AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 2 ಸ್ಟೇಡಿಯಂನಲ್ಲಿ ಐಪಿಎಲ್​ನ ಕೊನೆಯ 4 ಪಂದ್ಯಗಳು..!

IPL 2024: ಐಪಿಎಲ್ 2024 ಅನ್ನು ವಿದೇಶಕ್ಕೆ ಶಿಫ್ಟ್ ಮಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಹಿಂದೆ 2009 ಹಾಗೂ 2014 ರ ಲೋಕಸಭಾ ಚುನಾವಣೆ ವೇಳೆ ಐಪಿಎಲ್ ಅನ್ನು ವಿದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಈ ಬಾರಿ ಕೂಡ ಐಪಿಎಲ್ ಅನ್ನು ವಿದೇಶದಲ್ಲಿ ಆಯೋಜಿಸಲಿದೆ ಎನ್ನಲಾಗಿತ್ತು. ಆದರೀಗ ಟೂರ್ನಿಯನ್ನು ಭಾರತದಲ್ಲೇ ನಡೆಸುವುದಾಗಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.

TV9 Web
| Edited By: |

Updated on: Mar 24, 2024 | 10:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಿರುವ ಐಪಿಎಲ್​ನ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯದ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಿರುವ ಐಪಿಎಲ್​ನ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯದ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

1 / 6
ಇದರ ನಡುವೆ ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಮಾಹಿತಿ ಹೊರಬಿದ್ದಿದೆ. ಪ್ರಸ್ತುತ ವರದಿ ಪ್ರಕಾರ, ಐಪಿಎಲ್ 2024ರ ಫೈನಲ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದರ ನಡುವೆ ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಮಾಹಿತಿ ಹೊರಬಿದ್ದಿದೆ. ಪ್ರಸ್ತುತ ವರದಿ ಪ್ರಕಾರ, ಐಪಿಎಲ್ 2024ರ ಫೈನಲ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

2 / 6
ಹಾಗೆಯೇ ಮೊದಲ ಕ್ವಾಲಿಫೈಯರ್ ಪಂದ್ಯ ಮತ್ತು ಎಲಿಮಿನೇಟರ್ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಕ್ವಾಲಿಫೈಯರ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿದೆ.

ಹಾಗೆಯೇ ಮೊದಲ ಕ್ವಾಲಿಫೈಯರ್ ಪಂದ್ಯ ಮತ್ತು ಎಲಿಮಿನೇಟರ್ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಕ್ವಾಲಿಫೈಯರ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿದೆ.

3 / 6
ಅಂದರೆ ಪ್ಲೇಆಫ್​ ಹಂತದ ನಾಲ್ಕು ಪಂದ್ಯಗಳಿಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಮತ್ತು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ನಾಲ್ಕು ಪಂದ್ಯಗಳನ್ನು 2 ಸ್ಟೇಡಿಯಂ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ ಎಂದು  ವರದಿಯಾಗಿದೆ.

ಅಂದರೆ ಪ್ಲೇಆಫ್​ ಹಂತದ ನಾಲ್ಕು ಪಂದ್ಯಗಳಿಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಮತ್ತು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ನಾಲ್ಕು ಪಂದ್ಯಗಳನ್ನು 2 ಸ್ಟೇಡಿಯಂ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ ಎಂದು ವರದಿಯಾಗಿದೆ.

4 / 6
ಇದಾಗ್ಯೂ ದಿನಾಂಕವನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಏಕೆಂದರೆ ಏಪ್ರಿಲ್ 19 ರಿಂದ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದರಿಂದ ಭದ್ರತಾ ವ್ಯವಸ್ಥೆ ರೂಪಿಸಲು ತೊಡಕುಂಟಾಗಲಿದೆ. ಹೀಗಾಗಿ ಆಯಾ ರಾಜ್ಯದ ಚುನಾವಣಾ ದಿನಾಂಕವನ್ನು ಪರಿಶೀಲಿಸಿ ಐಪಿಎಲ್​ನ ಉಳಿದ ಪಂದ್ಯಗಳ ವೇಳಾಪಟ್ಟಿ ಸಿದ್ಧಪಡಿಸುವಲ್ಲಿ ಬಿಸಿಸಿಐ ನಿರತವಾಗಿದೆ.

ಇದಾಗ್ಯೂ ದಿನಾಂಕವನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಏಕೆಂದರೆ ಏಪ್ರಿಲ್ 19 ರಿಂದ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದರಿಂದ ಭದ್ರತಾ ವ್ಯವಸ್ಥೆ ರೂಪಿಸಲು ತೊಡಕುಂಟಾಗಲಿದೆ. ಹೀಗಾಗಿ ಆಯಾ ರಾಜ್ಯದ ಚುನಾವಣಾ ದಿನಾಂಕವನ್ನು ಪರಿಶೀಲಿಸಿ ಐಪಿಎಲ್​ನ ಉಳಿದ ಪಂದ್ಯಗಳ ವೇಳಾಪಟ್ಟಿ ಸಿದ್ಧಪಡಿಸುವಲ್ಲಿ ಬಿಸಿಸಿಐ ನಿರತವಾಗಿದೆ.

5 / 6
ಇತ್ತ ಜೂನ್ 1 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದ್ದು, ಅದಕ್ಕೂ ಒಂದು ವಾರ ಮುಂಚಿತವಾಗಿ ಐಪಿಎಲ್ ಫೈನಲ್ ಆಯೋಜಿಸಬೇಕಿದೆ. ಹೀಗಾಗಿ ಫೈನಲ್ ಪಂದ್ಯವು ಮೇ 26 ರಂದು (ಭಾನುವಾರ) ನಡೆಯುವ ಸಾಧ್ಯತೆಯಿದೆ.

ಇತ್ತ ಜೂನ್ 1 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದ್ದು, ಅದಕ್ಕೂ ಒಂದು ವಾರ ಮುಂಚಿತವಾಗಿ ಐಪಿಎಲ್ ಫೈನಲ್ ಆಯೋಜಿಸಬೇಕಿದೆ. ಹೀಗಾಗಿ ಫೈನಲ್ ಪಂದ್ಯವು ಮೇ 26 ರಂದು (ಭಾನುವಾರ) ನಡೆಯುವ ಸಾಧ್ಯತೆಯಿದೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ