಗ್ಗೆ ಅಪಸ್ವರಗಳು ಕೇಳಿ ಬರಲಾರಂಭಿಸಿದೆ.

3 / 7
ಏಕೆಂದರೆ ಬ್ಯಾಟಿಂಗ್ ಪಿಚ್ ಆಗಿದ್ದರೂ, ಮೊದಲ ಇನಿಂಗ್ಸ್​ನಲ್ಲಿ ಯಾವುದೇ ಒತ್ತಡ ಇಲ್ಲದಿದ್ದರೂ ವಿರಾಟ್ ಕೊಹ್ಲಿ ಶತಕ ಪೂರೈಸಲು 67 ಎಸೆತಗಳನ್ನು ತೆಗೆದುಕೊಂಡಿದ್ದು ಆರ್​ಸಿಬಿ ತಂಡದ ರನ್​ ಗತಿಯ ಮೇಲೆ ಪರಿಣಾಮ ಬೀರಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಚೇಸಿಂಗ್​ನ ಒತ್ತಡದಲ್ಲೂ 58 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

ಏಕೆಂದರೆ ಬ್ಯಾಟಿಂಗ್ ಪಿಚ್ ಆಗಿದ್ದರೂ, ಮೊದಲ ಇನಿಂಗ್ಸ್​ನಲ್ಲಿ ಯಾವುದೇ ಒತ್ತಡ ಇಲ್ಲದಿದ್ದರೂ ವಿರಾಟ್ ಕೊಹ್ಲಿ ಶತಕ ಪೂರೈಸಲು 67 ಎಸೆತಗಳನ್ನು ತೆಗೆದುಕೊಂಡಿದ್ದು ಆರ್​ಸಿಬಿ ತಂಡದ ರನ್​ ಗತಿಯ ಮೇಲೆ ಪರಿಣಾಮ ಬೀರಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಚೇಸಿಂಗ್​ನ ಒತ್ತಡದಲ್ಲೂ 58 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

4 / 7
ಆದರೆ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ನಿಂದಾಗಿ ಆರ್​ಸಿಬಿ ತಂಡವು 200ರ ಗಡಿದಾಟಲು ಸಾಧ್ಯವಾಗಿಲ್ಲ. ಅದರಲ್ಲೂ ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್​ರಂತಹ ಹೊಡಿಬಡಿ ದಾಂಡಿಗರಿದ್ದರೂ ಕೊಹ್ಲಿ ಕೊನೆಯ ಓವರ್​ಗಳ ವೇಳೆ ವೇಗದಿಂದ ಆಡದಿರುವುದು ಆರ್​ಸಿಬಿ ತಂಡದ ಒಟ್ಟು ಸ್ಕೋರ್​ ಮೇಲೆ ಪರಿಣಾಮ ಬೀರಿದೆ ಎಂದು ಕೆಲ ಅಭಿಮಾನಿಗಳ ವಾದ.

ಆದರೆ ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ನಿಂದಾಗಿ ಆರ್​ಸಿಬಿ ತಂಡವು 200ರ ಗಡಿದಾಟಲು ಸಾಧ್ಯವಾಗಿಲ್ಲ. ಅದರಲ್ಲೂ ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್​ರಂತಹ ಹೊಡಿಬಡಿ ದಾಂಡಿಗರಿದ್ದರೂ ಕೊಹ್ಲಿ ಕೊನೆಯ ಓವರ್​ಗಳ ವೇಳೆ ವೇಗದಿಂದ ಆಡದಿರುವುದು ಆರ್​ಸಿಬಿ ತಂಡದ ಒಟ್ಟು ಸ್ಕೋರ್​ ಮೇಲೆ ಪರಿಣಾಮ ಬೀರಿದೆ ಎಂದು ಕೆಲ ಅಭಿಮಾನಿಗಳ ವಾದ.

5 / 7
ಒಂದು ವೇಳೆ ಅಂತಿಮ 5 ಓವರ್​ಗಳ ವೇಳೆ ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರೆ ಆರ್​ಸಿಬಿ ತಂಡದ ಮೊತ್ತ 200ರ ಗಡಿದಾಟುತ್ತಿತ್ತು. ಆದರೆ ಕೊನೆಯ 2 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿದ್ದು ಕೇವಲ 18 ರನ್​ಗಳು ಮಾತ್ರ. ಅದರಲ್ಲೂ ಕೊಹ್ಲಿ 19ನೇ ಓವರ್​ನಲ್ಲಿ ತಮ್ಮ ಶತಕ ಪೂರೈಸಲು ಹೆಚ್ಚಿನ ಒತ್ತು ನೀಡಿದ್ದರು. ಇದರಿಂದ ಆರ್​ಸಿಬಿ ತಂಡದ ರನ್​ ಗತಿಯು ಇಳಿಕೆಮುಖವಾಯಿತು ಎಂಬ ವಾದವನ್ನು ಮುಂದಿಡುತ್ತಿದ್ದಾರೆ.

ಒಂದು ವೇಳೆ ಅಂತಿಮ 5 ಓವರ್​ಗಳ ವೇಳೆ ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರೆ ಆರ್​ಸಿಬಿ ತಂಡದ ಮೊತ್ತ 200ರ ಗಡಿದಾಟುತ್ತಿತ್ತು. ಆದರೆ ಕೊನೆಯ 2 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿದ್ದು ಕೇವಲ 18 ರನ್​ಗಳು ಮಾತ್ರ. ಅದರಲ್ಲೂ ಕೊಹ್ಲಿ 19ನೇ ಓವರ್​ನಲ್ಲಿ ತಮ್ಮ ಶತಕ ಪೂರೈಸಲು ಹೆಚ್ಚಿನ ಒತ್ತು ನೀಡಿದ್ದರು. ಇದರಿಂದ ಆರ್​ಸಿಬಿ ತಂಡದ ರನ್​ ಗತಿಯು ಇಳಿಕೆಮುಖವಾಯಿತು ಎಂಬ ವಾದವನ್ನು ಮುಂದಿಡುತ್ತಿದ್ದಾರೆ.

6 / 7
ಒಟ್ಟಿನಲ್ಲಿ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಇದೀಗ ಸ್ಲೋ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಸ್ಲೋ ಸೆಂಚುರಿ ಬೆನ್ನಲ್ಲೇ ಕೊಹ್ಲಿ ಇನಿಂಗ್ಸ್ ವಿರುದ್ಧ ಪರ ವಿರೋಧ ಚರ್ಚೆಗಳು ಶುರುವಾಗಿದೆ.

ಒಟ್ಟಿನಲ್ಲಿ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ಹೊಂದಿರುವ ವಿರಾಟ್ ಕೊಹ್ಲಿ ಇದೀಗ ಸ್ಲೋ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಅನಗತ್ಯ ದಾಖಲೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಸ್ಲೋ ಸೆಂಚುರಿ ಬೆನ್ನಲ್ಲೇ ಕೊಹ್ಲಿ ಇನಿಂಗ್ಸ್ ವಿರುದ್ಧ ಪರ ವಿರೋಧ ಚರ್ಚೆಗಳು ಶುರುವಾಗಿದೆ.

7 / 7
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ