AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ಗೆ ಹಾರ್ದಿಕ್ ಪಾಂಡ್ಯ ಡೌಟ್..!

IPL 2024 Hardik Pandya: ಹಾರ್ದಿಕ್ ಪಾಂಡ್ಯ ಐಪಿಎಲ್​​ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.

TV9 Web
| Edited By: |

Updated on: Dec 23, 2023 | 3:04 PM

Share
ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್-17 ರಲ್ಲಿ ಕಣಕ್ಕಿಳಿಯುವುದು ಅನುಮಾನ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್​ ಸಾಧಿಸುವುದು ಕಷ್ಟಕರ. ಹೀಗಾಗಿ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ಸೀಸನ್-17 ರಲ್ಲಿ ಕಣಕ್ಕಿಳಿಯುವುದು ಅನುಮಾನ. ಪಾದದ ಗಾಯದಿಂದ ಬಳಲುತ್ತಿರುವ ಅವರು ಐಪಿಎಲ್ ಆರಂಭದ ವೇಳೆಗೆ ಫಿಟ್​ ಸಾಧಿಸುವುದು ಕಷ್ಟಕರ. ಹೀಗಾಗಿ ಐಪಿಎಲ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 8
ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್​ನಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಅವರ ಕಾಣಿಸಿಕೊಂಡಿರಲಿಲ್ಲ.

ಏಕದಿನ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಈ ಗಾಯವು ಗಂಭೀರವಾಗಿದ್ದ ಕಾರಣ ಅವರು ವಿಶ್ವಕಪ್​ನಿಂದ ಹೊರಗುಳಿದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಗಳಲ್ಲೂ ಅವರ ಕಾಣಿಸಿಕೊಂಡಿರಲಿಲ್ಲ.

2 / 8
ಇದೀಗ ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದೀಗ ಅಫ್ಘಾನಿಸ್ತಾನ್ ವಿರುದ್ಧ ನಡೆಯಲಿರುವ ಟಿ20 ಸರಣಿಯಿಂದಲೂ ಹಾರ್ದಿಕ್ ಪಾಂಡ್ಯ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು 2 ರಿಂದ 3 ತಿಂಗಳು ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

3 / 8
ಹಾರ್ದಿಕ್ ಪಾಂಡ್ಯ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡರಿಂದ ಮೂರು ತಿಂಗಳು ತೆಗೆದುಕೊಂಡರೆ, ಐಪಿಎಲ್​ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಐಪಿಎಲ್​ಗೆ ಮರಳಬೇಕಿದ್ದರೆ ಪಾಂಡ್ಯ ಫಿಟ್​ನೆಸ್ ಟೆಸ್ಟ್​​ ಪಾಸಾಗಲೇಬೇಕು. ಹಾಗಾಗಿ ಹಾರ್ದಿಕ್ ಪಾಂಡ್ಯ ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.

ಹಾರ್ದಿಕ್ ಪಾಂಡ್ಯ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಎರಡರಿಂದ ಮೂರು ತಿಂಗಳು ತೆಗೆದುಕೊಂಡರೆ, ಐಪಿಎಲ್​ನಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು. ಏಕೆಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಐಪಿಎಲ್​ಗೆ ಮರಳಬೇಕಿದ್ದರೆ ಪಾಂಡ್ಯ ಫಿಟ್​ನೆಸ್ ಟೆಸ್ಟ್​​ ಪಾಸಾಗಲೇಬೇಕು. ಹಾಗಾಗಿ ಹಾರ್ದಿಕ್ ಪಾಂಡ್ಯ ಹೆಚ್ಚಿನ ರಿಸ್ಕ್​ ತೆಗೆದುಕೊಳ್ಳುವ ಸಾಧ್ಯತೆಯಿಲ್ಲ.

4 / 8
ಇನ್ನು ಹಾರ್ದಿಕ್ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮೊದಲು ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಹೀಗಾಗಿ ಐಪಿಎಲ್​ನಿಂದ ಪಾಂಡ್ಯ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

ಇನ್ನು ಹಾರ್ದಿಕ್ ಮರಳುವ ಕುರಿತು ಯಾವುದೇ ಮಾಹಿತಿ ಇಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮೊದಲು ಅವರ ಲಭ್ಯತೆಯ ಬಗ್ಗೆ ದೊಡ್ಡ ಪ್ರಶ್ನಾರ್ಥಕ ಚಿಹ್ನೆ ಇದೆ ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದೆ. ಹೀಗಾಗಿ ಐಪಿಎಲ್​ನಿಂದ ಪಾಂಡ್ಯ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

5 / 8
ಇತ್ತ ಹಾರ್ದಿಕ್ ಪಾಂಡ್ಯ ಐಪಿಎಲ್​​ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.

ಇತ್ತ ಹಾರ್ದಿಕ್ ಪಾಂಡ್ಯ ಐಪಿಎಲ್​​ನಿಂದ ಹೊರಗುಳಿದರೆ ಮುಂಬೈ ಇಂಡಿಯನ್ಸ್ ತಂಡವನ್ನು ರೋಹಿತ್ ಶರ್ಮಾ ಅವರೇ ಮುನ್ನಡೆಸಬೇಕಾಗುತ್ತದೆ. ಏಕೆಂದರೆ ಇತ್ತೀಚಗಷ್ಟೇ ಹಿಟ್​ಮ್ಯಾನ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​​ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿತ್ತು.

6 / 8
ಇದೀಗ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಮತ್ತೆ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ. ಆದರೆ ಒಂದು ಬಾರಿ ಕಪ್ತಾನನ ಸ್ಥಾನದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್​ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.

ಇದೀಗ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ ಮತ್ತೆ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆ ಹೆಚ್ಚಿದೆ. ಆದರೆ ಒಂದು ಬಾರಿ ಕಪ್ತಾನನ ಸ್ಥಾನದಿಂದ ಕೆಳಗಿಳಿದಿರುವ ರೋಹಿತ್ ಶರ್ಮಾ ಮತ್ತೆ ಮುಂಬೈ ಇಂಡಿಯನ್ಸ್​ ತಂಡವನ್ನು ಮುನ್ನಡೆಸಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.

7 / 8
ಮುಂಬೈ ಇಂಡಿಯನ್ಸ್​: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

ಮುಂಬೈ ಇಂಡಿಯನ್ಸ್​: ಹಾರ್ದಿಕ್ ಪಾಂಡ್ಯ (ನಾಯಕ) ರೋಹಿತ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಎನ್. ತಿಲಕ್ ವರ್ಮಾ, ಟಿಮ್ ಡೇವಿಡ್, ವಿಷ್ಣು ವಿನೋದ್, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಜಸ್ಪ್ರೀತ್ ಬುಮ್ರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಜೇಸನ್ ಬೆಹ್ರೆಂಡಾರ್ಫ್ ,ರೊಮಾರಿಯೋ ಶೆಫರ್ಡ್, ರೊಮಾರಿಯೋ ಶೆಫರ್ಡ್. ಜೆರಾಲ್ಡ್ ಕೋಟ್ಝಿ , ದಿಲ್ಶನ್ ಮಧುಶಂಕ , ಶ್ರೇಯಸ್ ಗೋಪಾಲ್ , ನುವಾನ್ ತುಷಾರ , ನಮನ್ ಧೀರ್ , ಅನ್ಶುಲ್ ಕಾಂಬೋಜ್ , ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ.

8 / 8
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ