AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಹೀಗಾದ್ರೆ RCB ಪ್ಲೇಆಫ್ ಪ್ರವೇಶಿಸುವುದು ಖಚಿತ..!

IPL 2024: ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ 2024ರ ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೆ ಗೆದ್ದಿರುವುದು ಒಂದು ಪಂದ್ಯದಲ್ಲಿ ಮಾತ್ರ. ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದರೆ, ಸಿಎಸ್​ಕೆ, ಎಲ್​ಎಸ್​ಜಿ. ಕೆಕೆಆರ್, ಆರ್​ಆರ್​, ಮುಂಬೈ ಇಂಡಿಯನ್ಸ್, ಎಸ್​ಆರ್​ಹೆಚ್​ ವಿರುದ್ಧ ಸೋಲನುಭವಿಸಿದೆ.

TV9 Web
| Edited By: |

Updated on: Apr 25, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ (IPL 2024) 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಇದಾಗ್ಯೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶವಿದೆ. ಈ ಅವಕಾಶವು ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಿರಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ (IPL 2024) 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿರುವ 8 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಇದಾಗ್ಯೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಕ್ಕೆ ಪ್ಲೇಆಫ್ ಪ್ರವೇಶಿಸುವ ಅವಕಾಶವಿದೆ. ಈ ಅವಕಾಶವು ಉಳಿದ ತಂಡಗಳ ಫಲಿತಾಂಶವನ್ನು ಅವಲಂಭಿಸಿರಲಿದೆ.

1 / 5
ಅಂದರೆ ಪ್ರಸ್ತುತ ಪಾಯಿಂಟ್ಸ್​​ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ ಮೂರನೇ ಸ್ಥಾನದಲ್ಲಿದೆ. ಈ ಟಾಪ್-3 ತಂಡಗಳು ಮುಂದಿನ ಪಂದ್ಯಗಳ ಮೂಲಕ ಕ್ರಮವಾಗಿ 22, 20 ಮತ್ತು 20 ಅಂಕಗಳನ್ನು ಕಲೆಹಾಕಿದರೆ ಇತ್ತ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಹಾದಿ ತೆರೆದುಕೊಳ್ಳಲಿದೆ.

ಅಂದರೆ ಪ್ರಸ್ತುತ ಪಾಯಿಂಟ್ಸ್​​ ಟೇಬಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ ಮೂರನೇ ಸ್ಥಾನದಲ್ಲಿದೆ. ಈ ಟಾಪ್-3 ತಂಡಗಳು ಮುಂದಿನ ಪಂದ್ಯಗಳ ಮೂಲಕ ಕ್ರಮವಾಗಿ 22, 20 ಮತ್ತು 20 ಅಂಕಗಳನ್ನು ಕಲೆಹಾಕಿದರೆ ಇತ್ತ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಹಾದಿ ತೆರೆದುಕೊಳ್ಳಲಿದೆ.

2 / 5
ಅದಕ್ಕೂ ಮುನ್ನ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆಲುವು ಸಾಧಿಸಬೇಕು. ಅಂದರೆ ಮುಂದಿನ 6 ಪಂದ್ಯಗಳಲ್ಲೂ ಆರ್​ಸಿಬಿ ಜಯ ಸಾಧಿಸಿ ಒಟ್ಟು 14 ಅಂಕಗಳನ್ನು ಪಡೆಯಬೇಕು. ಅತ್ತ ರಾಜಸ್ಥಾನ್ ರಾಯಲ್ಸ್ 22 ಅಂಕಗಳನ್ನು, ಕೊಲ್ಕತ್ತಾ ನೈಟ್ ರೈಡರ್ಸ್ 20 ಮತ್ತು ಸನ್​ರೈಸರ್ಸ್ ಹೈದರಾಬಾದ್ 20 ಅಂಕಗಳನ್ನು ಪಡೆದರೆ, ಇತರೆ ತಂಡಗಳ ಅಂಕಗಳು 14 ಅಥವಾ ಅದಕ್ಕಿಂತ ಕಡಿಮೆ ಆಗುವ ಸಾಧ್ಯತೆಯಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂದಿನ 6 ಪಂದ್ಯಗಳಲ್ಲಿ 4 ಮ್ಯಾಚ್​ಗಳಲ್ಲಿ ಸೋಲಲೇಬಕು.

ಅದಕ್ಕೂ ಮುನ್ನ ಆರ್​ಸಿಬಿ ತಂಡವು ಎಸ್​ಆರ್​ಹೆಚ್ ವಿರುದ್ಧ ಗೆಲುವು ಸಾಧಿಸಬೇಕು. ಅಂದರೆ ಮುಂದಿನ 6 ಪಂದ್ಯಗಳಲ್ಲೂ ಆರ್​ಸಿಬಿ ಜಯ ಸಾಧಿಸಿ ಒಟ್ಟು 14 ಅಂಕಗಳನ್ನು ಪಡೆಯಬೇಕು. ಅತ್ತ ರಾಜಸ್ಥಾನ್ ರಾಯಲ್ಸ್ 22 ಅಂಕಗಳನ್ನು, ಕೊಲ್ಕತ್ತಾ ನೈಟ್ ರೈಡರ್ಸ್ 20 ಮತ್ತು ಸನ್​ರೈಸರ್ಸ್ ಹೈದರಾಬಾದ್ 20 ಅಂಕಗಳನ್ನು ಪಡೆದರೆ, ಇತರೆ ತಂಡಗಳ ಅಂಕಗಳು 14 ಅಥವಾ ಅದಕ್ಕಿಂತ ಕಡಿಮೆ ಆಗುವ ಸಾಧ್ಯತೆಯಿದೆ. ಅದರಲ್ಲೂ ಲಕ್ನೋ ಸೂಪರ್ ಜೈಂಟ್ಸ್ ತಂಡ ಮುಂದಿನ 6 ಪಂದ್ಯಗಳಲ್ಲಿ 4 ಮ್ಯಾಚ್​ಗಳಲ್ಲಿ ಸೋಲಲೇಬಕು.

3 / 5
ಹೀಗಾದಲ್ಲಿ ಆರ್​ಸಿಬಿ ತಂಡವು ಒಟ್ಟು 14 ಅಂಕಗಳೊಂದಿಗೆ ನೆಟ್ ರನ್ ರೇಟ್​ ಸಹಾಯದಿಂದ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಒಂದು ವೇಳೆ ಆರ್​ಸಿಬಿ ತಂಡವು ತನ್ನ ಮುಂದಿನ 6 ಪಂದ್ಯಗಳಲ್ಲಿ ಒಂದು ಸೋಲನುಭವಿಸಿದರೂ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತ.

ಹೀಗಾದಲ್ಲಿ ಆರ್​ಸಿಬಿ ತಂಡವು ಒಟ್ಟು 14 ಅಂಕಗಳೊಂದಿಗೆ ನೆಟ್ ರನ್ ರೇಟ್​ ಸಹಾಯದಿಂದ ಪ್ಲೇಆಫ್ ಪ್ರವೇಶಿಸುವ ಅವಕಾಶ ಪಡೆಯಲಿದೆ. ಒಂದು ವೇಳೆ ಆರ್​ಸಿಬಿ ತಂಡವು ತನ್ನ ಮುಂದಿನ 6 ಪಂದ್ಯಗಳಲ್ಲಿ ಒಂದು ಸೋಲನುಭವಿಸಿದರೂ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಬಹುತೇಕ ಖಚಿತ.

4 / 5
ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಮುಂದಿನ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ. ಅದರಲ್ಲೂ ಇಂದು (ಏ.25) ನಡೆಯುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಗೆಲುವು ದಾಖಲಿಸಲೇಬೇಕು. ಹೀಗಾದಲ್ಲಿ ಮಾತ್ರ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಮುಂದಿನ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯ. ಅದರಲ್ಲೂ ಇಂದು (ಏ.25) ನಡೆಯುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಗೆಲುವು ದಾಖಲಿಸಲೇಬೇಕು. ಹೀಗಾದಲ್ಲಿ ಮಾತ್ರ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ