AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಜೊತೆ ನಾಯಕತ್ವದ ಬಗ್ಗೆ ಒಮ್ಮೆಯೂ ಚರ್ಚಿಸದ ಹಾರ್ದಿಕ್ ಪಾಂಡ್ಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಐಪಿಎಲ್​ನ ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಹಾಗೆಯೇ ಮಾರ್ಚ್ 24 ರಂದು ನಡೆಯುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯಲಿದ್ದಾರೆ.

TV9 Web
| Edited By: |

Updated on:Mar 19, 2024 | 11:26 AM

Share
ಬರೋಬ್ಬರಿ 10 ಸೀಸನ್​ಗಳ ಬಳಿಕ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕತ್ವ ಬದಲಾಗಿದೆ. ರೋಹಿತ್ ಶರ್ಮಾ ಇದ್ದ ಜಾಗಕ್ಕೆ ಹಾರ್ದಿಕ್ ಪಾಂಡ್ಯ ನೇಮಕವಾಗಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಪಾಂಡ್ಯರನ್ನು ಈ ಬಾರಿಯ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು.

ಬರೋಬ್ಬರಿ 10 ಸೀಸನ್​ಗಳ ಬಳಿಕ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕತ್ವ ಬದಲಾಗಿದೆ. ರೋಹಿತ್ ಶರ್ಮಾ ಇದ್ದ ಜಾಗಕ್ಕೆ ಹಾರ್ದಿಕ್ ಪಾಂಡ್ಯ ನೇಮಕವಾಗಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಪಾಂಡ್ಯರನ್ನು ಈ ಬಾರಿಯ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು.

1 / 6
ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದಾರೆ.

ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದಾರೆ.

2 / 6
ಇದಕ್ಕೂ ಮುನ್ನ ನಡೆದ ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಈ ವೇಳೆ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ ಬಗ್ಗೆ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಕೇಳಲಾಗಿದೆ.

ಇದಕ್ಕೂ ಮುನ್ನ ನಡೆದ ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಈ ವೇಳೆ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ ಬಗ್ಗೆ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಕೇಳಲಾಗಿದೆ.

3 / 6
ಈ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಹಾರ್ದಿಕ್ ಪಾಂಡ್ಯ, ಎಸ್​ ಅ್ಯಂಡ್ ನೋ ಎಂದರು. ಮಾತು ಮುಂದುವರೆಸಿ, ನಾವೆಲ್ಲರೂ ವೃತ್ತಿಪರ ಆಟಗಾರರು. ರೋಹಿತ್ ಶರ್ಮಾ ಕೂಡ ಕೆಲ ಸರಣಿಗಳಲ್ಲಿ ಆಡುತ್ತಿದ್ದರು. ನಾವು ಪ್ರತಿಯೊಬ್ಬರನ್ನು ಭೇಟಿಯಾಗದೇ ಒಂದೆರಡು ತಿಂಗಳುಗಳೇ ಕಳೆದಿವೆ ಎಂದರು. ಈ ಮೂಲಕ ರೋಹಿತ್ ಶರ್ಮಾ ಜೊತೆ ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂಬುದನ್ನು ಹಾರ್ದಿಕ್ ಪಾಂಡ್ಯ ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಹಾರ್ದಿಕ್ ಪಾಂಡ್ಯ, ಎಸ್​ ಅ್ಯಂಡ್ ನೋ ಎಂದರು. ಮಾತು ಮುಂದುವರೆಸಿ, ನಾವೆಲ್ಲರೂ ವೃತ್ತಿಪರ ಆಟಗಾರರು. ರೋಹಿತ್ ಶರ್ಮಾ ಕೂಡ ಕೆಲ ಸರಣಿಗಳಲ್ಲಿ ಆಡುತ್ತಿದ್ದರು. ನಾವು ಪ್ರತಿಯೊಬ್ಬರನ್ನು ಭೇಟಿಯಾಗದೇ ಒಂದೆರಡು ತಿಂಗಳುಗಳೇ ಕಳೆದಿವೆ ಎಂದರು. ಈ ಮೂಲಕ ರೋಹಿತ್ ಶರ್ಮಾ ಜೊತೆ ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂಬುದನ್ನು ಹಾರ್ದಿಕ್ ಪಾಂಡ್ಯ ಪರೋಕ್ಷವಾಗಿ ತಿಳಿಸಿದ್ದಾರೆ.

4 / 6
ಅಲ್ಲದೆ ರೋಹಿತ್ ಶರ್ಮಾ ಐಪಿಎಲ್​ಗೆ ಆಗಮಿಸಿದಾಗ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಇತ್ತ ಪಾಂಡ್ಯ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಹಿಟ್​ಮ್ಯಾನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೆ ರೋಹಿತ್ ಶರ್ಮಾ ಐಪಿಎಲ್​ಗೆ ಆಗಮಿಸಿದಾಗ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಇತ್ತ ಪಾಂಡ್ಯ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಹಿಟ್​ಮ್ಯಾನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

5 / 6
2015 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ನೀವು ಪಾದಾರ್ಪಣೆ ಮಾಡಿದ್ದೀರಿ. ಹಿಟ್​ಮ್ಯಾನ್ ಕ್ಯಾಪ್ಟನ್ಸಿ ಅಡಿಯಲ್ಲಿ 7 ಸೀಸನ್ ಆಡಿದ್ದೀರಿ. ಇದಾಗ್ಯೂ ಸೌಜನ್ಯಕ್ಕಾದರೂ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುತ್ತಿರುವ ​ಬಗ್ಗೆ ರೋಹಿತ್ ಶರ್ಮಾ ಜೊತೆ ಚರ್ಚಿಸದಿರುವುದು ನಿಮ್ಮ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2015 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ನೀವು ಪಾದಾರ್ಪಣೆ ಮಾಡಿದ್ದೀರಿ. ಹಿಟ್​ಮ್ಯಾನ್ ಕ್ಯಾಪ್ಟನ್ಸಿ ಅಡಿಯಲ್ಲಿ 7 ಸೀಸನ್ ಆಡಿದ್ದೀರಿ. ಇದಾಗ್ಯೂ ಸೌಜನ್ಯಕ್ಕಾದರೂ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುತ್ತಿರುವ ​ಬಗ್ಗೆ ರೋಹಿತ್ ಶರ್ಮಾ ಜೊತೆ ಚರ್ಚಿಸದಿರುವುದು ನಿಮ್ಮ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

6 / 6

Published On - 11:24 am, Tue, 19 March 24

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್