AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಜೊತೆ ನಾಯಕತ್ವದ ಬಗ್ಗೆ ಒಮ್ಮೆಯೂ ಚರ್ಚಿಸದ ಹಾರ್ದಿಕ್ ಪಾಂಡ್ಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಐಪಿಎಲ್​ನ ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಹಾಗೆಯೇ ಮಾರ್ಚ್ 24 ರಂದು ನಡೆಯುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯಲಿದ್ದಾರೆ.

TV9 Web
| Edited By: |

Updated on:Mar 19, 2024 | 11:26 AM

Share
ಬರೋಬ್ಬರಿ 10 ಸೀಸನ್​ಗಳ ಬಳಿಕ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕತ್ವ ಬದಲಾಗಿದೆ. ರೋಹಿತ್ ಶರ್ಮಾ ಇದ್ದ ಜಾಗಕ್ಕೆ ಹಾರ್ದಿಕ್ ಪಾಂಡ್ಯ ನೇಮಕವಾಗಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಪಾಂಡ್ಯರನ್ನು ಈ ಬಾರಿಯ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು.

ಬರೋಬ್ಬರಿ 10 ಸೀಸನ್​ಗಳ ಬಳಿಕ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕತ್ವ ಬದಲಾಗಿದೆ. ರೋಹಿತ್ ಶರ್ಮಾ ಇದ್ದ ಜಾಗಕ್ಕೆ ಹಾರ್ದಿಕ್ ಪಾಂಡ್ಯ ನೇಮಕವಾಗಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಪಾಂಡ್ಯರನ್ನು ಈ ಬಾರಿಯ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು.

1 / 6
ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದಾರೆ.

ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದಾರೆ.

2 / 6
ಇದಕ್ಕೂ ಮುನ್ನ ನಡೆದ ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಈ ವೇಳೆ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ ಬಗ್ಗೆ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಕೇಳಲಾಗಿದೆ.

ಇದಕ್ಕೂ ಮುನ್ನ ನಡೆದ ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಈ ವೇಳೆ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ ಬಗ್ಗೆ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಕೇಳಲಾಗಿದೆ.

3 / 6
ಈ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಹಾರ್ದಿಕ್ ಪಾಂಡ್ಯ, ಎಸ್​ ಅ್ಯಂಡ್ ನೋ ಎಂದರು. ಮಾತು ಮುಂದುವರೆಸಿ, ನಾವೆಲ್ಲರೂ ವೃತ್ತಿಪರ ಆಟಗಾರರು. ರೋಹಿತ್ ಶರ್ಮಾ ಕೂಡ ಕೆಲ ಸರಣಿಗಳಲ್ಲಿ ಆಡುತ್ತಿದ್ದರು. ನಾವು ಪ್ರತಿಯೊಬ್ಬರನ್ನು ಭೇಟಿಯಾಗದೇ ಒಂದೆರಡು ತಿಂಗಳುಗಳೇ ಕಳೆದಿವೆ ಎಂದರು. ಈ ಮೂಲಕ ರೋಹಿತ್ ಶರ್ಮಾ ಜೊತೆ ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂಬುದನ್ನು ಹಾರ್ದಿಕ್ ಪಾಂಡ್ಯ ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಹಾರ್ದಿಕ್ ಪಾಂಡ್ಯ, ಎಸ್​ ಅ್ಯಂಡ್ ನೋ ಎಂದರು. ಮಾತು ಮುಂದುವರೆಸಿ, ನಾವೆಲ್ಲರೂ ವೃತ್ತಿಪರ ಆಟಗಾರರು. ರೋಹಿತ್ ಶರ್ಮಾ ಕೂಡ ಕೆಲ ಸರಣಿಗಳಲ್ಲಿ ಆಡುತ್ತಿದ್ದರು. ನಾವು ಪ್ರತಿಯೊಬ್ಬರನ್ನು ಭೇಟಿಯಾಗದೇ ಒಂದೆರಡು ತಿಂಗಳುಗಳೇ ಕಳೆದಿವೆ ಎಂದರು. ಈ ಮೂಲಕ ರೋಹಿತ್ ಶರ್ಮಾ ಜೊತೆ ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂಬುದನ್ನು ಹಾರ್ದಿಕ್ ಪಾಂಡ್ಯ ಪರೋಕ್ಷವಾಗಿ ತಿಳಿಸಿದ್ದಾರೆ.

4 / 6
ಅಲ್ಲದೆ ರೋಹಿತ್ ಶರ್ಮಾ ಐಪಿಎಲ್​ಗೆ ಆಗಮಿಸಿದಾಗ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಇತ್ತ ಪಾಂಡ್ಯ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಹಿಟ್​ಮ್ಯಾನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೆ ರೋಹಿತ್ ಶರ್ಮಾ ಐಪಿಎಲ್​ಗೆ ಆಗಮಿಸಿದಾಗ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಇತ್ತ ಪಾಂಡ್ಯ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಹಿಟ್​ಮ್ಯಾನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

5 / 6
2015 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ನೀವು ಪಾದಾರ್ಪಣೆ ಮಾಡಿದ್ದೀರಿ. ಹಿಟ್​ಮ್ಯಾನ್ ಕ್ಯಾಪ್ಟನ್ಸಿ ಅಡಿಯಲ್ಲಿ 7 ಸೀಸನ್ ಆಡಿದ್ದೀರಿ. ಇದಾಗ್ಯೂ ಸೌಜನ್ಯಕ್ಕಾದರೂ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುತ್ತಿರುವ ​ಬಗ್ಗೆ ರೋಹಿತ್ ಶರ್ಮಾ ಜೊತೆ ಚರ್ಚಿಸದಿರುವುದು ನಿಮ್ಮ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2015 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ನೀವು ಪಾದಾರ್ಪಣೆ ಮಾಡಿದ್ದೀರಿ. ಹಿಟ್​ಮ್ಯಾನ್ ಕ್ಯಾಪ್ಟನ್ಸಿ ಅಡಿಯಲ್ಲಿ 7 ಸೀಸನ್ ಆಡಿದ್ದೀರಿ. ಇದಾಗ್ಯೂ ಸೌಜನ್ಯಕ್ಕಾದರೂ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುತ್ತಿರುವ ​ಬಗ್ಗೆ ರೋಹಿತ್ ಶರ್ಮಾ ಜೊತೆ ಚರ್ಚಿಸದಿರುವುದು ನಿಮ್ಮ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

6 / 6

Published On - 11:24 am, Tue, 19 March 24

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್