AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಕೋಟೆಗೆ ನುಗ್ಗಿ ಹೊಡೆಯೋ KKR

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 10ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 182 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡವು 16.5 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: Mar 30, 2024 | 11:53 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಮೈದಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈ ನಾಗಾಲೋಟ ಶುರುವಾಗಿದ್ದು ಚೊಚ್ಚಲ ಐಪಿಎಲ್​ನೊಂದಿಗೆ ಎಂಬುದು ವಿಶೇಷ. ಅಂದರೆ 2008 ರಲ್ಲಿ ಆರ್​ಸಿಬಿ ತಂಡಕ್ಕೆ 140 ರನ್​ಗಳ ಹೀನಾಯ ಸೋಲುಣಿಸಿ ಐಪಿಎಲ್ ಅಭಿಯಾನ ಆರಂಭಿಸಿದ ಕೆಕೆಆರ್ ಈಗಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಮೈದಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈ ನಾಗಾಲೋಟ ಶುರುವಾಗಿದ್ದು ಚೊಚ್ಚಲ ಐಪಿಎಲ್​ನೊಂದಿಗೆ ಎಂಬುದು ವಿಶೇಷ. ಅಂದರೆ 2008 ರಲ್ಲಿ ಆರ್​ಸಿಬಿ ತಂಡಕ್ಕೆ 140 ರನ್​ಗಳ ಹೀನಾಯ ಸೋಲುಣಿಸಿ ಐಪಿಎಲ್ ಅಭಿಯಾನ ಆರಂಭಿಸಿದ ಕೆಕೆಆರ್ ಈಗಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ.

1 / 6
ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು. ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೆ 12 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 4 ಬಾರಿ ಮಾತ್ರ ಎಂದರೆ ನಂಬಲೇಬೇಕು.

ಇದಕ್ಕೆ ಸಾಕ್ಷಿಯೇ ಈ ಅಂಕಿ ಅಂಶಗಳು. ಆರ್​ಸಿಬಿ ಮತ್ತು ಕೆಕೆಆರ್ ತಂಡಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೆ 12 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 4 ಬಾರಿ ಮಾತ್ರ ಎಂದರೆ ನಂಬಲೇಬೇಕು.

2 / 6
ಅಂದರೆ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 8 ಬಾರಿ ಗೆಲುವು ದಾಖಲಿಸಿದೆ. ಅಚ್ಚರಿ ಎಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 2015 ರ ನಂತರ ಕೆಕೆಆರ್ ವಿರುದ್ಧ ಆರ್​ಸಿಬಿ ಒಂದೇ ಒಂದು ಜಯ ಸಾಧಿಸಿಲ್ಲ. ಅಂದರೆ ಸತತವಾಗಿ 6 ಬಾರಿ ಸೋಲನುಭವಿಸಿದೆ.

ಅಂದರೆ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 8 ಬಾರಿ ಗೆಲುವು ದಾಖಲಿಸಿದೆ. ಅಚ್ಚರಿ ಎಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 2015 ರ ನಂತರ ಕೆಕೆಆರ್ ವಿರುದ್ಧ ಆರ್​ಸಿಬಿ ಒಂದೇ ಒಂದು ಜಯ ಸಾಧಿಸಿಲ್ಲ. ಅಂದರೆ ಸತತವಾಗಿ 6 ಬಾರಿ ಸೋಲನುಭವಿಸಿದೆ.

3 / 6
ಆರ್​ಸಿಬಿ ತಂಡವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 2010 ರಲ್ಲಿ ಮೊದಲ ಬಾರಿಗೆ ಜಯ ಸಾಧಿಸಿತ್ತು. ಇದಾದ ಬಳಿಕ 2011, 2013 ರಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆ ನಂತರ ಗೆದ್ದಿದ್ದು 2015 ರಲ್ಲಿ. ಇದುವೇ ಕೊನೆ, ಆ ಬಳಿಕ ತನ್ನದೇ ತವರು ಮೈದಾನದಲ್ಲಿ ಕೆಕೆಆರ್​ ತಂಡಕ್ಕೆ ಸೋಲುಣಿಸಲು ಆರ್​ಸಿಬಿ ಪಡೆಗೆ ಸಾಧ್ಯವಾಗಿಲ್ಲ ಎಂಬುದೇ ಆಶ್ಚರ್ಯ.

ಆರ್​ಸಿಬಿ ತಂಡವು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 2010 ರಲ್ಲಿ ಮೊದಲ ಬಾರಿಗೆ ಜಯ ಸಾಧಿಸಿತ್ತು. ಇದಾದ ಬಳಿಕ 2011, 2013 ರಲ್ಲಿ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಆ ನಂತರ ಗೆದ್ದಿದ್ದು 2015 ರಲ್ಲಿ. ಇದುವೇ ಕೊನೆ, ಆ ಬಳಿಕ ತನ್ನದೇ ತವರು ಮೈದಾನದಲ್ಲಿ ಕೆಕೆಆರ್​ ತಂಡಕ್ಕೆ ಸೋಲುಣಿಸಲು ಆರ್​ಸಿಬಿ ಪಡೆಗೆ ಸಾಧ್ಯವಾಗಿಲ್ಲ ಎಂಬುದೇ ಆಶ್ಚರ್ಯ.

4 / 6
ಇನ್ನು ಕೆಕೆಆರ್ ತಂಡವು 2008 ರಲ್ಲಿ ಆರ್​ಸಿಬಿ ತಂಡವನ್ನು ಮೊದಲ ಬಾರಿ ಬಗ್ಗು ಬಡಿದರೆ, ಆ ಬಳಿಕ 2012, 2016, 2017, 2018, 2019, 2023 ಮತ್ತು ಇದೀಗ 2024 ರಲ್ಲಿ ಜಯ ಸಾಧಿಸಿದೆ. ಈ ಮೂಲಕ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಕೆಕೆಆರ್ ತಂಡವು ಪಾರುಪತ್ಯ ಮೆರೆಯುತ್ತಾ ಬಂದಿದೆ.

ಇನ್ನು ಕೆಕೆಆರ್ ತಂಡವು 2008 ರಲ್ಲಿ ಆರ್​ಸಿಬಿ ತಂಡವನ್ನು ಮೊದಲ ಬಾರಿ ಬಗ್ಗು ಬಡಿದರೆ, ಆ ಬಳಿಕ 2012, 2016, 2017, 2018, 2019, 2023 ಮತ್ತು ಇದೀಗ 2024 ರಲ್ಲಿ ಜಯ ಸಾಧಿಸಿದೆ. ಈ ಮೂಲಕ ಆರ್​ಸಿಬಿ ತಂಡದ ತವರು ಮೈದಾನದಲ್ಲಿ ಕೆಕೆಆರ್ ತಂಡವು ಪಾರುಪತ್ಯ ಮೆರೆಯುತ್ತಾ ಬಂದಿದೆ.

5 / 6
ಅದು ಈ ಬಾರಿ ಕೂಡ ಮುಂದುವರೆದಿದ್ದು, ಒಂದಾರ್ಥದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪಾಲಿಗೆ ತವರು ಮೈದಾನವಾಗಿ ಮಾರ್ಪಟ್ಟಿದೆ. ಇದಕ್ಕೆ ಸಾಕ್ಷಿಯೇ ಈ ಮೈದಾನದಲ್ಲಿ ನಡೆದ ಕಳೆದ 6 ಪಂದ್ಯಗಳಲ್ಲೂ ಆರ್​ಸಿಬಿ ವಿರುದ್ಧ ಕೆಕೆಆರ್ ತಂಡ ಜಯಭೇರಿ ಬಾರಿಸಿರುವುದು.

ಅದು ಈ ಬಾರಿ ಕೂಡ ಮುಂದುವರೆದಿದ್ದು, ಒಂದಾರ್ಥದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪಾಲಿಗೆ ತವರು ಮೈದಾನವಾಗಿ ಮಾರ್ಪಟ್ಟಿದೆ. ಇದಕ್ಕೆ ಸಾಕ್ಷಿಯೇ ಈ ಮೈದಾನದಲ್ಲಿ ನಡೆದ ಕಳೆದ 6 ಪಂದ್ಯಗಳಲ್ಲೂ ಆರ್​ಸಿಬಿ ವಿರುದ್ಧ ಕೆಕೆಆರ್ ತಂಡ ಜಯಭೇರಿ ಬಾರಿಸಿರುವುದು.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ