Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಾರ್ವಕಾಲಿಕ ದಾಖಲೆ ಸರಿಗಟ್ಟಿದ ರಾಜಸ್ಥಾನ್ ರಾಯಲ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನೀಡಿದ ಬೃಹತ್ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎಸೆತದಲ್ಲಿ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ರಾಜಸ್ಥಾನ್ ರಾಯಲ್ಸ್ ದಾಖಲೆಯ ಜಯ ಸಾಧಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 17, 2024 | 8:14 AM

ಐಪಿಎಲ್​ನ (IPL 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತನ್ನದೇ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಿದೆ. ಅದು ಸಹ 223 ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ.

ಐಪಿಎಲ್​ನ (IPL 2024) 31ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ರಾಜಸ್ಥಾನ್ ರಾಯಲ್ಸ್ ತನ್ನದೇ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಿದೆ. ಅದು ಸಹ 223 ರನ್​ಗಳನ್ನು ಚೇಸ್ ಮಾಡುವ ಮೂಲಕ ಎಂಬುದು ವಿಶೇಷ.

1 / 6
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಸುನಿಲ್ ನರೈನ್ 56 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 109 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಕಲೆಹಾಕಿತು.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ಪರ ಸುನಿಲ್ ನರೈನ್ 56 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 109 ರನ್ ಸಿಡಿಸಿದರು. ಈ ಶತಕದ ನೆರವಿನಿಂದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಕಲೆಹಾಕಿತು.

2 / 6
224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಜವಾಬ್ದಾರಿಯುತ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟಿದ ಬಟ್ಲರ್ 60 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಈ ಶತಕದ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ ಗುರಿ ಮುಟ್ಟಿತು.

224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಜವಾಬ್ದಾರಿಯುತ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟಿದ ಬಟ್ಲರ್ 60 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಈ ಶತಕದ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವು 20ನೇ ಓವರ್​ನ ಕೊನೆಯ ಎಸೆತದಲ್ಲಿ ಗುರಿ ಮುಟ್ಟಿತು.

3 / 6
ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಬೃಹತ್ ಸ್ಕೋರ್ ಚೇಸ್​ ಅನ್ನು ಚೇಸ್ ಮಾಡಿ ಗೆದ್ದ ವಿಶೇಷ ದಾಖಲೆಯನ್ನು ರಾಜಸ್ಥಾನ್ ರಾಯಲ್ಸ್ ತಂಡ ಮರು ನಿರ್ಮಿಸಿದರು. ಅಂದರೆ ಇದಕ್ಕೂ ಮುನ್ನ ಈ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿಯೇ ಇತ್ತು.

ಈ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಬೃಹತ್ ಸ್ಕೋರ್ ಚೇಸ್​ ಅನ್ನು ಚೇಸ್ ಮಾಡಿ ಗೆದ್ದ ವಿಶೇಷ ದಾಖಲೆಯನ್ನು ರಾಜಸ್ಥಾನ್ ರಾಯಲ್ಸ್ ತಂಡ ಮರು ನಿರ್ಮಿಸಿದರು. ಅಂದರೆ ಇದಕ್ಕೂ ಮುನ್ನ ಈ ದಾಖಲೆ ರಾಜಸ್ಥಾನ್ ರಾಯಲ್ಸ್ ತಂಡದ ಹೆಸರಿನಲ್ಲಿಯೇ ಇತ್ತು.

4 / 6
2020 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 224 ರನ್​ಗಳನ್ನು ಚೇಸ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ಈ ದಾಖಲೆ ಬರೆದಿದ್ದರು. ಇದೀಗ ಕೆಕೆಆರ್ ನೀಡಿ 224 ರನ್​ಗಳ ಗುರಿಯನ್ನು ಬೆನ್ನತ್ತುವ ಮೂಲಕ ಆರ್​ಆರ್ ಪಡೆ ಹಳೆಯ ದಾಖಲೆಯನ್ನು ಪುನರಾವರ್ತಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ರನ್​ಗಳನ್ನು ಚೇಸ್ ಮಾಡಿದ ತಂಡ ಎನಿಸಿಕೊಂಡಿದೆ.

2020 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 224 ರನ್​ಗಳನ್ನು ಚೇಸ್ ಮಾಡುವ ಮೂಲಕ ರಾಜಸ್ಥಾನ್ ರಾಯಲ್ಸ್ ಈ ದಾಖಲೆ ಬರೆದಿದ್ದರು. ಇದೀಗ ಕೆಕೆಆರ್ ನೀಡಿ 224 ರನ್​ಗಳ ಗುರಿಯನ್ನು ಬೆನ್ನತ್ತುವ ಮೂಲಕ ಆರ್​ಆರ್ ಪಡೆ ಹಳೆಯ ದಾಖಲೆಯನ್ನು ಪುನರಾವರ್ತಿಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಅತೀ ಹೆಚ್ಚು ರನ್​ಗಳನ್ನು ಚೇಸ್ ಮಾಡಿದ ತಂಡ ಎನಿಸಿಕೊಂಡಿದೆ.

5 / 6
ಇನ್ನು ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲಾರ್ಧದಲ್ಲಿ ಒಟ್ಟು 12 ಅಂಕಗಳನ್ನು ಕಲೆಹಾಕಿದೆ. ಈ ಅಂಕಗಳೊಂದಿಗೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಆರ್ ತಂಡವು ಅಗ್ರಸ್ಥಾನದಲ್ಲಿದ್ದು, ಮುಂದಿನ 7 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

ಇನ್ನು ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲಾರ್ಧದಲ್ಲಿ ಒಟ್ಟು 12 ಅಂಕಗಳನ್ನು ಕಲೆಹಾಕಿದೆ. ಈ ಅಂಕಗಳೊಂದಿಗೆ ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ ಆರ್​ಆರ್ ತಂಡವು ಅಗ್ರಸ್ಥಾನದಲ್ಲಿದ್ದು, ಮುಂದಿನ 7 ಪಂದ್ಯಗಳಲ್ಲಿ 2 ಜಯ ಸಾಧಿಸಿದರೆ ಪ್ಲೇಆಫ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ.

6 / 6
Follow us
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ