AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರನಿಗೆ ಗಾಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಆರ್​ಸಿಬಿ ತಂಡವು ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದಿದ್ದು ಬಿಟ್ಟರೆ, ಉಳಿದ 5 ಪಂದ್ಯಗಳಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಗ್ಗರಿಸಿದೆ. ಇನ್ನು ಮೊದಲಾರ್ಧದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಎಸ್​ಆರ್​​ಹೆಚ್ ವಿರುದ್ಧ ಕಣಕ್ಕಿಳಿಯಲಿದೆ.

TV9 Web
| Edited By: |

Updated on: Apr 13, 2024 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಗಾಯಗೊಂಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಗಾಯಗೊಂಡಿದ್ದಾರೆ.

1 / 6
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಮ್ಯಾಕ್ಸ್​ವೆಲ್ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಮ್ಯಾಕ್ಸ್​ವೆಲ್ ಅವರ ಹೆಬ್ಬೆರಳಿಗೆ ಗಾಯವಾಗಿದ್ದು, ಹೀಗಾಗಿ ಅವರು ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ. ಅದರಂತೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕ್ಯಾಮರೋನ್ ಗ್ರೀನ್ ಕಣಕ್ಕಿಳಿಯುವ ಸಾಧ್ಯತೆಯಿದೆ.

2 / 6
ಏಕೆಂದರೆ ಕಳೆದ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್ ಬದಲಿಗೆ ವಿಲ್ ಜಾಕ್ಸ್ ಕಣಕ್ಕಿಳಿದಿದ್ದರು. ಇದೀಗ ಮ್ಯಾಕ್ಸ್​ವೆಲ್ ಹೊರಗುಳಿದರೆ ಅವರ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರ ಆರ್​ಸಿಬಿ ತಂಡದಲ್ಲಿಲ್ಲ. ಹೀಗಾಗಿ ಔಟ್ ಆಫ್ ಫಾರ್ಮ್​ನಲ್ಲಿರುವ ಗ್ರೀನ್ ಅವರನ್ನೇ ಮತ್ತೆ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಆರ್​ಸಿಬಿ ಮುಂದಿದೆ.

ಏಕೆಂದರೆ ಕಳೆದ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್ ಬದಲಿಗೆ ವಿಲ್ ಜಾಕ್ಸ್ ಕಣಕ್ಕಿಳಿದಿದ್ದರು. ಇದೀಗ ಮ್ಯಾಕ್ಸ್​ವೆಲ್ ಹೊರಗುಳಿದರೆ ಅವರ ಸ್ಥಾನ ತುಂಬಬಲ್ಲ ಸಮರ್ಥ ಆಟಗಾರ ಆರ್​ಸಿಬಿ ತಂಡದಲ್ಲಿಲ್ಲ. ಹೀಗಾಗಿ ಔಟ್ ಆಫ್ ಫಾರ್ಮ್​ನಲ್ಲಿರುವ ಗ್ರೀನ್ ಅವರನ್ನೇ ಮತ್ತೆ ಕಣಕ್ಕಿಳಿಸಬೇಕಾದ ಅನಿವಾರ್ಯತೆ ಆರ್​ಸಿಬಿ ಮುಂದಿದೆ.

3 / 6
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಡಿರುವ 6 ಇನಿಂಗ್ಸ್​ಗಳಿಂದ ಮ್ಯಾಕ್ಸಿ ಕಲೆಹಾಕಿದ್ದು ಕೇವಲ 32 ರನ್​ಗಳು ಮಾತ್ರ. ಈ ಆರು ಇನಿಂಗ್ಸ್​ಗಳಲ್ಲಿ ಅವರು ಕಲೆಹಾಕಿದ ಗರಿಷ್ಠ ಸ್ಕೋರ್ 28 ರನ್​ಗಳು. ಇನ್ನುಳಿದ 5 ಇನಿಂಗ್ಸ್​ಗಳಲ್ಲಿ ಕ್ರಮವಾಗಿ 0,1,0,3,0 ಗೆ ವಿಕೆಟ್ ಒಪ್ಪಿಸಿದ್ದಾರೆ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಆಡಿರುವ 6 ಇನಿಂಗ್ಸ್​ಗಳಿಂದ ಮ್ಯಾಕ್ಸಿ ಕಲೆಹಾಕಿದ್ದು ಕೇವಲ 32 ರನ್​ಗಳು ಮಾತ್ರ. ಈ ಆರು ಇನಿಂಗ್ಸ್​ಗಳಲ್ಲಿ ಅವರು ಕಲೆಹಾಕಿದ ಗರಿಷ್ಠ ಸ್ಕೋರ್ 28 ರನ್​ಗಳು. ಇನ್ನುಳಿದ 5 ಇನಿಂಗ್ಸ್​ಗಳಲ್ಲಿ ಕ್ರಮವಾಗಿ 0,1,0,3,0 ಗೆ ವಿಕೆಟ್ ಒಪ್ಪಿಸಿದ್ದಾರೆ.

4 / 6
ಇದಾಗ್ಯೂ ನಿರ್ಣಾಯಕ ಪಂದ್ಯಗಳ ವೇಳೆ ಮ್ಯಾಕ್ಸ್​ವೆಲ್ ಫಾರ್ಮ್​ಗೆ ಮರಳುವ ನಿರೀಕ್ಷೆಯಿತ್ತು. ಆದರೀಗ ಸೋಲಿನ ಸಂಕೋಲೆಯಿಂದ ಪಾರಾಗುವ ಪ್ರಯತ್ನದಲ್ಲಿರುವ ಆರ್​ಸಿಬಿಗೆ ಮ್ಯಾಕ್ಸ್​ವೆಲ್ ಅವರ ಗಾಯವು ಹೊಸ ಚಿಂತೆಯನ್ನು ಉಂಟು ಮಾಡಿದೆ. ಒಟ್ಟಿನಲ್ಲಿ ಮೊದಲಾರ್ಧದ ಕೊನೆಯ ಪಂದ್ಯಗಳ ವೇಳೆ ಅನುಭವಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಗಾಯಗೊಂಡಿರುವುದು ಆರ್​ಸಿಬಿ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಇದಾಗ್ಯೂ ನಿರ್ಣಾಯಕ ಪಂದ್ಯಗಳ ವೇಳೆ ಮ್ಯಾಕ್ಸ್​ವೆಲ್ ಫಾರ್ಮ್​ಗೆ ಮರಳುವ ನಿರೀಕ್ಷೆಯಿತ್ತು. ಆದರೀಗ ಸೋಲಿನ ಸಂಕೋಲೆಯಿಂದ ಪಾರಾಗುವ ಪ್ರಯತ್ನದಲ್ಲಿರುವ ಆರ್​ಸಿಬಿಗೆ ಮ್ಯಾಕ್ಸ್​ವೆಲ್ ಅವರ ಗಾಯವು ಹೊಸ ಚಿಂತೆಯನ್ನು ಉಂಟು ಮಾಡಿದೆ. ಒಟ್ಟಿನಲ್ಲಿ ಮೊದಲಾರ್ಧದ ಕೊನೆಯ ಪಂದ್ಯಗಳ ವೇಳೆ ಅನುಭವಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಗಾಯಗೊಂಡಿರುವುದು ಆರ್​ಸಿಬಿ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

5 / 6
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ಲಯಕ್ಕೆ ಮರಳಲಿದೆಯಾ ಕಾದು ನೋಡಬೇಕಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ಲಯಕ್ಕೆ ಮರಳಲಿದೆಯಾ ಕಾದು ನೋಡಬೇಕಿದೆ.

6 / 6
Web contact
Web contact

TV9 Kannada

Read More
Follow Us
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ