AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 2 ಸ್ಟೇಡಿಯಂನಲ್ಲಿ ಐಪಿಎಲ್​ನ ಕೊನೆಯ 4 ಪಂದ್ಯಗಳು..!

IPL 2024: ಐಪಿಎಲ್ 2024 ಅನ್ನು ವಿದೇಶಕ್ಕೆ ಶಿಫ್ಟ್ ಮಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಹಿಂದೆ 2009 ಹಾಗೂ 2014 ರ ಲೋಕಸಭಾ ಚುನಾವಣೆ ವೇಳೆ ಐಪಿಎಲ್ ಅನ್ನು ವಿದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಈ ಬಾರಿ ಕೂಡ ಐಪಿಎಲ್ ಅನ್ನು ವಿದೇಶದಲ್ಲಿ ಆಯೋಜಿಸಲಿದೆ ಎನ್ನಲಾಗಿತ್ತು. ಆದರೀಗ ಟೂರ್ನಿಯನ್ನು ಭಾರತದಲ್ಲೇ ನಡೆಸುವುದಾಗಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Mar 24, 2024 | 10:52 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಿರುವ ಐಪಿಎಲ್​ನ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯದ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಿರುವ ಐಪಿಎಲ್​ನ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯದ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

1 / 6
ಇದರ ನಡುವೆ ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಮಾಹಿತಿ ಹೊರಬಿದ್ದಿದೆ. ಪ್ರಸ್ತುತ ವರದಿ ಪ್ರಕಾರ, ಐಪಿಎಲ್ 2024ರ ಫೈನಲ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದರ ನಡುವೆ ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಮಾಹಿತಿ ಹೊರಬಿದ್ದಿದೆ. ಪ್ರಸ್ತುತ ವರದಿ ಪ್ರಕಾರ, ಐಪಿಎಲ್ 2024ರ ಫೈನಲ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

2 / 6
ಹಾಗೆಯೇ ಮೊದಲ ಕ್ವಾಲಿಫೈಯರ್ ಪಂದ್ಯ ಮತ್ತು ಎಲಿಮಿನೇಟರ್ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಕ್ವಾಲಿಫೈಯರ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿದೆ.

ಹಾಗೆಯೇ ಮೊದಲ ಕ್ವಾಲಿಫೈಯರ್ ಪಂದ್ಯ ಮತ್ತು ಎಲಿಮಿನೇಟರ್ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಕ್ವಾಲಿಫೈಯರ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿದೆ.

3 / 6
ಅಂದರೆ ಪ್ಲೇಆಫ್​ ಹಂತದ ನಾಲ್ಕು ಪಂದ್ಯಗಳಿಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಮತ್ತು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ನಾಲ್ಕು ಪಂದ್ಯಗಳನ್ನು 2 ಸ್ಟೇಡಿಯಂ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ ಎಂದು  ವರದಿಯಾಗಿದೆ.

ಅಂದರೆ ಪ್ಲೇಆಫ್​ ಹಂತದ ನಾಲ್ಕು ಪಂದ್ಯಗಳಿಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಮತ್ತು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ನಾಲ್ಕು ಪಂದ್ಯಗಳನ್ನು 2 ಸ್ಟೇಡಿಯಂ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ ಎಂದು ವರದಿಯಾಗಿದೆ.

4 / 6
ಇದಾಗ್ಯೂ ದಿನಾಂಕವನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಏಕೆಂದರೆ ಏಪ್ರಿಲ್ 19 ರಿಂದ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದರಿಂದ ಭದ್ರತಾ ವ್ಯವಸ್ಥೆ ರೂಪಿಸಲು ತೊಡಕುಂಟಾಗಲಿದೆ. ಹೀಗಾಗಿ ಆಯಾ ರಾಜ್ಯದ ಚುನಾವಣಾ ದಿನಾಂಕವನ್ನು ಪರಿಶೀಲಿಸಿ ಐಪಿಎಲ್​ನ ಉಳಿದ ಪಂದ್ಯಗಳ ವೇಳಾಪಟ್ಟಿ ಸಿದ್ಧಪಡಿಸುವಲ್ಲಿ ಬಿಸಿಸಿಐ ನಿರತವಾಗಿದೆ.

ಇದಾಗ್ಯೂ ದಿನಾಂಕವನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಏಕೆಂದರೆ ಏಪ್ರಿಲ್ 19 ರಿಂದ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದರಿಂದ ಭದ್ರತಾ ವ್ಯವಸ್ಥೆ ರೂಪಿಸಲು ತೊಡಕುಂಟಾಗಲಿದೆ. ಹೀಗಾಗಿ ಆಯಾ ರಾಜ್ಯದ ಚುನಾವಣಾ ದಿನಾಂಕವನ್ನು ಪರಿಶೀಲಿಸಿ ಐಪಿಎಲ್​ನ ಉಳಿದ ಪಂದ್ಯಗಳ ವೇಳಾಪಟ್ಟಿ ಸಿದ್ಧಪಡಿಸುವಲ್ಲಿ ಬಿಸಿಸಿಐ ನಿರತವಾಗಿದೆ.

5 / 6
ಇತ್ತ ಜೂನ್ 1 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದ್ದು, ಅದಕ್ಕೂ ಒಂದು ವಾರ ಮುಂಚಿತವಾಗಿ ಐಪಿಎಲ್ ಫೈನಲ್ ಆಯೋಜಿಸಬೇಕಿದೆ. ಹೀಗಾಗಿ ಫೈನಲ್ ಪಂದ್ಯವು ಮೇ 26 ರಂದು (ಭಾನುವಾರ) ನಡೆಯುವ ಸಾಧ್ಯತೆಯಿದೆ.

ಇತ್ತ ಜೂನ್ 1 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದ್ದು, ಅದಕ್ಕೂ ಒಂದು ವಾರ ಮುಂಚಿತವಾಗಿ ಐಪಿಎಲ್ ಫೈನಲ್ ಆಯೋಜಿಸಬೇಕಿದೆ. ಹೀಗಾಗಿ ಫೈನಲ್ ಪಂದ್ಯವು ಮೇ 26 ರಂದು (ಭಾನುವಾರ) ನಡೆಯುವ ಸಾಧ್ಯತೆಯಿದೆ.

6 / 6
Follow us
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ