Kavya Maran: ಯಾರಿಲ್ಲ ಯಾರಿಲ್ಲ… ಒಂಟಿಯಾಗಿ ಪಂದ್ಯ ವೀಕ್ಷಿಸಿದ ಕಾವ್ಯ ಮಾರನ್..!

IPL 2024 KKR vs SRH: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್ ಹೈದರಾಬಾದ್ ತಂಡವು 19.3 ಓವರ್​ಗಳಲ್ಲಿ 159 ರನ್​ಗಳಿಸಿ ಆಲೌಟ್ ಆಯಿತು. 160 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ (51) ಹಾಗೂ ಶ್ರೇಯಸ್ ಅಯ್ಯರ್ (58) ಅಜೇಯ ಅರ್ಧಶತಕ ಬಾರಿಸಿದರು. ಈ ಮೂಲಕ ಕೇವಲ 13.4 ಓವರ್​ಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೆಲುವಿನ ದಡ ಸೇರಿಸಿದರು.

| Updated By: Digi Tech Desk

Updated on:May 22, 2024 | 9:37 AM

ಅಹಮದಾಬಾದ್​ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ​ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಅತ್ತ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಂಡಿದೆ. ಅಂದರೆ ಎಸ್​ಆರ್​ಹೆಚ್​ ತಂಡ 2ನೇ ಕ್ವಾಲಿಫೈಯರ್​ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್​ಗೆ ಪ್ರವೇಶಿಸಬಹುದು.

ಅಹಮದಾಬಾದ್​ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ​ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಕೆಕೆಆರ್ ತಂಡ ಫೈನಲ್​ಗೆ ಲಗ್ಗೆಯಿಟ್ಟಿದೆ. ಅತ್ತ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಫೈನಲ್ ರೇಸ್​ನಲ್ಲಿ ಉಳಿದುಕೊಂಡಿದೆ. ಅಂದರೆ ಎಸ್​ಆರ್​ಹೆಚ್​ ತಂಡ 2ನೇ ಕ್ವಾಲಿಫೈಯರ್​ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಫೈನಲ್​ಗೆ ಪ್ರವೇಶಿಸಬಹುದು.

1 / 5
ವಿಶೇಷ ಎಂದರೆ ಈ ಮಹತ್ವದ ಪಂದ್ಯದ ವೇಳೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಸ್​ಆರ್​ಹೆಚ್ ಅಭಿಮಾನಿಗಳು ಕಡಿಮೆ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಒಂಟಿಯಾಗಿ ಕೂತು ಪಂದ್ಯ ವೀಕ್ಷಿಸುತ್ತಿರುವುದು ಕಂಡು ಬಂದಿದೆ.

ವಿಶೇಷ ಎಂದರೆ ಈ ಮಹತ್ವದ ಪಂದ್ಯದ ವೇಳೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಎಸ್​ಆರ್​ಹೆಚ್ ಅಭಿಮಾನಿಗಳು ಕಡಿಮೆ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರು. ಅದರಲ್ಲೂ ಸನ್​ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯ ಮಾರನ್ ಒಂಟಿಯಾಗಿ ಕೂತು ಪಂದ್ಯ ವೀಕ್ಷಿಸುತ್ತಿರುವುದು ಕಂಡು ಬಂದಿದೆ.

2 / 5
ಸಾಮಾನ್ಯವಾಗಿ ಕಾವ್ಯ ಮಾರನ್ ಒಂದಷ್ಟು ವಿಐಪಿ ಗುಂಪಿನೊಂದಿಗೆ ಕಾಣಿಸಿಕೊಳ್ಳುವುದು ವಾಡಿಕೆ. ಅಲ್ಲದೆ ಅವರ ಸುತ್ತ ಮುತ್ತ ಸನ್​ರೈಸರ್ಸ್ ಹೈದರಾಬಾದ್ ತಂಡದ ಆಟಗಾರರ ಕುಟುಂಬಸ್ಥರು ಕಾಣಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಯಾರೂ ಇರಲಿಲ್ಲ.

ಸಾಮಾನ್ಯವಾಗಿ ಕಾವ್ಯ ಮಾರನ್ ಒಂದಷ್ಟು ವಿಐಪಿ ಗುಂಪಿನೊಂದಿಗೆ ಕಾಣಿಸಿಕೊಳ್ಳುವುದು ವಾಡಿಕೆ. ಅಲ್ಲದೆ ಅವರ ಸುತ್ತ ಮುತ್ತ ಸನ್​ರೈಸರ್ಸ್ ಹೈದರಾಬಾದ್ ತಂಡದ ಆಟಗಾರರ ಕುಟುಂಬಸ್ಥರು ಕಾಣಿಸಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಯಾರೂ ಇರಲಿಲ್ಲ.

3 / 5
ಕಾವ್ಯ ಮಾರನ್ ಕೂತಿದ್ದ ಸೀಟಿನ ಅಕ್ಕ ಪಕ್ಕದ ಆಸನಗಳು ಖಾಲಿಯಿದ್ದವು. ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಅತ್ತ ಕಾವ್ಯ ಕೂಡ ಹತಾಶರಾದರು. ಅಲ್ಲದೆ ಸಪ್ಪೆ ಮುಖದೊಂದಿಗೆ ಇಡೀ ಪಂದ್ಯವನ್ನು ವೀಕ್ಷಿಸಿದರು. ಇದೀಗ ಒಂಟಿಯಾಗಿ ಕಾಣಿಸಿಕೊಂಡ ಕಾವ್ಯ ಮಾರನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾವ್ಯ ಮಾರನ್ ಕೂತಿದ್ದ ಸೀಟಿನ ಅಕ್ಕ ಪಕ್ಕದ ಆಸನಗಳು ಖಾಲಿಯಿದ್ದವು. ಇತ್ತ ಸನ್​ರೈಸರ್ಸ್ ಹೈದರಾಬಾದ್ ತಂಡವು ಆರಂಭಿಕ ಆಘಾತಕ್ಕೆ ಒಳಗಾಗುತ್ತಿದ್ದಂತೆ ಅತ್ತ ಕಾವ್ಯ ಕೂಡ ಹತಾಶರಾದರು. ಅಲ್ಲದೆ ಸಪ್ಪೆ ಮುಖದೊಂದಿಗೆ ಇಡೀ ಪಂದ್ಯವನ್ನು ವೀಕ್ಷಿಸಿದರು. ಇದೀಗ ಒಂಟಿಯಾಗಿ ಕಾಣಿಸಿಕೊಂಡ ಕಾವ್ಯ ಮಾರನ್ ಅವರ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 5
ಇನ್ನು ಈ ಪಂದ್ಯದಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್​ನಿಂದ ಹೊರಬಿದ್ದಿಲ್ಲ. ಎಸ್​ಆರ್​ಹೆಚ್ ತಂಡಕ್ಕೆ ಇನ್ನೊಂದು ಅವಕಾಶ ಕೂಡ ಇದೆ. ಅಂದರೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಟೀಮ್ ಜೊತೆ ಎಸ್​ಆರ್​ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಫೈನಲ್​ಗೆ ಪ್ರವೇಶಿಸುವ ಅವಕಾಶ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕಿದೆ.

ಇನ್ನು ಈ ಪಂದ್ಯದಲ್ಲಿ ಸೋತಿರುವ ಸನ್​ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್​ನಿಂದ ಹೊರಬಿದ್ದಿಲ್ಲ. ಎಸ್​ಆರ್​ಹೆಚ್ ತಂಡಕ್ಕೆ ಇನ್ನೊಂದು ಅವಕಾಶ ಕೂಡ ಇದೆ. ಅಂದರೆ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಣ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಟೀಮ್ ಜೊತೆ ಎಸ್​ಆರ್​ಹೆಚ್ ತಂಡ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಮೂಲಕ ಫೈನಲ್​ಗೆ ಪ್ರವೇಶಿಸುವ ಅವಕಾಶ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕಿದೆ.

5 / 5

Published On - 9:23 am, Wed, 22 May 24

Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ