AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: KKR ತಂಡದ ಗೆಲುವಿನ ರೂವಾರಿಗೆ ದಂಡದ ಬರೆ

IPL 2024: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದಲ್ಲಿ ಕೆಕೆಆರ್​ ವೇಗಿ ಹರ್ಷಿತ್ ರಾಣಾ (Harshit Rana) ಹಾಗೂ ಎಸ್​ಆರ್​ಹೆಚ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (Mayank Agarwal) ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡು ಬಂದಿತ್ತು. ಈ ವೇಳೆ ಅನುಚಿತವಾಗಿ ವರ್ತಿಸಿದ ರಾಣಾಗೆ ದಂಡ ವಿಧಿಸಲಾಗಿದೆ.

TV9 Web
| Edited By: |

Updated on: Mar 24, 2024 | 10:10 AM

Share
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ನಡೆದ ಐಪಿಎಲ್​ನ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಈ ರೋಚಕ ಗೆಲುವಿನ ರೂವಾರಿ ಯುವ ವೇಗಿ ಹರ್ಷಿತ್ ರಾಣಾ (Harshit Rana). ಇದೀಗ ಹರ್ಷಿತ್​ಗೆ ಅವರಿಗೆ ಪಂದ್ಯದ ಶುಲ್ಕದ ಶೇ.60 ರಷ್ಟು ದಂಡ ವಿಧಿಸಲಾಗಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ನಡೆದ ಐಪಿಎಲ್​ನ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಈ ರೋಚಕ ಗೆಲುವಿನ ರೂವಾರಿ ಯುವ ವೇಗಿ ಹರ್ಷಿತ್ ರಾಣಾ (Harshit Rana). ಇದೀಗ ಹರ್ಷಿತ್​ಗೆ ಅವರಿಗೆ ಪಂದ್ಯದ ಶುಲ್ಕದ ಶೇ.60 ರಷ್ಟು ದಂಡ ವಿಧಿಸಲಾಗಿದೆ.

1 / 5
ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಹರ್ಷಿತ್ ರಾಣಾ ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ್ದರು. ಎಸ್​ಆರ್​ಹೆಚ್ ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ವಿಕೆಟ್ ಪಡೆದು ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು.

ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಹರ್ಷಿತ್ ರಾಣಾ ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ್ದರು. ಎಸ್​ಆರ್​ಹೆಚ್ ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ವಿಕೆಟ್ ಪಡೆದು ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು.

2 / 5
ಹಾಗೆಯೇ ಕೊನೆಯ ಓವರ್​ನಲ್ಲಿ ಹೆನ್ರಿಕ್ ಕ್ಲಾಸೆನ್ ವಿಕೆಟ್ ಕಬಳಿಸಿದ ಬಳಿಕ ಪೆವಿಲಿಯನ್​ಗೆ ದಾಟುವಂತೆ ಕೈ ಸನ್ನೆ ಮಾಡಿದ್ದರು. ಹೀಗೆ ಎರಡು ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾ ಅವರ ಒಟ್ಟು ಪಂದ್ಯ ಶುಲ್ಕದ ಮೇಲೆ ಶೇಕಡಾ 60 ರಷ್ಟು ದಂಡ ವಿಧಿಸಲಾಗಿದೆ.

ಹಾಗೆಯೇ ಕೊನೆಯ ಓವರ್​ನಲ್ಲಿ ಹೆನ್ರಿಕ್ ಕ್ಲಾಸೆನ್ ವಿಕೆಟ್ ಕಬಳಿಸಿದ ಬಳಿಕ ಪೆವಿಲಿಯನ್​ಗೆ ದಾಟುವಂತೆ ಕೈ ಸನ್ನೆ ಮಾಡಿದ್ದರು. ಹೀಗೆ ಎರಡು ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾ ಅವರ ಒಟ್ಟು ಪಂದ್ಯ ಶುಲ್ಕದ ಮೇಲೆ ಶೇಕಡಾ 60 ರಷ್ಟು ದಂಡ ವಿಧಿಸಲಾಗಿದೆ.

3 / 5
ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಹರ್ಷಿತ್ ಒಟ್ಟು 33 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಓವರ್​ನಲ್ಲಿ ಅದ್ಭುತ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಹರ್ಷಿತ್ ಒಟ್ಟು 33 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಓವರ್​ನಲ್ಲಿ ಅದ್ಭುತ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು.

4 / 5
ಕೊನೆಯ ಓವರ್​ನಲ್ಲಿ ಎಸ್​ಆರ್​ಹೆಚ್ ತಂಡಕ್ಕೆ 13 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಹರ್ಷಿತ್ ರಾಣಾ ಅವರ ಮೊದಲ ಎಸೆತಕ್ಕೆ ಹೆನ್ರಿಕ್ ಕ್ಲಾಸೆನ್ ಸಿಕ್ಸ್​ ಸಿಡಿಸಿದರು. ಇದಾದ ಬಳಿಕ 5 ಎಸೆತಗಳಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಕೇವಲ 2 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಈ ಮೂಲಕ ಕೆಕೆಆರ್​ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾಗಿದ್ದರು. ಇದೀಗ ಈ ಯಶಸ್ಸಿನ ಬೆನ್ನಲ್ಲೇ ಯುವ ವೇಗಿ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.

ಕೊನೆಯ ಓವರ್​ನಲ್ಲಿ ಎಸ್​ಆರ್​ಹೆಚ್ ತಂಡಕ್ಕೆ 13 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಹರ್ಷಿತ್ ರಾಣಾ ಅವರ ಮೊದಲ ಎಸೆತಕ್ಕೆ ಹೆನ್ರಿಕ್ ಕ್ಲಾಸೆನ್ ಸಿಕ್ಸ್​ ಸಿಡಿಸಿದರು. ಇದಾದ ಬಳಿಕ 5 ಎಸೆತಗಳಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಕೇವಲ 2 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಈ ಮೂಲಕ ಕೆಕೆಆರ್​ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾಗಿದ್ದರು. ಇದೀಗ ಈ ಯಶಸ್ಸಿನ ಬೆನ್ನಲ್ಲೇ ಯುವ ವೇಗಿ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ