AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗಾಯವನ್ನು ಮರೆಮಾಚುತ್ತಿದ್ದಾರಾ ಹಾರ್ದಿಕ್ ಪಾಂಡ್ಯ?

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯಲ್ಲಿ ಹಾರ್ದಿಕ್ ಪಾಂಡ್ಯ ಇದುವರೆಗೆ 48 ಎಸೆತಗಳನ್ನು ಎಸೆದಿದ್ದಾರೆ. ಈ ವೇಳೆ 89 ರನ್​ಗಳನ್ನು ನೀಡಿರುವ ಅವರು ಪಡೆದಿರುವುದು ಕೇವಲ 1 ವಿಕೆಟ್ ಮಾತ್ರ. ಅಂದರೆ ಪ್ರತಿ ಓವರ್​ಗೆ 11.13 ರ ಸರಾಸರಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಮುಂಬೈ ಇಂಡಿಯನ್ಸ್ ಪಾಲಿಗೆ ದುಬಾರಿಯಾಗಿ ಪರಿಣಮಿಸಿದ್ದಾರೆ.

TV9 Web
| Edited By: |

Updated on: Apr 13, 2024 | 1:29 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17ರ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿರುವ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಮುಂಬೈ ಇಂಡಿಯನ್ಸ್ ತಂಡದ ಕಪ್ತಾನನ ಹೊಸ ನಡೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17ರ ಮೂಲಕ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಿರುವ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಮುಂಬೈ ಇಂಡಿಯನ್ಸ್ ತಂಡದ ಕಪ್ತಾನನ ಹೊಸ ನಡೆ.

1 / 6
ಹೌದು, ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೊದಲೆರಡು ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಇನಿಂಗ್ಸ್​ನ ಮೊದಲ ಓವರ್ ಎಸೆದಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ಪಾಂಡ್ಯ ಒಂದೇ ಒಂದು ಓವರ್  ಬೌಲಿಂಗ್ ಮಾಡಿರಲಿಲ್ಲ.

ಹೌದು, ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೊದಲೆರಡು ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಇನಿಂಗ್ಸ್​ನ ಮೊದಲ ಓವರ್ ಎಸೆದಿದ್ದರು. ಆದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ಪಾಂಡ್ಯ ಒಂದೇ ಒಂದು ಓವರ್ ಬೌಲಿಂಗ್ ಮಾಡಿರಲಿಲ್ಲ.

2 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಎಸೆದಿದ್ದು ಕೇವಲ 1 ಓವರ್​ ಮಾತ್ರ. ಅಂದರೆ ಮೊದಲ ಎರಡು ಪಂದ್ಯಗಳಲ್ಲಿ ಪೂರ್ಣ ಪ್ರಮಾಣದ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ಪಾಂಡ್ಯ ಆ ಬಳಿಕ ಬೌಲಿಂಗ್ ಮಾಡದಿರುವುದು ಹೊಸ ಅನುಮಾನಕ್ಕೆ ಕಾರಣವಾಗಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲೂ ಹಾರ್ದಿಕ್ ಪಾಂಡ್ಯ ಎಸೆದಿದ್ದು ಕೇವಲ 1 ಓವರ್​ ಮಾತ್ರ. ಅಂದರೆ ಮೊದಲ ಎರಡು ಪಂದ್ಯಗಳಲ್ಲಿ ಪೂರ್ಣ ಪ್ರಮಾಣದ ಆಲ್​ರೌಂಡರ್ ಆಗಿ ಕಾಣಿಸಿಕೊಂಡಿದ್ದ ಪಾಂಡ್ಯ ಆ ಬಳಿಕ ಬೌಲಿಂಗ್ ಮಾಡದಿರುವುದು ಹೊಸ ಅನುಮಾನಕ್ಕೆ ಕಾರಣವಾಗಿದೆ.

3 / 6
ಅದರಲ್ಲೂ ಭುಜದ ನೋವಿನ ಕಾರಣ ಹಾರ್ದಿಕ್ ಪಾಂಡ್ಯ ಬೌಲಿಂಗ್​ ಮಾಡಲು ಹಿಂದೇಟು ಹಾಕುತ್ತಿದ್ದಾರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೂಡ ಪಾಂಡ್ಯ ತನ್ನ ತೋಳು ನೋವಿನ ಸಮಸ್ಯೆಯನ್ನು ಮರೆಮಾಚಿ ಟಿ20 ವಿಶ್ವಕಪ್ 2021ರ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಬಳಿಕ ಅವರು ಸಂಪೂರ್ಣ 4 ಓವರ್​ಗಳನ್ನು ಎಸೆಯಲು ಹಿಂದೇಟು ಹಾಕಿದ್ದರು.

ಅದರಲ್ಲೂ ಭುಜದ ನೋವಿನ ಕಾರಣ ಹಾರ್ದಿಕ್ ಪಾಂಡ್ಯ ಬೌಲಿಂಗ್​ ಮಾಡಲು ಹಿಂದೇಟು ಹಾಕುತ್ತಿದ್ದಾರಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೂಡ ಪಾಂಡ್ಯ ತನ್ನ ತೋಳು ನೋವಿನ ಸಮಸ್ಯೆಯನ್ನು ಮರೆಮಾಚಿ ಟಿ20 ವಿಶ್ವಕಪ್ 2021ರ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೆ ಬಳಿಕ ಅವರು ಸಂಪೂರ್ಣ 4 ಓವರ್​ಗಳನ್ನು ಎಸೆಯಲು ಹಿಂದೇಟು ಹಾಕಿದ್ದರು.

4 / 6
ಇದೀಗ ಮತ್ತೆ ಬೌಲಿಂಗ್ ಮಾಡಲು ಹಿಂದೇಟು ಹಾಕುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​​​ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಹಾರ್ದಿಕ್ ಪಾಂಡ್ಯ ಆಲ್​ರೌಂಡರ್​ ಆಗಿ ತಮ್ಮ ಕ್ಷಮತೆಯನ್ನು ಸಾಬೀತುಪಡಿಸಬೇಕಿದೆ. ಆದರೆ ಇತ್ತ 5 ಪಂದ್ಯಗಳಲ್ಲಿ ಪಾಂಡ್ಯ ಎಸೆದಿರುವುದು ಕೇವಲ 8 ಓವರ್​ಗಳು ಮಾತ್ರ.

ಇದೀಗ ಮತ್ತೆ ಬೌಲಿಂಗ್ ಮಾಡಲು ಹಿಂದೇಟು ಹಾಕುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​​​ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಹಾರ್ದಿಕ್ ಪಾಂಡ್ಯ ಆಲ್​ರೌಂಡರ್​ ಆಗಿ ತಮ್ಮ ಕ್ಷಮತೆಯನ್ನು ಸಾಬೀತುಪಡಿಸಬೇಕಿದೆ. ಆದರೆ ಇತ್ತ 5 ಪಂದ್ಯಗಳಲ್ಲಿ ಪಾಂಡ್ಯ ಎಸೆದಿರುವುದು ಕೇವಲ 8 ಓವರ್​ಗಳು ಮಾತ್ರ.

5 / 6
ಇದೀಗ ಅವರು ಫಿಟ್​​ನೆಸ್ ಸಮಸ್ಯೆಯನ್ನು ಮರೆಮಾಚುವ ಸಲುವಾಗಿಯೇ ಬೌಲಿಂಗ್​ನಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಅಪವಾದಗಳು ಕೇಳಿ ಬರುತ್ತಿದೆ. ಈ ಅಪವಾದವನ್ನು ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡುವ ಮೂಲಕ ತೊಡೆದು ಹಾಕಲಿದ್ದಾರಾ ಕಾದು ನೋಡಬೇಕಿದೆ.

ಇದೀಗ ಅವರು ಫಿಟ್​​ನೆಸ್ ಸಮಸ್ಯೆಯನ್ನು ಮರೆಮಾಚುವ ಸಲುವಾಗಿಯೇ ಬೌಲಿಂಗ್​ನಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಅಪವಾದಗಳು ಕೇಳಿ ಬರುತ್ತಿದೆ. ಈ ಅಪವಾದವನ್ನು ಹಾರ್ದಿಕ್ ಪಾಂಡ್ಯ ಮುಂದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡುವ ಮೂಲಕ ತೊಡೆದು ಹಾಕಲಿದ್ದಾರಾ ಕಾದು ನೋಡಬೇಕಿದೆ.

6 / 6
Web contact
Web contact

TV9 Kannada

Read More
Follow Us
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ