AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹೋಗಿ ಬೌಂಡರಿ ಲೈನ್​ನಲ್ಲಿ ನಿಲ್ಲು: ನಾನಾ? ಹೌದು, ನೀನೇ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಐದನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಗುಜರಾತ್ ಟೈಟಾನ್ಸ್ ತಂಡ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 168 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 162 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಗುಜರಾತ್ ಟೈಟಾನ್ಸ್ ತಂಡವು 6 ರನ್​ಗಳ ಜಯ ಸಾಧಿಸಿದೆ.

TV9 Web
| Edited By: |

Updated on: Mar 25, 2024 | 6:55 AM

Share
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 5ನೇ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಂಡ್ಯ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 5ನೇ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಂಡ್ಯ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು.

1 / 6
ಅದರಂತೆ ಚೆಂಡನ್ನು ಕೈಗೆತ್ತಿಕೊಂಡ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಎಸೆಯುವ ಮೂಲಕ ಗಮನ ಸೆಳೆದರು. ಅಷ್ಟೇ ಅಲ್ಲದೆ ಬೌಲಿಂಗ್ ಲೈನಪ್ ಮತ್ತು ಫೀಲ್ಡಿಂಗ್​ನಲ್ಲೂ ಹಲವು ಪ್ರಯೋಗಗಳನ್ನು ಮಾಡಿದರು. ಈ ಪ್ರಯೋಗಗಳ ಮೂಲಕ ರೋಹಿತ್ ಶರ್ಮಾರನ್ನು ಬೌಂಡರಿ ಲೈನ್​ಗೆ ಕಳುಹಿಸಿದರು.

ಅದರಂತೆ ಚೆಂಡನ್ನು ಕೈಗೆತ್ತಿಕೊಂಡ ಹಾರ್ದಿಕ್ ಪಾಂಡ್ಯ ಮೊದಲ ಓವರ್ ಎಸೆಯುವ ಮೂಲಕ ಗಮನ ಸೆಳೆದರು. ಅಷ್ಟೇ ಅಲ್ಲದೆ ಬೌಲಿಂಗ್ ಲೈನಪ್ ಮತ್ತು ಫೀಲ್ಡಿಂಗ್​ನಲ್ಲೂ ಹಲವು ಪ್ರಯೋಗಗಳನ್ನು ಮಾಡಿದರು. ಈ ಪ್ರಯೋಗಗಳ ಮೂಲಕ ರೋಹಿತ್ ಶರ್ಮಾರನ್ನು ಬೌಂಡರಿ ಲೈನ್​ಗೆ ಕಳುಹಿಸಿದರು.

2 / 6
ಹೌದು, ಪವರ್​ಪ್ಲೇ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ಅವರನ್ನು ಹಾರ್ದಿಕ್ ಪಾಂಡ್ಯ ಬೌಂಡರಿ ಲೈನ್​ನತ್ತ ಕಳುಹಿಸಿದರು. ಸಾಮಾನ್ಯವಾಗಿ ಹಿಟ್​ಮ್ಯಾನ್ ಸ್ಲಿಪ್ ಹಾಗೂ ಫ್ರಂಟ್​ ಫೀಲ್ಡಿಂಗ್​ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಆದರೆ ಪಾಂಡ್ಯ ಮಾತ್ರ ರೋಹಿತ್​ರನ್ನು ಲಾಂಗ್ ಆನ್​ನತ್ತ ನಿಲ್ಲಿಸಿ ಅಚ್ಚರಿ ಮೂಡಿಸಿದರು.

ಹೌದು, ಪವರ್​ಪ್ಲೇ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ಅವರನ್ನು ಹಾರ್ದಿಕ್ ಪಾಂಡ್ಯ ಬೌಂಡರಿ ಲೈನ್​ನತ್ತ ಕಳುಹಿಸಿದರು. ಸಾಮಾನ್ಯವಾಗಿ ಹಿಟ್​ಮ್ಯಾನ್ ಸ್ಲಿಪ್ ಹಾಗೂ ಫ್ರಂಟ್​ ಫೀಲ್ಡಿಂಗ್​ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಆದರೆ ಪಾಂಡ್ಯ ಮಾತ್ರ ರೋಹಿತ್​ರನ್ನು ಲಾಂಗ್ ಆನ್​ನತ್ತ ನಿಲ್ಲಿಸಿ ಅಚ್ಚರಿ ಮೂಡಿಸಿದರು.

3 / 6
ಇದಾದ ಬಳಿಕ ಕೂಡ ಹಲವು ಬಾರಿ ರೋಹಿತ್ ಶರ್ಮಾ ಅವರ ಫೀಲ್ಡಿಂಗ್​ ಬದಲಿಸಿದರು. ಒಮ್ಮೆ ಸ್ಲಿಪ್, ಮತ್ತೊಮ್ಮೆ ಲಾಂಗ್ ಆನ್​, ಇನ್ನೊಮ್ಮೆ ಲೆಗ್​ ಸೈಡ್, ಮಗದೊಮ್ಮೆ ಮಿಡ್ ವಿಕೆಟ್​ನತ್ತ ನಿಲ್ಲಿಸಿದರು. ಹೀಗೆ ರೋಹಿತ್ ಶರ್ಮಾ ಅವರನ್ನು ಮೈದಾನದ ಮೂಲೆ ಮೂಲೆಯಲ್ಲಿ ನಿಲ್ಲುವಂತೆ ಮಾಡಿದರು.

ಇದಾದ ಬಳಿಕ ಕೂಡ ಹಲವು ಬಾರಿ ರೋಹಿತ್ ಶರ್ಮಾ ಅವರ ಫೀಲ್ಡಿಂಗ್​ ಬದಲಿಸಿದರು. ಒಮ್ಮೆ ಸ್ಲಿಪ್, ಮತ್ತೊಮ್ಮೆ ಲಾಂಗ್ ಆನ್​, ಇನ್ನೊಮ್ಮೆ ಲೆಗ್​ ಸೈಡ್, ಮಗದೊಮ್ಮೆ ಮಿಡ್ ವಿಕೆಟ್​ನತ್ತ ನಿಲ್ಲಿಸಿದರು. ಹೀಗೆ ರೋಹಿತ್ ಶರ್ಮಾ ಅವರನ್ನು ಮೈದಾನದ ಮೂಲೆ ಮೂಲೆಯಲ್ಲಿ ನಿಲ್ಲುವಂತೆ ಮಾಡಿದರು.

4 / 6
ಅದರಲ್ಲೂ ಅಂತಿಮ ಓವರ್​ಗಳ ವೇಳೆ 30 ಯಾರ್ಡ್​ ಸರ್ಕಲ್​ನಿಂದ ಮತ್ತೊಮ್ಮೆ ಮುಂಬೈ ತಂಡದ ಮಾಜಿ ನಾಯಕನನ್ನು ಲಾಂಗ್ ಆನ್​ನತ್ತ ಕಳುಹಿಸಿದರು. ಲಾಂಗ್​ ಆನ್​ನತ್ತ ತೆರಳುವಂತೆ ರೋಹಿತ್ ಶರ್ಮಾಗೆ ಸೂಚಿಸಿದಾಗ, ಗೊಂದಲದಿಂದ ನಾನಾ ಎಂದು ಕೇಳುತ್ತಿರುವುದು ಕೂಡ ಕಂಡು ಬಂತು. ಹೌದು ನೀನೇ, ಬೌಂಡರಿ ಲೈನ್​ನತ್ತ ಹೋಗು ಎಂದು ಹಾರ್ದಿಕ್ ಪಾಂಡ್ಯ ಕೈಸನ್ನೆ ಮಾಡಿದರು.

ಅದರಲ್ಲೂ ಅಂತಿಮ ಓವರ್​ಗಳ ವೇಳೆ 30 ಯಾರ್ಡ್​ ಸರ್ಕಲ್​ನಿಂದ ಮತ್ತೊಮ್ಮೆ ಮುಂಬೈ ತಂಡದ ಮಾಜಿ ನಾಯಕನನ್ನು ಲಾಂಗ್ ಆನ್​ನತ್ತ ಕಳುಹಿಸಿದರು. ಲಾಂಗ್​ ಆನ್​ನತ್ತ ತೆರಳುವಂತೆ ರೋಹಿತ್ ಶರ್ಮಾಗೆ ಸೂಚಿಸಿದಾಗ, ಗೊಂದಲದಿಂದ ನಾನಾ ಎಂದು ಕೇಳುತ್ತಿರುವುದು ಕೂಡ ಕಂಡು ಬಂತು. ಹೌದು ನೀನೇ, ಬೌಂಡರಿ ಲೈನ್​ನತ್ತ ಹೋಗು ಎಂದು ಹಾರ್ದಿಕ್ ಪಾಂಡ್ಯ ಕೈಸನ್ನೆ ಮಾಡಿದರು.

5 / 6
ಸಾಮಾನ್ಯವಾಗಿ ರೋಹಿತ್ ಶರ್ಮಾ ಮುಂಭಾಗದಲ್ಲಿ ಫೀಲ್ಡಿಂಗ್ ಮಾಡುವುದು ವಾಡಿಕೆ. ಅದರಲ್ಲೂ ಹಿರಿಯ ಆಟಗಾರನಾಗಿರುವ ಕಾರಣ ಬೌಂಡರಿ ಲೈನ್​ನಲ್ಲಿ ಚುರುಕಾಗಿ ಫೀಲ್ಡಿಂಗ್ ಮಾಡುವುದು ಕಷ್ಟ. ಇದಾಗ್ಯೂ ಹಾರ್ದಿಕ್ ಪಾಂಡ್ಯ, ಯುವ ಆಟಗಾರರನ್ನು ಫ್ರಂಟ್ ಫೀಲ್ಡಿಂಗ್​ನಲ್ಲಿ ನಿಲ್ಲಿಸಿ ರೋಹಿತ್ ಶರ್ಮಾ ಅವರನ್ನೇ ಬೌಂಡರಿ ಲೈನ್​ಗೆ ಕಳುಹಿಸಿ ಅಚ್ಚರಿ ಮೂಡಿಸಿದರು.

ಸಾಮಾನ್ಯವಾಗಿ ರೋಹಿತ್ ಶರ್ಮಾ ಮುಂಭಾಗದಲ್ಲಿ ಫೀಲ್ಡಿಂಗ್ ಮಾಡುವುದು ವಾಡಿಕೆ. ಅದರಲ್ಲೂ ಹಿರಿಯ ಆಟಗಾರನಾಗಿರುವ ಕಾರಣ ಬೌಂಡರಿ ಲೈನ್​ನಲ್ಲಿ ಚುರುಕಾಗಿ ಫೀಲ್ಡಿಂಗ್ ಮಾಡುವುದು ಕಷ್ಟ. ಇದಾಗ್ಯೂ ಹಾರ್ದಿಕ್ ಪಾಂಡ್ಯ, ಯುವ ಆಟಗಾರರನ್ನು ಫ್ರಂಟ್ ಫೀಲ್ಡಿಂಗ್​ನಲ್ಲಿ ನಿಲ್ಲಿಸಿ ರೋಹಿತ್ ಶರ್ಮಾ ಅವರನ್ನೇ ಬೌಂಡರಿ ಲೈನ್​ಗೆ ಕಳುಹಿಸಿ ಅಚ್ಚರಿ ಮೂಡಿಸಿದರು.

6 / 6
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ