AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 2 ಸ್ಟೇಡಿಯಂನಲ್ಲಿ ಐಪಿಎಲ್​ನ ಕೊನೆಯ 4 ಪಂದ್ಯಗಳು..!

IPL 2024: ಐಪಿಎಲ್ 2024 ಅನ್ನು ವಿದೇಶಕ್ಕೆ ಶಿಫ್ಟ್ ಮಾಡುವುದಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಹಿಂದೆ 2009 ಹಾಗೂ 2014 ರ ಲೋಕಸಭಾ ಚುನಾವಣೆ ವೇಳೆ ಐಪಿಎಲ್ ಅನ್ನು ವಿದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಈ ಬಾರಿ ಕೂಡ ಐಪಿಎಲ್ ಅನ್ನು ವಿದೇಶದಲ್ಲಿ ಆಯೋಜಿಸಲಿದೆ ಎನ್ನಲಾಗಿತ್ತು. ಆದರೀಗ ಟೂರ್ನಿಯನ್ನು ಭಾರತದಲ್ಲೇ ನಡೆಸುವುದಾಗಿ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್ ತಿಳಿಸಿದ್ದಾರೆ.

TV9 Web
| Edited By: |

Updated on: Mar 24, 2024 | 10:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಿರುವ ಐಪಿಎಲ್​ನ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯದ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಿರುವ ಐಪಿಎಲ್​ನ ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ. ಇನ್ನುಳಿದ ಪಂದ್ಯದ ವೇಳಾಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

1 / 6
ಇದರ ನಡುವೆ ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಮಾಹಿತಿ ಹೊರಬಿದ್ದಿದೆ. ಪ್ರಸ್ತುತ ವರದಿ ಪ್ರಕಾರ, ಐಪಿಎಲ್ 2024ರ ಫೈನಲ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದರ ನಡುವೆ ಈ ಬಾರಿಯ ಐಪಿಎಲ್​ನ ಪ್ಲೇಆಫ್ ಪಂದ್ಯಗಳು ನಡೆಯುವುದೆಲ್ಲಿ ಎಂಬ ಮಾಹಿತಿ ಹೊರಬಿದ್ದಿದೆ. ಪ್ರಸ್ತುತ ವರದಿ ಪ್ರಕಾರ, ಐಪಿಎಲ್ 2024ರ ಫೈನಲ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

2 / 6
ಹಾಗೆಯೇ ಮೊದಲ ಕ್ವಾಲಿಫೈಯರ್ ಪಂದ್ಯ ಮತ್ತು ಎಲಿಮಿನೇಟರ್ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಕ್ವಾಲಿಫೈಯರ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿದೆ.

ಹಾಗೆಯೇ ಮೊದಲ ಕ್ವಾಲಿಫೈಯರ್ ಪಂದ್ಯ ಮತ್ತು ಎಲಿಮಿನೇಟರ್ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು 2ನೇ ಕ್ವಾಲಿಫೈಯರ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಜರುಗಲಿದೆ.

3 / 6
ಅಂದರೆ ಪ್ಲೇಆಫ್​ ಹಂತದ ನಾಲ್ಕು ಪಂದ್ಯಗಳಿಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಮತ್ತು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ನಾಲ್ಕು ಪಂದ್ಯಗಳನ್ನು 2 ಸ್ಟೇಡಿಯಂ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ ಎಂದು  ವರದಿಯಾಗಿದೆ.

ಅಂದರೆ ಪ್ಲೇಆಫ್​ ಹಂತದ ನಾಲ್ಕು ಪಂದ್ಯಗಳಿಗೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂ ಮತ್ತು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ನಾಲ್ಕು ಪಂದ್ಯಗಳನ್ನು 2 ಸ್ಟೇಡಿಯಂ ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ ಎಂದು ವರದಿಯಾಗಿದೆ.

4 / 6
ಇದಾಗ್ಯೂ ದಿನಾಂಕವನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಏಕೆಂದರೆ ಏಪ್ರಿಲ್ 19 ರಿಂದ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದರಿಂದ ಭದ್ರತಾ ವ್ಯವಸ್ಥೆ ರೂಪಿಸಲು ತೊಡಕುಂಟಾಗಲಿದೆ. ಹೀಗಾಗಿ ಆಯಾ ರಾಜ್ಯದ ಚುನಾವಣಾ ದಿನಾಂಕವನ್ನು ಪರಿಶೀಲಿಸಿ ಐಪಿಎಲ್​ನ ಉಳಿದ ಪಂದ್ಯಗಳ ವೇಳಾಪಟ್ಟಿ ಸಿದ್ಧಪಡಿಸುವಲ್ಲಿ ಬಿಸಿಸಿಐ ನಿರತವಾಗಿದೆ.

ಇದಾಗ್ಯೂ ದಿನಾಂಕವನ್ನು ಇನ್ನೂ ಸಹ ನಿಗದಿ ಮಾಡಲಾಗಿಲ್ಲ. ಏಕೆಂದರೆ ಏಪ್ರಿಲ್ 19 ರಿಂದ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇದರಿಂದ ಭದ್ರತಾ ವ್ಯವಸ್ಥೆ ರೂಪಿಸಲು ತೊಡಕುಂಟಾಗಲಿದೆ. ಹೀಗಾಗಿ ಆಯಾ ರಾಜ್ಯದ ಚುನಾವಣಾ ದಿನಾಂಕವನ್ನು ಪರಿಶೀಲಿಸಿ ಐಪಿಎಲ್​ನ ಉಳಿದ ಪಂದ್ಯಗಳ ವೇಳಾಪಟ್ಟಿ ಸಿದ್ಧಪಡಿಸುವಲ್ಲಿ ಬಿಸಿಸಿಐ ನಿರತವಾಗಿದೆ.

5 / 6
ಇತ್ತ ಜೂನ್ 1 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದ್ದು, ಅದಕ್ಕೂ ಒಂದು ವಾರ ಮುಂಚಿತವಾಗಿ ಐಪಿಎಲ್ ಫೈನಲ್ ಆಯೋಜಿಸಬೇಕಿದೆ. ಹೀಗಾಗಿ ಫೈನಲ್ ಪಂದ್ಯವು ಮೇ 26 ರಂದು (ಭಾನುವಾರ) ನಡೆಯುವ ಸಾಧ್ಯತೆಯಿದೆ.

ಇತ್ತ ಜೂನ್ 1 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದ್ದು, ಅದಕ್ಕೂ ಒಂದು ವಾರ ಮುಂಚಿತವಾಗಿ ಐಪಿಎಲ್ ಫೈನಲ್ ಆಯೋಜಿಸಬೇಕಿದೆ. ಹೀಗಾಗಿ ಫೈನಲ್ ಪಂದ್ಯವು ಮೇ 26 ರಂದು (ಭಾನುವಾರ) ನಡೆಯುವ ಸಾಧ್ಯತೆಯಿದೆ.

6 / 6
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ