AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ಗೆ ಹಾರ್ದಿಕ್ ಪಾಂಡ್ಯ ಡೌಟ್..!

IPL 2024 Hardik Pandya: ಹಾರ್ದಿಕ್ ಪಾಂಡ್ಯ ಐಪಿಎಲ್​​ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.

TV9 Web
| Edited By: |

Updated on: Dec 23, 2023 | 3:04 PM

Share
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್-17 ರಲ್ಲಿ ಕಣಕ್ಕಿಳಿಯುವುದು ಅನುಮಾನ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್​ ಸಾಧಿಸುವುದು ಕಷ್ಟಕರ. ಹೀಗಾಗಿ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್-17 ರಲ್ಲಿ ಕಣಕ್ಕಿಳಿಯುವುದು ಅನುಮಾನ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್​ ಸಾಧಿಸುವುದು ಕಷ್ಟಕರ. ಹೀಗಾಗಿ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 8
ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್​ನಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಅವರ ಕಾಣಿಸಿಕೊಂಡಿರಲಿಲ್ಲ.

ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್​ನಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಅವರ ಕಾಣಿಸಿಕೊಂಡಿರಲಿಲ್ಲ.

2 / 8
ಇದೀಗ ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದೀಗ ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

3 / 8
ಹಾರ್ದಿಕ್ ಪಾಂಡ್ಯ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡರಿಂದ ಮೂರು ತಿಂಗಳು ತೆಗೆದುಕೊಂಡರೆ, ಐಪಿಎಲ್​ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಐಪಿಎಲ್​ಗೆ ಮರಳಬೇಕಿದ್ದರೆ ಪಾಂಡ್ಯ ಫಿಟ್​ನೆಸ್ ಟೆಸ್ಟ್​​ ಪಾಸಾಗಲೇಬೇಕು. ಹಾಗಾಗಿ ಹಾರ್ದಿಕ್ ಪಾಂಡ್ಯ ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.

ಹಾರ್ದಿಕ್ ಪಾಂಡ್ಯ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡರಿಂದ ಮೂರು ತಿಂಗಳು ತೆಗೆದುಕೊಂಡರೆ, ಐಪಿಎಲ್​ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಐಪಿಎಲ್​ಗೆ ಮರಳಬೇಕಿದ್ದರೆ ಪಾಂಡ್ಯ ಫಿಟ್​ನೆಸ್ ಟೆಸ್ಟ್​​ ಪಾಸಾಗಲೇಬೇಕು. ಹಾಗಾಗಿ ಹಾರ್ದಿಕ್ ಪಾಂಡ್ಯ ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.

4 / 8
ಇನ್ನು ಹಾರ್ದಿಕ್ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮೊದಲು ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಹೀಗಾಗಿ ಐಪಿಎಲ್​ನಿಂದ ಪಾಂಡ್ಯ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

ಇನ್ನು ಹಾರ್ದಿಕ್ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮೊದಲು ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಹೀಗಾಗಿ ಐಪಿಎಲ್​ನಿಂದ ಪಾಂಡ್ಯ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

5 / 8
ಇತ್ತ ಹಾರ್ದಿಕ್ ಪಾಂಡ್ಯ ಐಪಿಎಲ್​​ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.

ಇತ್ತ ಹಾರ್ದಿಕ್ ಪಾಂಡ್ಯ ಐಪಿಎಲ್​​ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.

6 / 8
ಇದೀಗ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಮತ್ತೆ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ. ಆದರೆ ಒಂದು ಬಾರಿ ಕಪ್ತಾನನ ಸ್ಥಾನದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್​ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.

ಇದೀಗ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಮತ್ತೆ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ. ಆದರೆ ಒಂದು ಬಾರಿ ಕಪ್ತಾನನ ಸ್ಥಾನದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್​ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.

7 / 8
ಮುಂಬೈ ಇಂಡಿಯನ್ಸ್​: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

ಮುಂಬೈ ಇಂಡಿಯನ್ಸ್​: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

8 / 8
Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ