AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೆಣಕಿದ ರಾಣಾ: ಕಣ್ಣಲ್ಲೇ ಕೆಂಡಕಾರಿದ ಮಯಾಂಕ್ ಅಗರ್ವಾಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ​ (ಐಪಿಎಲ್ 2024) ಮೂರನೇ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟ ಕಂಡು ಬಂದಿದೆ, ಅದರಲ್ಲೂ ಯುವ ಆಟಗಾರ ಹರ್ಷಿತ್ ರಾಣಾ ಹಾಗೂ ಮಯಾಂಕ್ ಅಗರ್ವಾಲ್ ನಡುವೆ ನೇರ ಪೈಪೋಟಿ ತಾರಕ್ಕೇರಿತು. ಅಂತಿಮವಾಗಿ ಈ ಪೈಪೋಟಿಯು ಕಣ್ಣೋಟದಲ್ಲೇ ಅಂತ್ಯವಾಗಿದ್ದು, ಮುಂದಿನ ಪಂದ್ಯದಲ್ಲಿ ಮುಂದುವರೆಯುವ ಸಾಧ್ಯತೆಯಿದೆ.

TV9 Web
| Edited By: |

Updated on: Mar 24, 2024 | 8:09 AM

Share
ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದಲ್ಲಿ ಕೆಕೆಆರ್​ ವೇಗಿ ಹರ್ಷಿತ್ ರಾಣಾ (Harshit Rana) ಹಾಗೂ ಎಸ್​ಆರ್​ಹೆಚ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (Mayank Agarwal) ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡು ಬಂತು.

ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ (KKR) ನಡುವಣ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅದರಲ್ಲೂ ಈ ಪಂದ್ಯದಲ್ಲಿ ಕೆಕೆಆರ್​ ವೇಗಿ ಹರ್ಷಿತ್ ರಾಣಾ (Harshit Rana) ಹಾಗೂ ಎಸ್​ಆರ್​ಹೆಚ್ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ (Mayank Agarwal) ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡು ಬಂತು.

1 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೆಕೆಆರ್ ವೇಗದ ಬೌಲರ್ ಹರ್ಷಿತ್ ರಾಣಾರನ್ನು ಟಾರ್ಗೆಟ್ ಮಾಡಿದ್ದ ಮಯಾಂಕ್ ಸಿಕ್ಸ್-ಫೋರ್​ಗಳನ್ನು ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೆಕೆಆರ್ ವೇಗದ ಬೌಲರ್ ಹರ್ಷಿತ್ ರಾಣಾರನ್ನು ಟಾರ್ಗೆಟ್ ಮಾಡಿದ್ದ ಮಯಾಂಕ್ ಸಿಕ್ಸ್-ಫೋರ್​ಗಳನ್ನು ಬಾರಿಸಿ ಉತ್ತಮ ಆರಂಭ ಒದಗಿಸಿದ್ದರು.

2 / 7
ಇತ್ತ ಹರ್ಷಿಕ್ ರಾಣಾ ಕೂಡ ಮಾಯಾಂಕ್ ಅಗರ್ವಾಲ್ ವಿಕೆಟ್​ಗಾಗಿ ಪರಿತಪಿಸುತ್ತಿದ್ದರು. ಅದರಂತೆ ರಾಣಾ ಎಸೆದ 6ನೇ ಓವರ್​ನ ಮೂರನೇ ಎಸೆತವನ್ನು ಮಯಾಂಕ್ ಲೈಗ್​ ಸೈಡ್​ನತ್ತ ಬಾರಿಸಿದ್ದರು. ಆದರೆ ಅದಾಗಲೇ ಕ್ಯಾಚ್​ಗಾಗಿ ಬೌಂಡರಿ ಲೈನ್​ ಬಳಿ ಕಾದು ಕುಳಿತಿದ್ದ ರಿಂಕು ಸಿಂಗ್ ಚೆಂಡನ್ನು ಹಿಡಿದರು.

ಇತ್ತ ಹರ್ಷಿಕ್ ರಾಣಾ ಕೂಡ ಮಾಯಾಂಕ್ ಅಗರ್ವಾಲ್ ವಿಕೆಟ್​ಗಾಗಿ ಪರಿತಪಿಸುತ್ತಿದ್ದರು. ಅದರಂತೆ ರಾಣಾ ಎಸೆದ 6ನೇ ಓವರ್​ನ ಮೂರನೇ ಎಸೆತವನ್ನು ಮಯಾಂಕ್ ಲೈಗ್​ ಸೈಡ್​ನತ್ತ ಬಾರಿಸಿದ್ದರು. ಆದರೆ ಅದಾಗಲೇ ಕ್ಯಾಚ್​ಗಾಗಿ ಬೌಂಡರಿ ಲೈನ್​ ಬಳಿ ಕಾದು ಕುಳಿತಿದ್ದ ರಿಂಕು ಸಿಂಗ್ ಚೆಂಡನ್ನು ಹಿಡಿದರು.

3 / 7
ಮಯಾಂಕ್ ಅಗರ್ವಾಲ್ ಅವರ ವಿಕೆಟ್​ ಸಿಗುತ್ತಿದ್ದಂತೆ ಹರ್ಷಿತ್ ರಾಣಾ ಫ್ಲೈಯಿಂಗ್ ಕಿಸ್ ಕೊಡುವ ಮೂಲಕ ಬೀಳ್ಕೊಟ್ಟರು. ಇದರಿಂದ ಕುಪಿತಗೊಂಡ ಮಯಾಂಕ್ ಅಗರ್ವಾಲ್ ರಾಣಾರನ್ನು ಗುರಾಯಿಸಲಾರಂಭಿಸಿದರು.

ಮಯಾಂಕ್ ಅಗರ್ವಾಲ್ ಅವರ ವಿಕೆಟ್​ ಸಿಗುತ್ತಿದ್ದಂತೆ ಹರ್ಷಿತ್ ರಾಣಾ ಫ್ಲೈಯಿಂಗ್ ಕಿಸ್ ಕೊಡುವ ಮೂಲಕ ಬೀಳ್ಕೊಟ್ಟರು. ಇದರಿಂದ ಕುಪಿತಗೊಂಡ ಮಯಾಂಕ್ ಅಗರ್ವಾಲ್ ರಾಣಾರನ್ನು ಗುರಾಯಿಸಲಾರಂಭಿಸಿದರು.

4 / 7
ಅಲ್ಲದೆ ಹರ್ಷಿತ್ ರಾಣಾರನ್ನು ದಿಟ್ಟಿಸುತ್ತಾ ಮಯಾಂಕ್ ಅಗರ್ವಾಲ್ ಪೆವಿಲಿಯನ್​ನತ್ತ ಹೆಜ್ಜೆಹಾಕಿದರು. ಇತ್ತ ರಾಣಾ ಕೂಡ ಮಯಾಂಕ್​ ಕಣ್ಣೋಟಕ್ಕೆ ಕಣ್ಣು ನೀಡುವ ಮೂಲಕ ತಾನೇನು ಕಮ್ಮಿಯಿಲ್ಲ ಎಂಬುದನ್ನು ತೋರಿಸಿದರು. ಇದೀಗ ಭಾರತೀಯ ಆಟಗಾರಿಬ್ಬರ ಈ ಜಿದ್ದಾಜಿದ್ದಿನ ಕಣ್ಣೋಟವು ಮುಂದಿನ ಹಂತಕ್ಕೋಗುವ ಸೂಚನೆಯಿದೆ.

ಅಲ್ಲದೆ ಹರ್ಷಿತ್ ರಾಣಾರನ್ನು ದಿಟ್ಟಿಸುತ್ತಾ ಮಯಾಂಕ್ ಅಗರ್ವಾಲ್ ಪೆವಿಲಿಯನ್​ನತ್ತ ಹೆಜ್ಜೆಹಾಕಿದರು. ಇತ್ತ ರಾಣಾ ಕೂಡ ಮಯಾಂಕ್​ ಕಣ್ಣೋಟಕ್ಕೆ ಕಣ್ಣು ನೀಡುವ ಮೂಲಕ ತಾನೇನು ಕಮ್ಮಿಯಿಲ್ಲ ಎಂಬುದನ್ನು ತೋರಿಸಿದರು. ಇದೀಗ ಭಾರತೀಯ ಆಟಗಾರಿಬ್ಬರ ಈ ಜಿದ್ದಾಜಿದ್ದಿನ ಕಣ್ಣೋಟವು ಮುಂದಿನ ಹಂತಕ್ಕೋಗುವ ಸೂಚನೆಯಿದೆ.

5 / 7
ಅಂದರೆ ಉಭಯ ತಂಡಗಳು ಹೈದರಾಬಾದ್​ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದು, ಈ ವೇಳೆ ಹರ್ಷಿತ್ ರಾಣಾ ಹಾಗೂ ಮಯಾಂಕ್ ಅಗರ್ವಾಲ್ ನಡುವಣ ಕಣ್ಣಲ್ಲೇ ಕಿತ್ತಾಟ ಮುಂದುವರೆಯುವ ಸಾಧ್ಯತೆಯಿದೆ.

ಅಂದರೆ ಉಭಯ ತಂಡಗಳು ಹೈದರಾಬಾದ್​ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದ್ದು, ಈ ವೇಳೆ ಹರ್ಷಿತ್ ರಾಣಾ ಹಾಗೂ ಮಯಾಂಕ್ ಅಗರ್ವಾಲ್ ನಡುವಣ ಕಣ್ಣಲ್ಲೇ ಕಿತ್ತಾಟ ಮುಂದುವರೆಯುವ ಸಾಧ್ಯತೆಯಿದೆ.

6 / 7
ಇದಾಗ್ಯೂ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾದರು. ಕೊನೆಯ ಓವರ್​ನಲ್ಲಿ 13 ರನ್​ಗಳ ಗುರಿ ಪಡೆದಿದ್ದ ಎಸ್​ಆರ್​ಹೆಚ್ ತಂಡವನ್ನು 204 ರನ್​ಗಳಿಗೆ ನಿಯಂತ್ರಿಸುವ ಮೂಲಕ ಹರ್ಷಿತ್ ರಾಣಾ ಕೆಕೆಆರ್ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಟ್ಟರು.

ಇದಾಗ್ಯೂ ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾದರು. ಕೊನೆಯ ಓವರ್​ನಲ್ಲಿ 13 ರನ್​ಗಳ ಗುರಿ ಪಡೆದಿದ್ದ ಎಸ್​ಆರ್​ಹೆಚ್ ತಂಡವನ್ನು 204 ರನ್​ಗಳಿಗೆ ನಿಯಂತ್ರಿಸುವ ಮೂಲಕ ಹರ್ಷಿತ್ ರಾಣಾ ಕೆಕೆಆರ್ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಟ್ಟರು.

7 / 7
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್