AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಚಿಂತೆ ಹೆಚ್ಚಿಸಿದ ಗ್ಲೆನ್ ಮ್ಯಾಕ್ಸ್​ವೆಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 25ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಪರ ಗ್ಲೆನ್ ಮ್ಯಾಕ್ಸ್​ವೆಲ್ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.

TV9 Web
| Edited By: |

Updated on: Apr 08, 2024 | 12:52 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​-17 ರಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 4 ಪಂದ್ಯಗಳಲ್ಲೂ ಸೋಲನುಭವಿಸಿ ಇದೀಗ ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್​-17 ರಲ್ಲಿ ಹೊಸ ಅಧ್ಯಾಯ ಬರೆಯಲು ಹೊರಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 5 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ 4 ಪಂದ್ಯಗಳಲ್ಲೂ ಸೋಲನುಭವಿಸಿ ಇದೀಗ ಪಾಯಿಂಟ್ಸ್ ಟೇಬಲ್​ನಲ್ಲಿ 9ನೇ ಸ್ಥಾನದಲ್ಲಿದೆ.

1 / 6
ಇತ್ತ ಆರ್​ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣ ಸ್ಟಾರ್ ಆಟಗಾರರ ಕಳಪೆ ಪ್ರದರ್ಶನ. ಅದರಲ್ಲೂ ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಫ್ಲಾಪ್ ಶೋ ತೋರಿಸುತ್ತಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಇತ್ತ ಆರ್​ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣ ಸ್ಟಾರ್ ಆಟಗಾರರ ಕಳಪೆ ಪ್ರದರ್ಶನ. ಅದರಲ್ಲೂ ಬಿಗ್ ಶೋ ಖ್ಯಾತಿಯ ಗ್ಲೆನ್ ಮ್ಯಾಕ್ಸ್​ವೆಲ್ ಫ್ಲಾಪ್ ಶೋ ತೋರಿಸುತ್ತಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

2 / 6
ಏಕೆಂದರೆ ಕಳೆದ ಐದು ಪಂದ್ಯಗಳಿಂದ ಗ್ಲೆನ್ ಮ್ಯಾಕ್ಸ್​ವೆಲ್ ಕಲೆಹಾಕಿರುವುದು ಕೇವಲ 32 ರನ್​ಗಳು ಎಂದರೆ ನಂಬಲೇಬೇಕು. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಮ್ಯಾಕ್ಸಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 3 ರನ್​ಗಳು ಮಾತ್ರ.

ಏಕೆಂದರೆ ಕಳೆದ ಐದು ಪಂದ್ಯಗಳಿಂದ ಗ್ಲೆನ್ ಮ್ಯಾಕ್ಸ್​ವೆಲ್ ಕಲೆಹಾಕಿರುವುದು ಕೇವಲ 32 ರನ್​ಗಳು ಎಂದರೆ ನಂಬಲೇಬೇಕು. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಮ್ಯಾಕ್ಸಿ, ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಲೆಹಾಕಿದ್ದು ಕೇವಲ 3 ರನ್​ಗಳು ಮಾತ್ರ.

3 / 6
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಮ್ಯಾಕ್ಸ್​ವೆಲ್ ಕಲೆಹಾಕಿದ್ದು ಕೇವಲ 1 ರನ್ ಮಾತ್ರ.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 28 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನ್ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಮ್ಯಾಕ್ಸ್​ವೆಲ್ ಕಲೆಹಾಕಿದ್ದು ಕೇವಲ 1 ರನ್ ಮಾತ್ರ.

4 / 6
ಅಂದರೆ ಮೊದಲ ಐದು ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ 2 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಮತ್ತೆರಡು ಬಾರಿ ಒಂದಂಕಿ ರನ್​ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಇದುವರೆಗೆ ಕೇವಲ 6.40 ಸರಾಸರಿಯಲ್ಲಷ್ಟೇ ರನ್ ಕಲೆಹಾಕಿದ್ದಾರೆ. ಗ್ಲೆನ್ ಮ್ಯಾಕ್ಸ್​ವೆಲ್ ಅವರ ಈ ಫ್ಲಾಪ್ ಶೋ ಆರ್​ಸಿಬಿ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಿದೆ.

ಅಂದರೆ ಮೊದಲ ಐದು ಪಂದ್ಯಗಳಲ್ಲಿ ಮ್ಯಾಕ್ಸ್​ವೆಲ್ 2 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಮತ್ತೆರಡು ಬಾರಿ ಒಂದಂಕಿ ರನ್​ಗೆ ವಿಕೆಟ್ ಒಪ್ಪಿಸಿದ್ದಾರೆ. ಅಂದರೆ ಇದುವರೆಗೆ ಕೇವಲ 6.40 ಸರಾಸರಿಯಲ್ಲಷ್ಟೇ ರನ್ ಕಲೆಹಾಕಿದ್ದಾರೆ. ಗ್ಲೆನ್ ಮ್ಯಾಕ್ಸ್​ವೆಲ್ ಅವರ ಈ ಫ್ಲಾಪ್ ಶೋ ಆರ್​ಸಿಬಿ ತಂಡದ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಿದೆ.

5 / 6
ಏಕೆಂದರೆ ಇದೇ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ಸೀಸನ್​ನಲ್ಲಿ, 14 ಪಂದ್ಯಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 400 ರನ್​ಗಳು. ಈ ವೇಳೆ 5 ಅರ್ಧಶತಕಗಳನ್ನೂ ಸಹ ಬಾರಿಸಿದ್ದರು. ಆದರೆ ಈ ಬಾರಿ ಮ್ಯಾಕ್ಸ್​ವೆಲ್​ಗೆ ಮೊದಲ ಐದು ಪಂದ್ಯಗಳಿಂದ 50 ರನ್​ ಕೂಡ ಕಲೆಹಾಕಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

ಏಕೆಂದರೆ ಇದೇ ಗ್ಲೆನ್ ಮ್ಯಾಕ್ಸ್​ವೆಲ್ ಕಳೆದ ಸೀಸನ್​ನಲ್ಲಿ, 14 ಪಂದ್ಯಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 400 ರನ್​ಗಳು. ಈ ವೇಳೆ 5 ಅರ್ಧಶತಕಗಳನ್ನೂ ಸಹ ಬಾರಿಸಿದ್ದರು. ಆದರೆ ಈ ಬಾರಿ ಮ್ಯಾಕ್ಸ್​ವೆಲ್​ಗೆ ಮೊದಲ ಐದು ಪಂದ್ಯಗಳಿಂದ 50 ರನ್​ ಕೂಡ ಕಲೆಹಾಕಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ