AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಈ 4 ಬದಲಾವಣೆ ಮಾಡಿದ್ರೆ ಗೆಲುವು ಖಚಿತ ಎಂದ ಮಾಜಿ ಕ್ರಿಕೆಟಿಗ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಮ್ಯಾಚ್​ನಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ತನ್ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಗ್ಗರಿಸಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Mar 31, 2024 | 10:32 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ 2ನೇ ಪಂದ್ಯದಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದರ ಬೆನ್ನಲ್ಲೇ ತವರಿನಲ್ಲಿ ಕೆಕೆಆರ್ ತಂಡದ ವಿರುದ್ಧ ಹೀನಾಯ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಬದಲಾವಣೆ ಮಾಡಬೇಕಿರುವುದು ಅನಿವಾರ್ಯ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ 2ನೇ ಪಂದ್ಯದಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದರ ಬೆನ್ನಲ್ಲೇ ತವರಿನಲ್ಲಿ ಕೆಕೆಆರ್ ತಂಡದ ವಿರುದ್ಧ ಹೀನಾಯ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಬದಲಾವಣೆ ಮಾಡಬೇಕಿರುವುದು ಅನಿವಾರ್ಯ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್.

1 / 6
ಈ ಬಗ್ಗೆ ಮಾತನಾಡಿರುವ ಕೃಷ್ಣಮಾಚಾರಿ ಶ್ರೀಕಾಂತ್, ಆರ್​ಸಿಬಿ ತಂಡವು ಮೊದಲ ಮಾಡಬೇಕಿರುವುದು ಆರಂಭಿಕ ಜೋಡಿಯ ಬದಲಾವಣೆ. ಇಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಮೂರು ಪಂದ್ಯಗಳಲ್ಲೂ ವಿಫಲರಾಗಿದ್ದಾರೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಆರಂಭಿಕನ ಸ್ಥಾನದಿಂದ ಕೈ ಬಿಡಬೇಕು.

ಈ ಬಗ್ಗೆ ಮಾತನಾಡಿರುವ ಕೃಷ್ಣಮಾಚಾರಿ ಶ್ರೀಕಾಂತ್, ಆರ್​ಸಿಬಿ ತಂಡವು ಮೊದಲ ಮಾಡಬೇಕಿರುವುದು ಆರಂಭಿಕ ಜೋಡಿಯ ಬದಲಾವಣೆ. ಇಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಮೂರು ಪಂದ್ಯಗಳಲ್ಲೂ ವಿಫಲರಾಗಿದ್ದಾರೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಆರಂಭಿಕನ ಸ್ಥಾನದಿಂದ ಕೈ ಬಿಡಬೇಕು.

2 / 6
ಅಲ್ಲದೆ ಆರಂಭಿಕನಾಗಿ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಬೇಕು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಿರುಸಿನ ಆರಂಭವನ್ನು ಪಡೆಯಬಹುದು. ಇನ್ನು ಡುಪ್ಲೆಸಿಸ್ 3ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಆರಂಭಿಕನಾಗಿ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಬೇಕು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಿರುಸಿನ ಆರಂಭವನ್ನು ಪಡೆಯಬಹುದು. ಇನ್ನು ಡುಪ್ಲೆಸಿಸ್ 3ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

3 / 6
ಹಾಗೆಯೇ ತಂಡದ ಪ್ಲೇಯಿಂಗ್ ಇಲೆವೆನ್​ನಿಂದ ಅಲ್ಝಾರಿ ಜೋಸೆಫ್ ಹಾಗೂ ರಜತ್ ಪಾಟಿದಾರ್ ಅವರನ್ನು ಕೈ ಬಿಡಬೇಕು. ಈ ಇಬ್ಬರೂ ಮೂರು ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಮತ್ತಷ್ಟು ಅವಕಾಶ ನೀಡುತ್ತಾ ಕೂರುವುದು ಸರಿಯಲ್ಲ. ಹಾಗಾಗಿ ಮುಂದಿನ ಪಂದ್ಯದಿಂದ ಇಬ್ಬರಿಗೂ ಗೇಟ್ ಪಾಸ್ ನೀಡಬೇಕೆಂದು ಶ್ರೀಕಾಂತ್ ಹೇಳಿದ್ದಾರೆ.

ಹಾಗೆಯೇ ತಂಡದ ಪ್ಲೇಯಿಂಗ್ ಇಲೆವೆನ್​ನಿಂದ ಅಲ್ಝಾರಿ ಜೋಸೆಫ್ ಹಾಗೂ ರಜತ್ ಪಾಟಿದಾರ್ ಅವರನ್ನು ಕೈ ಬಿಡಬೇಕು. ಈ ಇಬ್ಬರೂ ಮೂರು ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಮತ್ತಷ್ಟು ಅವಕಾಶ ನೀಡುತ್ತಾ ಕೂರುವುದು ಸರಿಯಲ್ಲ. ಹಾಗಾಗಿ ಮುಂದಿನ ಪಂದ್ಯದಿಂದ ಇಬ್ಬರಿಗೂ ಗೇಟ್ ಪಾಸ್ ನೀಡಬೇಕೆಂದು ಶ್ರೀಕಾಂತ್ ಹೇಳಿದ್ದಾರೆ.

4 / 6
ಇಲ್ಲಿ ಅಲ್ಝಾರಿ ಜೋಸೆಫ್ ಅವರನ್ನು ಕೈ ಬಿಡುವುದರಿಂದ ವಿಲ್ ಜಾಕ್ಸ್​ಗೆ ಚಾನ್ಸ್ ನೀಡಬಹುದು. ಹಾಗೆಯೇ ರಜತ್ ಪಾಟಿದಾರ್ ಸ್ಥಾನದಲ್ಲಿ ಮತ್ತೋರ್ವ ವೇಗಿ ಆಕಾಶ್ ದೀಪ್​ಗೆ ಅವಕಾಶ ನೀಡಿ. ಆತ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಲು ಅರ್ಹ ಆಟಗಾರ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ಅಲ್ಝಾರಿ ಜೋಸೆಫ್ ಅವರನ್ನು ಕೈ ಬಿಡುವುದರಿಂದ ವಿಲ್ ಜಾಕ್ಸ್​ಗೆ ಚಾನ್ಸ್ ನೀಡಬಹುದು. ಹಾಗೆಯೇ ರಜತ್ ಪಾಟಿದಾರ್ ಸ್ಥಾನದಲ್ಲಿ ಮತ್ತೋರ್ವ ವೇಗಿ ಆಕಾಶ್ ದೀಪ್​ಗೆ ಅವಕಾಶ ನೀಡಿ. ಆತ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಲು ಅರ್ಹ ಆಟಗಾರ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

5 / 6
ಈ ನಾಲ್ಕು ಬದಲಾವಣೆಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿದರೆ ಮುಂದಿನ ಪಂದ್ಯದಲ್ಲಿ ಗೆಲ್ಲಲಿದೆ ಎಂದು ಕೃಷ್ಣಮಾಚಾರಿ ಶ್ರೀಕಾಂತ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಈ ನಾಲ್ಕು ಬದಲಾವಣೆಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿದರೆ ಮುಂದಿನ ಪಂದ್ಯದಲ್ಲಿ ಗೆಲ್ಲಲಿದೆ ಎಂದು ಕೃಷ್ಣಮಾಚಾರಿ ಶ್ರೀಕಾಂತ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

6 / 6
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು