AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಲಬೇಕು?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಈವರೆಗೆ 11 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇದೀಗ 8 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡ 14 ಪಾಯಿಂಟ್ಸ್​ನಲ್ಲೇ ಉಳಿಯಬೇಕು. ಹೀಗಾದ್ರೆ ಆರ್​ಸಿಬಿ ಮುಂದಿನ 3 ಮ್ಯಾಚ್​ಗಳಲ್ಲಿ ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್ ರನ್ ರೇಟ್​ನೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು.

TV9 Web
| Edited By: |

Updated on:May 07, 2024 | 4:59 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 56ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಮೇಲೇರಲಿದೆ.

1 / 6
ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡ ಕೂಡ ಪ್ಲೇಆಫ್​ ಲೆಕ್ಕಾಚಾರದಲ್ಲಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅನುಕೂಲವಾಗಲಿದೆ ಎಂದು ನೋಡುವುದಾದರೆ....

ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡ ಕೂಡ ಪ್ಲೇಆಫ್​ ಲೆಕ್ಕಾಚಾರದಲ್ಲಿದೆ. ಅದರಂತೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅನುಕೂಲವಾಗಲಿದೆ ಎಂದು ನೋಡುವುದಾದರೆ....

2 / 6
ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್​ಆರ್ ತಂಡ ಗೆಲ್ಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲೇ ಉಳಿಯಲಿದೆ. ಈ ಪಂದ್ಯದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿರುವುದು ಕೇವಲ 2 ಮ್ಯಾಚ್ ಮಾತ್ರ.

ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್​ಆರ್ ತಂಡ ಗೆಲ್ಲಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲೇ ಉಳಿಯಲಿದೆ. ಈ ಪಂದ್ಯದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಿರುವುದು ಕೇವಲ 2 ಮ್ಯಾಚ್ ಮಾತ್ರ.

3 / 6
ಈ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯ ಆರ್​ಸಿಬಿ ವಿರುದ್ಧ ಎಂಬುದು ವಿಶೇಷ. ಅಂದರೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಅಂಕ ಪಟ್ಟಿಯಲ್ಲಿ 10 ಪಾಯಿಂಟ್ಸ್​ನೊಂದಿಗೆ 6ನೇ ಸ್ಥಾನದಲ್ಲ್ಲೇ ಇರಲಿದೆ. ಅತ್ತ ಆರ್​ಸಿಬಿ ಮುಂದಿನ ಪಂದ್ಯವನ್ನು ಗೆದ್ದರೆ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಬಹುದು.

ಈ ಎರಡು ಮ್ಯಾಚ್​ಗಳಲ್ಲಿ ಒಂದು ಪಂದ್ಯ ಆರ್​ಸಿಬಿ ವಿರುದ್ಧ ಎಂಬುದು ವಿಶೇಷ. ಅಂದರೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸೋತರೆ ಅಂಕ ಪಟ್ಟಿಯಲ್ಲಿ 10 ಪಾಯಿಂಟ್ಸ್​ನೊಂದಿಗೆ 6ನೇ ಸ್ಥಾನದಲ್ಲ್ಲೇ ಇರಲಿದೆ. ಅತ್ತ ಆರ್​ಸಿಬಿ ಮುಂದಿನ ಪಂದ್ಯವನ್ನು ಗೆದ್ದರೆ ಅಂಕ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಬಹುದು.

4 / 6
ಹಾಗೆಯೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಆರ್​ಸಿಬಿ ತಂಡದ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್. ಅಂದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ  12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

ಹಾಗೆಯೇ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಆರ್​ಸಿಬಿ ತಂಡದ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್. ಅಂದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ 12 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಈ ಮೂಲಕ ಪ್ಲೇಆಫ್ ಪ್ರವೇಶಿಸುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

5 / 6
ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಅಭಿಮಾನಿಗಳು ಎದುರು ನೋಡಲಿದ್ದಾರೆ. ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಇತ್ತ ಆರ್​ಆರ್ ತಂಡ ಈ ಗೆಲುವು ಆರ್​ಸಿಬಿ ತಂಡ ಪ್ಲೇಆಫ್ ಚಾನ್ಸ್​ ಅನ್ನು ಮತ್ತಷ್ಟು ಹೆಚ್ಚಿಸಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಆರ್​ಸಿಬಿ ಪಾಲಿಗೆ ಅನಿವಾರ್ಯ.

ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಅಭಿಮಾನಿಗಳು ಎದುರು ನೋಡಲಿದ್ದಾರೆ. ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್ ಪಡೆ ಪ್ಲೇಆಫ್ ಪ್ರವೇಶಿಸುವುದನ್ನು ಬಹುತೇಕ ಖಚಿತಪಡಿಸಿಕೊಳ್ಳಲಿದೆ. ಇತ್ತ ಆರ್​ಆರ್ ತಂಡ ಈ ಗೆಲುವು ಆರ್​ಸಿಬಿ ತಂಡ ಪ್ಲೇಆಫ್ ಚಾನ್ಸ್​ ಅನ್ನು ಮತ್ತಷ್ಟು ಹೆಚ್ಚಿಸಲಿದೆ. ಹೀಗಾಗಿಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಆರ್​ಸಿಬಿ ಪಾಲಿಗೆ ಅನಿವಾರ್ಯ.

6 / 6

Published On - 4:53 pm, Tue, 7 May 24

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ