AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಬಟ್ಲರ್​ ಭರ್ಜರಿ ಬ್ಯಾಟಿಂಗ್​ಗೆ ಹಳೆಯ ದಾಖಲೆಗಳು ಧೂಳೀಪಟ

IPL 2024: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್​ನ (IPL 2024) 31ನೇ ಪಂದ್ಯದಲ್ಲಿ ಜೋಸ್ ಬಟ್ಲರ್ 60 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿ ಮಿಂಚಿದ್ದಾರೆ. ಈ ಭರ್ಜರಿ ಸೆಂಚುರಿಯೊಂದಿಗೆ ಬಟ್ಲರ್ ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಅದು ಸಹ ಗೇಲ್, ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on: Apr 17, 2024 | 11:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ (Virat Kohli) ಹೆಸರಿನಲ್ಲಿದೆ. ಇನ್ನು ಐಪಿಎಲ್​ನಲ್ಲಿ ವೇಗದ ಸೆಂಚುರಿ ಸಿಡಿಸಿದ ರೆಕಾರ್ಡ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಈ ಎರಡು ಶತಕಗಳ ದಾಖಲೆಯ ಹೊರತಾಗಿ ಇದೀಗ ಜೋಸ್ ಬಟ್ಲರ್ (Jos Buttler) ಐಪಿಎಲ್​ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಸಹ ಕಿಂಗ್ ಕೊಹ್ಲಿ-ಕ್ರೀಸ್ ಗೇಲ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ (Virat Kohli) ಹೆಸರಿನಲ್ಲಿದೆ. ಇನ್ನು ಐಪಿಎಲ್​ನಲ್ಲಿ ವೇಗದ ಸೆಂಚುರಿ ಸಿಡಿಸಿದ ರೆಕಾರ್ಡ್ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಈ ಎರಡು ಶತಕಗಳ ದಾಖಲೆಯ ಹೊರತಾಗಿ ಇದೀಗ ಜೋಸ್ ಬಟ್ಲರ್ (Jos Buttler) ಐಪಿಎಲ್​ನಲ್ಲಿ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಸಹ ಕಿಂಗ್ ಕೊಹ್ಲಿ-ಕ್ರೀಸ್ ಗೇಲ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಐಪಿಎಲ್​ ಇತಿಹಾಸದಲ್ಲಿ ಶತಕ ಸಿಡಿಸಿ ಪಂದ್ಯ ಗೆಲ್ಲಿಸಿಕೊಟ್ಟ ವಿಶೇಷ ದಾಖಲೆಯೊಂದು ಜೋಸ್ ಬಟ್ಲರ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

ಅಂದರೆ ಐಪಿಎಲ್​ ಇತಿಹಾಸದಲ್ಲಿ ಶತಕ ಸಿಡಿಸಿ ಪಂದ್ಯ ಗೆಲ್ಲಿಸಿಕೊಟ್ಟ ವಿಶೇಷ ದಾಖಲೆಯೊಂದು ಜೋಸ್ ಬಟ್ಲರ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು.

2 / 6
ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಐಪಿಎಲ್​ನಲ್ಲಿ 6 ಶತಕಗಳನ್ನು ಬಾರಿಸಿದ್ದಾರೆ. ಗೇಲ್ ಶತಕ ಸಿಡಿಸಿದ ಎಲ್ಲಾ ಪಂದ್ಯಗಳಲ್ಲೂ ಆರ್​ಸಿಬಿ/ಪಂಜಾಬ್ ಕಿಂಗ್ಸ್​ ಜಯ ಸಾಧಿಸಿದೆ.

ಯೂನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಐಪಿಎಲ್​ನಲ್ಲಿ 6 ಶತಕಗಳನ್ನು ಬಾರಿಸಿದ್ದಾರೆ. ಗೇಲ್ ಶತಕ ಸಿಡಿಸಿದ ಎಲ್ಲಾ ಪಂದ್ಯಗಳಲ್ಲೂ ಆರ್​ಸಿಬಿ/ಪಂಜಾಬ್ ಕಿಂಗ್ಸ್​ ಜಯ ಸಾಧಿಸಿದೆ.

3 / 6
ಇನ್ನು ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 8 ಶತಕಗಳನ್ನು ಸಿಡಿಸಿದ್ದಾರೆ. ಈ ವೇಳೆ ಐದು ಪಂದ್ಯಗಳಲ್ಲಿ ಮಾತ್ರ ಆರ್​ಸಿಬಿ ಗೆದ್ದಿದೆ. ಅಂದರೆ ಕೊಹ್ಲಿ ಸೆಂಚುರಿ ಬಾರಿಸಿದಾಗ ಆರ್​ಸಿಬಿ ತಂಡ ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ.

ಇನ್ನು ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 8 ಶತಕಗಳನ್ನು ಸಿಡಿಸಿದ್ದಾರೆ. ಈ ವೇಳೆ ಐದು ಪಂದ್ಯಗಳಲ್ಲಿ ಮಾತ್ರ ಆರ್​ಸಿಬಿ ಗೆದ್ದಿದೆ. ಅಂದರೆ ಕೊಹ್ಲಿ ಸೆಂಚುರಿ ಬಾರಿಸಿದಾಗ ಆರ್​ಸಿಬಿ ತಂಡ ಮೂರು ಪಂದ್ಯಗಳಲ್ಲಿ ಸೋಲನುಭವಿಸಿದೆ.

4 / 6
ಇದೀಗ ಜೋಸ್ ಬಟ್ಲರ್ ಐಪಿಎಲ್​ನಲ್ಲಿ 7ನೇ ಬಾರಿ ಶತಕ ಬಾರಿಸಿದ್ದಾರೆ. ವಿಶೇಷ ಎಂದರೆ ಬಟ್ಲರ್​ ಸೆಂಚುರಿ ಸಿಡಿಸಿದಾಗ ರಾಜಸ್ಥಾನ್ ರಾಯಲ್ಸ್ ತಂಡವು ಒಮ್ಮೆಯೂ ಸೋತಿಲ್ಲ. ಅಂದರೆ ಐಪಿಎಲ್​ ಇತಿಹಾಸದಲ್ಲಿ ಶತಕ ಸಿಡಿಸಿ ಅತೀ ಹೆಚ್ಚು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಆಟಗಾರ ಎಂಬ ಹೆಗ್ಗಳಿಕೆಗೆ ಜೋಸ್ ಬಟ್ಲರ್ ಪಾತ್ರರಾಗಿದ್ದಾರೆ.

ಇದೀಗ ಜೋಸ್ ಬಟ್ಲರ್ ಐಪಿಎಲ್​ನಲ್ಲಿ 7ನೇ ಬಾರಿ ಶತಕ ಬಾರಿಸಿದ್ದಾರೆ. ವಿಶೇಷ ಎಂದರೆ ಬಟ್ಲರ್​ ಸೆಂಚುರಿ ಸಿಡಿಸಿದಾಗ ರಾಜಸ್ಥಾನ್ ರಾಯಲ್ಸ್ ತಂಡವು ಒಮ್ಮೆಯೂ ಸೋತಿಲ್ಲ. ಅಂದರೆ ಐಪಿಎಲ್​ ಇತಿಹಾಸದಲ್ಲಿ ಶತಕ ಸಿಡಿಸಿ ಅತೀ ಹೆಚ್ಚು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಆಟಗಾರ ಎಂಬ ಹೆಗ್ಗಳಿಕೆಗೆ ಜೋಸ್ ಬಟ್ಲರ್ ಪಾತ್ರರಾಗಿದ್ದಾರೆ.

5 / 6
ಇದೀಗ 7 ಶತಕಗಳೊಂದಿಗೆ ಐಪಿಎಲ್​ ಸೆಂಚುರಿ ಸರದಾರರ ಪಟ್ಟಿಯಲ್ಲಿ ಜೋಸ್ ಬಟ್ಲರ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಬಟ್ಲರ್ ಬ್ಯಾಟ್​ನಿಂದ ಇನ್ನೊಂದು ಶತಕ ಮೂಡಿಬಂದರೆ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಸರಿಗಟ್ಟಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಸೆಂಚುರಿ ದಾಖಲೆಯನ್ನು ಜೋಸ್ ಬಟ್ಲರ್ ಸರಿಗಟ್ಟಲಿದ್ದಾರಾ ಕಾದು ನೋಡಬೇಕಿದೆ.

ಇದೀಗ 7 ಶತಕಗಳೊಂದಿಗೆ ಐಪಿಎಲ್​ ಸೆಂಚುರಿ ಸರದಾರರ ಪಟ್ಟಿಯಲ್ಲಿ ಜೋಸ್ ಬಟ್ಲರ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಬಟ್ಲರ್ ಬ್ಯಾಟ್​ನಿಂದ ಇನ್ನೊಂದು ಶತಕ ಮೂಡಿಬಂದರೆ ವಿರಾಟ್ ಕೊಹ್ಲಿ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಸರಿಗಟ್ಟಬಹುದು. ಹೀಗಾಗಿ ಈ ಬಾರಿಯ ಐಪಿಎಲ್​ ಮೂಲಕ ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಸೆಂಚುರಿ ದಾಖಲೆಯನ್ನು ಜೋಸ್ ಬಟ್ಲರ್ ಸರಿಗಟ್ಟಲಿದ್ದಾರಾ ಕಾದು ನೋಡಬೇಕಿದೆ.

6 / 6
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು