AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಚಾನ್ಸ್​ ಕೇಳಿದ್ರೂ ಕೊಡಲಿಲ್ಲ: ಯುವರಾಜ್ ಸಿಂಗ್ ಬೇಸರ..!

Yuvraj Singh: ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​, ಪುಣೆ ವಾರಿಯರ್ಸ್​, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್​ ಪರ ಒಟ್ಟು 132 ಪಂದ್ಯಗಳನ್ನಾಡಿಯುವ ಯುವರಾಜ್ ಸಿಂಗ್ 2750 ರನ್ಸ್​ ಹಾಗೂ 36 ವಿಕೆಟ್​ಗಳನ್ನು ಪಡೆದಿದ್ದಾರೆ.

TV9 Web
| Edited By: |

Updated on:Jan 16, 2024 | 1:31 PM

Share
ಟಿ20 ಕ್ರಿಕೆಟ್​ನ ಸ್ಪೆಷಲಿಸ್ಟ್​, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ (Yuvraj Singh) ಐಪಿಎಲ್​ಗೆ ಮರಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಖಂಡಿತವಾಗಿಯೂ ಇಲ್ಲ. ಏಕೆಂದರೆ ಯುವಿ ಈಗಾಗಲೇ ಐಪಿಎಲ್​ಗೆ ನಿವೃತ್ತಿ ಘೋಷಿಸಿ ಎನ್​ಒಸಿ ಪಡೆದಿದ್ದಾರೆ. ಹೀಗಾಗಿ ಐಪಿಎಲ್​ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್​ಗೆ ಅವಕಾಶವಿಲ್ಲ.

ಟಿ20 ಕ್ರಿಕೆಟ್​ನ ಸ್ಪೆಷಲಿಸ್ಟ್​, ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ (Yuvraj Singh) ಐಪಿಎಲ್​ಗೆ ಮರಳಲಿದ್ದಾರಾ? ಈ ಪ್ರಶ್ನೆಗೆ ಉತ್ತರ ಖಂಡಿತವಾಗಿಯೂ ಇಲ್ಲ. ಏಕೆಂದರೆ ಯುವಿ ಈಗಾಗಲೇ ಐಪಿಎಲ್​ಗೆ ನಿವೃತ್ತಿ ಘೋಷಿಸಿ ಎನ್​ಒಸಿ ಪಡೆದಿದ್ದಾರೆ. ಹೀಗಾಗಿ ಐಪಿಎಲ್​ನಲ್ಲಿ ಆಟಗಾರನಾಗಿ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್​ಗೆ ಅವಕಾಶವಿಲ್ಲ.

1 / 6
ಇದಾಗ್ಯೂ ಐಪಿಎಲ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್ ಬಯಸಿದ್ದಾರೆ. ಅಂದರೆ ಯಾವುದಾದರೂ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲು ಇಚ್ಛಿಸಿದ್ದಾರೆ. ಇದಕ್ಕಾಗಿ ತೆರೆಮರೆಯಲ್ಲೇ ಪ್ರಯತ್ನವನ್ನೂ ಕೂಡ ನಡೆಸಿದ್ದಾರೆ. ಆದರೆ ಪ್ರತಿಫಲ ಮಾತ್ರ ಶೂನ್ಯ.

ಇದಾಗ್ಯೂ ಐಪಿಎಲ್​ನಲ್ಲಿ ಹೊಸ ಜವಾಬ್ದಾರಿಯೊಂದಿಗೆ ಕಾಣಿಸಿಕೊಳ್ಳಲು ಯುವರಾಜ್ ಸಿಂಗ್ ಬಯಸಿದ್ದಾರೆ. ಅಂದರೆ ಯಾವುದಾದರೂ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲು ಇಚ್ಛಿಸಿದ್ದಾರೆ. ಇದಕ್ಕಾಗಿ ತೆರೆಮರೆಯಲ್ಲೇ ಪ್ರಯತ್ನವನ್ನೂ ಕೂಡ ನಡೆಸಿದ್ದಾರೆ. ಆದರೆ ಪ್ರತಿಫಲ ಮಾತ್ರ ಶೂನ್ಯ.

2 / 6
ಇದನ್ನು ಖುದ್ದು ಯುವರಾಜ್ ಸಿಂಗ್ ಅವರೇ ಹೇಳಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್​ ತಂಡದಲ್ಲಿನ ಕೆಲಸಕ್ಕಾಗಿ ನಾನು ಕೋಚ್ ಆಶಿಶ್ ನೆಹ್ರಾ ಅವರನ್ನು ಸಂಪರ್ಕಿಸಿದ್ದೆ. ಆದರೆ ಅವರು ಅದನ್ನು ನಿರಾಕರಿಸಿದರು. ಹೀಗಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಲು ಸಾಧ್ಯವಾಗಿಲ್ಲ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.

ಇದನ್ನು ಖುದ್ದು ಯುವರಾಜ್ ಸಿಂಗ್ ಅವರೇ ಹೇಳಿಕೊಂಡಿದ್ದಾರೆ. ಗುಜರಾತ್ ಟೈಟಾನ್ಸ್​ ತಂಡದಲ್ಲಿನ ಕೆಲಸಕ್ಕಾಗಿ ನಾನು ಕೋಚ್ ಆಶಿಶ್ ನೆಹ್ರಾ ಅವರನ್ನು ಸಂಪರ್ಕಿಸಿದ್ದೆ. ಆದರೆ ಅವರು ಅದನ್ನು ನಿರಾಕರಿಸಿದರು. ಹೀಗಾಗಿ ಐಪಿಎಲ್​ನಲ್ಲಿ ಹೊಸ ಇನಿಂಗ್ಸ್​ ಆರಂಭಿಸಲು ಸಾಧ್ಯವಾಗಿಲ್ಲ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.

3 / 6
ಇದೀಗ ನನ್ನ ಆದ್ಯತೆ ನನ್ನ ಮಕ್ಕಳು. ಅವರು ಶಾಲೆಗೆ ಹೋಗಲು ಶುರು ಮಾಡಿದಾಗ ನನಗೆ ಹೆಚ್ಚಿನ ಸಮಯ ದೊರೆಯಲಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ನಾನು ಮತ್ತೆ ಕ್ರಿಕೆಟ್​ಗೆ ಹಿಂತಿರುಗಲಿದ್ದೇನೆ. ವಿಶೇಷವಾಗಿ ನನ್ನ ರಾಜ್ಯದ ಹುಡುಗರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಅವರಿಗೆ ಮಾರ್ಗದರ್ಶನ ನೀಡಿ ಅತ್ಯುತ್ತಮ ಕ್ರಿಕೆಟಿಗರನ್ನಾಗಿಸುವುದು ನನ್ನ ಮುಂದಿರುವ ಗುರಿ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ಇದೀಗ ನನ್ನ ಆದ್ಯತೆ ನನ್ನ ಮಕ್ಕಳು. ಅವರು ಶಾಲೆಗೆ ಹೋಗಲು ಶುರು ಮಾಡಿದಾಗ ನನಗೆ ಹೆಚ್ಚಿನ ಸಮಯ ದೊರೆಯಲಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ನಾನು ಮತ್ತೆ ಕ್ರಿಕೆಟ್​ಗೆ ಹಿಂತಿರುಗಲಿದ್ದೇನೆ. ವಿಶೇಷವಾಗಿ ನನ್ನ ರಾಜ್ಯದ ಹುಡುಗರೊಂದಿಗೆ ಕೆಲಸ ಮಾಡಲು ಇಷ್ಟಪಡುತ್ತೇನೆ. ಅವರಿಗೆ ಮಾರ್ಗದರ್ಶನ ನೀಡಿ ಅತ್ಯುತ್ತಮ ಕ್ರಿಕೆಟಿಗರನ್ನಾಗಿಸುವುದು ನನ್ನ ಮುಂದಿರುವ ಗುರಿ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

4 / 6
ಐಪಿಎಲ್​ ತಂಡಗಳ ಪರ ಕೂಡ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮೆಂಟರ್ ಸ್ಥಾನದಲ್ಲೂ ನಾನು ಕಾಣಿಸಿಕೊಳ್ಳಬಹುದು ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ. ಹೀಗಾಗಿ ಸಿಕ್ಸರ್ ಕಿಂಗ್ ಹೊಸ ಜವಾಬ್ದಾರಿಯೊಂದಿಗೆ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಐಪಿಎಲ್​ ತಂಡಗಳ ಪರ ಕೂಡ ಕೆಲಸ ಮಾಡುವುದನ್ನು ಎದುರು ನೋಡುತ್ತಿದ್ದೇನೆ. ಹೀಗಾಗಿ ಮುಂಬರುವ ದಿನಗಳಲ್ಲಿ ಮೆಂಟರ್ ಸ್ಥಾನದಲ್ಲೂ ನಾನು ಕಾಣಿಸಿಕೊಳ್ಳಬಹುದು ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ. ಹೀಗಾಗಿ ಸಿಕ್ಸರ್ ಕಿಂಗ್ ಹೊಸ ಜವಾಬ್ದಾರಿಯೊಂದಿಗೆ ಮತ್ತೆ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 6
ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​, ಪುಣೆ ವಾರಿಯರ್ಸ್​, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್​ ಪರ ಒಟ್ಟು 132	 ಪಂದ್ಯಗಳನ್ನಾಡಿಯುವ ಯುವರಾಜ್ ಸಿಂಗ್ 2750 ರನ್ಸ್​ ಹಾಗೂ 36 ವಿಕೆಟ್​ಗಳನ್ನು ಪಡೆದಿದ್ದಾರೆ.

ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​, ಪುಣೆ ವಾರಿಯರ್ಸ್​, ರಾಯಲ್ ಚಾಲೆಂಜರ್ಸ್​ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಸನ್​ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ಇಂಡಿಯನ್ಸ್​ ಪರ ಒಟ್ಟು 132 ಪಂದ್ಯಗಳನ್ನಾಡಿಯುವ ಯುವರಾಜ್ ಸಿಂಗ್ 2750 ರನ್ಸ್​ ಹಾಗೂ 36 ವಿಕೆಟ್​ಗಳನ್ನು ಪಡೆದಿದ್ದಾರೆ.

6 / 6

Published On - 1:30 pm, Tue, 16 January 24

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್