AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಈ 4 ಬದಲಾವಣೆ ಮಾಡಿದ್ರೆ ಗೆಲುವು ಖಚಿತ ಎಂದ ಮಾಜಿ ಕ್ರಿಕೆಟಿಗ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಮ್ಯಾಚ್​ನಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ತನ್ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಗ್ಗರಿಸಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದೆ.

TV9 Web
| Edited By: |

Updated on: Mar 31, 2024 | 10:32 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ 2ನೇ ಪಂದ್ಯದಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದರ ಬೆನ್ನಲ್ಲೇ ತವರಿನಲ್ಲಿ ಕೆಕೆಆರ್ ತಂಡದ ವಿರುದ್ಧ ಹೀನಾಯ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಬದಲಾವಣೆ ಮಾಡಬೇಕಿರುವುದು ಅನಿವಾರ್ಯ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಅನ್ನು ಸೋಲಿನೊಂದಿಗೆ ಆರಂಭಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ತನ್ನ 2ನೇ ಪಂದ್ಯದಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಇದರ ಬೆನ್ನಲ್ಲೇ ತವರಿನಲ್ಲಿ ಕೆಕೆಆರ್ ತಂಡದ ವಿರುದ್ಧ ಹೀನಾಯ ಸೋಲನುಭವಿಸಿ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದಲ್ಲಿ ಬದಲಾವಣೆ ಮಾಡಬೇಕಿರುವುದು ಅನಿವಾರ್ಯ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್.

1 / 6
ಈ ಬಗ್ಗೆ ಮಾತನಾಡಿರುವ ಕೃಷ್ಣಮಾಚಾರಿ ಶ್ರೀಕಾಂತ್, ಆರ್​ಸಿಬಿ ತಂಡವು ಮೊದಲ ಮಾಡಬೇಕಿರುವುದು ಆರಂಭಿಕ ಜೋಡಿಯ ಬದಲಾವಣೆ. ಇಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಮೂರು ಪಂದ್ಯಗಳಲ್ಲೂ ವಿಫಲರಾಗಿದ್ದಾರೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಆರಂಭಿಕನ ಸ್ಥಾನದಿಂದ ಕೈ ಬಿಡಬೇಕು.

ಈ ಬಗ್ಗೆ ಮಾತನಾಡಿರುವ ಕೃಷ್ಣಮಾಚಾರಿ ಶ್ರೀಕಾಂತ್, ಆರ್​ಸಿಬಿ ತಂಡವು ಮೊದಲ ಮಾಡಬೇಕಿರುವುದು ಆರಂಭಿಕ ಜೋಡಿಯ ಬದಲಾವಣೆ. ಇಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಫಾಫ್ ಡುಪ್ಲೆಸಿಸ್ ಮೂರು ಪಂದ್ಯಗಳಲ್ಲೂ ವಿಫಲರಾಗಿದ್ದಾರೆ. ಹೀಗಾಗಿ ಡುಪ್ಲೆಸಿಸ್ ಅವರನ್ನು ಆರಂಭಿಕನ ಸ್ಥಾನದಿಂದ ಕೈ ಬಿಡಬೇಕು.

2 / 6
ಅಲ್ಲದೆ ಆರಂಭಿಕನಾಗಿ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಬೇಕು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಿರುಸಿನ ಆರಂಭವನ್ನು ಪಡೆಯಬಹುದು. ಇನ್ನು ಡುಪ್ಲೆಸಿಸ್ 3ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೆ ಆರಂಭಿಕನಾಗಿ ಸ್ಪೋಟಕ ದಾಂಡಿಗ ವಿಲ್ ಜಾಕ್ಸ್ ಅವರನ್ನು ಆರ್​ಸಿಬಿ ಕಣಕ್ಕಿಳಿಸಬೇಕು. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬಿರುಸಿನ ಆರಂಭವನ್ನು ಪಡೆಯಬಹುದು. ಇನ್ನು ಡುಪ್ಲೆಸಿಸ್ 3ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

3 / 6
ಹಾಗೆಯೇ ತಂಡದ ಪ್ಲೇಯಿಂಗ್ ಇಲೆವೆನ್​ನಿಂದ ಅಲ್ಝಾರಿ ಜೋಸೆಫ್ ಹಾಗೂ ರಜತ್ ಪಾಟಿದಾರ್ ಅವರನ್ನು ಕೈ ಬಿಡಬೇಕು. ಈ ಇಬ್ಬರೂ ಮೂರು ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಮತ್ತಷ್ಟು ಅವಕಾಶ ನೀಡುತ್ತಾ ಕೂರುವುದು ಸರಿಯಲ್ಲ. ಹಾಗಾಗಿ ಮುಂದಿನ ಪಂದ್ಯದಿಂದ ಇಬ್ಬರಿಗೂ ಗೇಟ್ ಪಾಸ್ ನೀಡಬೇಕೆಂದು ಶ್ರೀಕಾಂತ್ ಹೇಳಿದ್ದಾರೆ.

ಹಾಗೆಯೇ ತಂಡದ ಪ್ಲೇಯಿಂಗ್ ಇಲೆವೆನ್​ನಿಂದ ಅಲ್ಝಾರಿ ಜೋಸೆಫ್ ಹಾಗೂ ರಜತ್ ಪಾಟಿದಾರ್ ಅವರನ್ನು ಕೈ ಬಿಡಬೇಕು. ಈ ಇಬ್ಬರೂ ಮೂರು ಪಂದ್ಯಗಳಲ್ಲೂ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಮತ್ತಷ್ಟು ಅವಕಾಶ ನೀಡುತ್ತಾ ಕೂರುವುದು ಸರಿಯಲ್ಲ. ಹಾಗಾಗಿ ಮುಂದಿನ ಪಂದ್ಯದಿಂದ ಇಬ್ಬರಿಗೂ ಗೇಟ್ ಪಾಸ್ ನೀಡಬೇಕೆಂದು ಶ್ರೀಕಾಂತ್ ಹೇಳಿದ್ದಾರೆ.

4 / 6
ಇಲ್ಲಿ ಅಲ್ಝಾರಿ ಜೋಸೆಫ್ ಅವರನ್ನು ಕೈ ಬಿಡುವುದರಿಂದ ವಿಲ್ ಜಾಕ್ಸ್​ಗೆ ಚಾನ್ಸ್ ನೀಡಬಹುದು. ಹಾಗೆಯೇ ರಜತ್ ಪಾಟಿದಾರ್ ಸ್ಥಾನದಲ್ಲಿ ಮತ್ತೋರ್ವ ವೇಗಿ ಆಕಾಶ್ ದೀಪ್​ಗೆ ಅವಕಾಶ ನೀಡಿ. ಆತ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಲು ಅರ್ಹ ಆಟಗಾರ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ಅಲ್ಝಾರಿ ಜೋಸೆಫ್ ಅವರನ್ನು ಕೈ ಬಿಡುವುದರಿಂದ ವಿಲ್ ಜಾಕ್ಸ್​ಗೆ ಚಾನ್ಸ್ ನೀಡಬಹುದು. ಹಾಗೆಯೇ ರಜತ್ ಪಾಟಿದಾರ್ ಸ್ಥಾನದಲ್ಲಿ ಮತ್ತೋರ್ವ ವೇಗಿ ಆಕಾಶ್ ದೀಪ್​ಗೆ ಅವಕಾಶ ನೀಡಿ. ಆತ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಪಡೆಯಲು ಅರ್ಹ ಆಟಗಾರ ಎಂದು ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.

5 / 6
ಈ ನಾಲ್ಕು ಬದಲಾವಣೆಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿದರೆ ಮುಂದಿನ ಪಂದ್ಯದಲ್ಲಿ ಗೆಲ್ಲಲಿದೆ ಎಂದು ಕೃಷ್ಣಮಾಚಾರಿ ಶ್ರೀಕಾಂತ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಈ ನಾಲ್ಕು ಬದಲಾವಣೆಗಳೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿದರೆ ಮುಂದಿನ ಪಂದ್ಯದಲ್ಲಿ ಗೆಲ್ಲಲಿದೆ ಎಂದು ಕೃಷ್ಣಮಾಚಾರಿ ಶ್ರೀಕಾಂತ್ ಭವಿಷ್ಯ ನುಡಿದಿದ್ದಾರೆ. ಅದರಂತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!