AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರೋಹಿತ್ ಶರ್ಮಾ ಜೊತೆ ನಾಯಕತ್ವದ ಬಗ್ಗೆ ಒಮ್ಮೆಯೂ ಚರ್ಚಿಸದ ಹಾರ್ದಿಕ್ ಪಾಂಡ್ಯ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಐಪಿಎಲ್​ನ ಮೊದಲ ಪಂದ್ಯದಲ್ಲಿ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಹಾಗೆಯೇ ಮಾರ್ಚ್ 24 ರಂದು ನಡೆಯುವ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದ ಮೂಲಕ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಕಣಕ್ಕಿಳಿಯಲಿದ್ದಾರೆ.

TV9 Web
| Edited By: |

Updated on:Mar 19, 2024 | 11:26 AM

Share
ಬರೋಬ್ಬರಿ 10 ಸೀಸನ್​ಗಳ ಬಳಿಕ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕತ್ವ ಬದಲಾಗಿದೆ. ರೋಹಿತ್ ಶರ್ಮಾ ಇದ್ದ ಜಾಗಕ್ಕೆ ಹಾರ್ದಿಕ್ ಪಾಂಡ್ಯ ನೇಮಕವಾಗಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಪಾಂಡ್ಯರನ್ನು ಈ ಬಾರಿಯ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು.

ಬರೋಬ್ಬರಿ 10 ಸೀಸನ್​ಗಳ ಬಳಿಕ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕತ್ವ ಬದಲಾಗಿದೆ. ರೋಹಿತ್ ಶರ್ಮಾ ಇದ್ದ ಜಾಗಕ್ಕೆ ಹಾರ್ದಿಕ್ ಪಾಂಡ್ಯ ನೇಮಕವಾಗಿದ್ದಾರೆ. ಕಳೆದೆರಡು ಸೀಸನ್​ಗಳಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮುನ್ನಡೆಸಿದ್ದ ಪಾಂಡ್ಯರನ್ನು ಈ ಬಾರಿಯ ಹರಾಜಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಟ್ರೇಡ್ ಮಾಡಿಕೊಂಡಿತ್ತು.

1 / 6
ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದಾರೆ.

ಈ ಟ್ರೇಡ್ ಪ್ರಕ್ರಿಯೆಯ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ ಪಟ್ಟ ನೀಡಿದ್ದರು. ಇದೀಗ ಇಬ್ಬರು ಆಟಗಾರರು ಜೊತೆಯಾಗಿ ಕಣಕ್ಕಿಳಿಯಲು ಸಜ್ಜಾಗಿ ನಿಂತಿದ್ದಾರೆ.

2 / 6
ಇದಕ್ಕೂ ಮುನ್ನ ನಡೆದ ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಈ ವೇಳೆ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ ಬಗ್ಗೆ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಕೇಳಲಾಗಿದೆ.

ಇದಕ್ಕೂ ಮುನ್ನ ನಡೆದ ಮುಂಬೈ ಇಂಡಿಯನ್ಸ್ ತಂಡದ ಸುದ್ದಿಗೋಷ್ಠಿಯಲ್ಲಿ ನೂತನ ನಾಯಕ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದರು. ಈ ವೇಳೆ ತಂಡದ ನಾಯಕತ್ವ ವಹಿಸಿಕೊಳ್ಳುತ್ತಿರುವ ಬಗ್ಗೆ ರೋಹಿತ್ ಶರ್ಮಾ ಅವರೊಂದಿಗೆ ಚರ್ಚಿಸಿದ್ದೀರಾ ಎಂಬ ಪ್ರಶ್ನೆಗೆ ಕೇಳಲಾಗಿದೆ.

3 / 6
ಈ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಹಾರ್ದಿಕ್ ಪಾಂಡ್ಯ, ಎಸ್​ ಅ್ಯಂಡ್ ನೋ ಎಂದರು. ಮಾತು ಮುಂದುವರೆಸಿ, ನಾವೆಲ್ಲರೂ ವೃತ್ತಿಪರ ಆಟಗಾರರು. ರೋಹಿತ್ ಶರ್ಮಾ ಕೂಡ ಕೆಲ ಸರಣಿಗಳಲ್ಲಿ ಆಡುತ್ತಿದ್ದರು. ನಾವು ಪ್ರತಿಯೊಬ್ಬರನ್ನು ಭೇಟಿಯಾಗದೇ ಒಂದೆರಡು ತಿಂಗಳುಗಳೇ ಕಳೆದಿವೆ ಎಂದರು. ಈ ಮೂಲಕ ರೋಹಿತ್ ಶರ್ಮಾ ಜೊತೆ ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂಬುದನ್ನು ಹಾರ್ದಿಕ್ ಪಾಂಡ್ಯ ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಹಾರ್ದಿಕ್ ಪಾಂಡ್ಯ, ಎಸ್​ ಅ್ಯಂಡ್ ನೋ ಎಂದರು. ಮಾತು ಮುಂದುವರೆಸಿ, ನಾವೆಲ್ಲರೂ ವೃತ್ತಿಪರ ಆಟಗಾರರು. ರೋಹಿತ್ ಶರ್ಮಾ ಕೂಡ ಕೆಲ ಸರಣಿಗಳಲ್ಲಿ ಆಡುತ್ತಿದ್ದರು. ನಾವು ಪ್ರತಿಯೊಬ್ಬರನ್ನು ಭೇಟಿಯಾಗದೇ ಒಂದೆರಡು ತಿಂಗಳುಗಳೇ ಕಳೆದಿವೆ ಎಂದರು. ಈ ಮೂಲಕ ರೋಹಿತ್ ಶರ್ಮಾ ಜೊತೆ ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂಬುದನ್ನು ಹಾರ್ದಿಕ್ ಪಾಂಡ್ಯ ಪರೋಕ್ಷವಾಗಿ ತಿಳಿಸಿದ್ದಾರೆ.

4 / 6
ಅಲ್ಲದೆ ರೋಹಿತ್ ಶರ್ಮಾ ಐಪಿಎಲ್​ಗೆ ಆಗಮಿಸಿದಾಗ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಇತ್ತ ಪಾಂಡ್ಯ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಹಿಟ್​ಮ್ಯಾನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೆ ರೋಹಿತ್ ಶರ್ಮಾ ಐಪಿಎಲ್​ಗೆ ಆಗಮಿಸಿದಾಗ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದ್ದಾರೆ. ಇತ್ತ ಪಾಂಡ್ಯ ಅವರ ಈ ಹೇಳಿಕೆ ಬೆನ್ನಲ್ಲೇ ಇದೀಗ ಹಿಟ್​ಮ್ಯಾನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

5 / 6
2015 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ನೀವು ಪಾದಾರ್ಪಣೆ ಮಾಡಿದ್ದೀರಿ. ಹಿಟ್​ಮ್ಯಾನ್ ಕ್ಯಾಪ್ಟನ್ಸಿ ಅಡಿಯಲ್ಲಿ 7 ಸೀಸನ್ ಆಡಿದ್ದೀರಿ. ಇದಾಗ್ಯೂ ಸೌಜನ್ಯಕ್ಕಾದರೂ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುತ್ತಿರುವ ​ಬಗ್ಗೆ ರೋಹಿತ್ ಶರ್ಮಾ ಜೊತೆ ಚರ್ಚಿಸದಿರುವುದು ನಿಮ್ಮ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2015 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ನೀವು ಪಾದಾರ್ಪಣೆ ಮಾಡಿದ್ದೀರಿ. ಹಿಟ್​ಮ್ಯಾನ್ ಕ್ಯಾಪ್ಟನ್ಸಿ ಅಡಿಯಲ್ಲಿ 7 ಸೀಸನ್ ಆಡಿದ್ದೀರಿ. ಇದಾಗ್ಯೂ ಸೌಜನ್ಯಕ್ಕಾದರೂ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ವಹಿಸಿಕೊಳ್ಳುತ್ತಿರುವ ​ಬಗ್ಗೆ ರೋಹಿತ್ ಶರ್ಮಾ ಜೊತೆ ಚರ್ಚಿಸದಿರುವುದು ನಿಮ್ಮ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ವಿರುದ್ಧ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

6 / 6

Published On - 11:24 am, Tue, 19 March 24

3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ