AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕೊನೆಗೂ ಹ್ಯಾಟ್ರಿಕ್ ಗೆಲುವು ಕಂಡ KKR

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಂಡಿರುವುದು ಕೇವಲ 2 ತಂಡಗಳು ಮಾತ್ರ. ಈ ಪಟ್ಟಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಗ್ರಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ದ್ವಿತೀಯ ಸ್ಥಾನದಲ್ಲಿದೆ. ಈ ಎರಡು ತಂಡಗಳನ್ನು ಹೊರತುಪಡಿಸಿ ಉಳಿದೆಲ್ಲಾ ತಂಡಗಳು ಮೊದಲ ಮೂರು ಮ್ಯಾಚ್​ಗಳಲ್ಲಿ ಕನಿಷ್ಠ ಒಂದು ಸೋಲು ಕಂಡಿದೆ.

TV9 Web
| Edited By: |

Updated on: Apr 04, 2024 | 7:28 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಶುರುವಾಗಿ 16 ವರ್ಷಗಳೇ ಕಳೆದಿವೆ. ಇದುವರೆ 16 ಸೀಸನ್​ಗಳನ್ನು ಆಡಲಾಗಿದ್ದು, ಇದೀಗ 17ನೇ ಸೀಸನ್ ಚಾಲ್ತಿಯಲ್ಲಿದೆ. ಈ ಎಲ್ಲಾ ಸೀಸನ್​ಗಳನ್ನು ಆಡಿದ ತಂಡಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕೂಡ ಒಂದು. ಆದರೆ ಕಳೆದ ಹದಿನಾರು ಸೀಸನ್​ಗಳಲ್ಲಿ ಒಮ್ಮೆಯೂ ಕೆಕೆಆರ್ ಮೊದಲ ಮೂರು ಪಂದ್ಯಗಳನ್ನು ಗೆದ್ದಿರಲಿಲ್ಲ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಶುರುವಾಗಿ 16 ವರ್ಷಗಳೇ ಕಳೆದಿವೆ. ಇದುವರೆ 16 ಸೀಸನ್​ಗಳನ್ನು ಆಡಲಾಗಿದ್ದು, ಇದೀಗ 17ನೇ ಸೀಸನ್ ಚಾಲ್ತಿಯಲ್ಲಿದೆ. ಈ ಎಲ್ಲಾ ಸೀಸನ್​ಗಳನ್ನು ಆಡಿದ ತಂಡಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಕೂಡ ಒಂದು. ಆದರೆ ಕಳೆದ ಹದಿನಾರು ಸೀಸನ್​ಗಳಲ್ಲಿ ಒಮ್ಮೆಯೂ ಕೆಕೆಆರ್ ಮೊದಲ ಮೂರು ಪಂದ್ಯಗಳನ್ನು ಗೆದ್ದಿರಲಿಲ್ಲ ಎಂಬುದು ವಿಶೇಷ.

1 / 5
ಆದರೆ ಈ ಬಾರಿ ಕೆಕೆಆರ್ ಬಾಯ್ಸ್ ಹೊಸ ಅಧ್ಯಾಯ ಬರೆದಿದ್ದಾರೆ. ಅದು ಸಹ ಭರ್ಜರಿ ಗೆಲುವುಗಳ ಮೂಲಕ ಎಂಬುದು ವಿಶೇಷ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 4 ರನ್​ಗಳ ರೋಚಕ ಜಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಕೆಕೆಆರ್, ಆ ಬಳಿಕ ಆರ್​ಸಿಬಿ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

ಆದರೆ ಈ ಬಾರಿ ಕೆಕೆಆರ್ ಬಾಯ್ಸ್ ಹೊಸ ಅಧ್ಯಾಯ ಬರೆದಿದ್ದಾರೆ. ಅದು ಸಹ ಭರ್ಜರಿ ಗೆಲುವುಗಳ ಮೂಲಕ ಎಂಬುದು ವಿಶೇಷ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 4 ರನ್​ಗಳ ರೋಚಕ ಜಯದೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ್ದ ಕೆಕೆಆರ್, ಆ ಬಳಿಕ ಆರ್​ಸಿಬಿ ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

2 / 5
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೆಕೆಆರ್ 106 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್​ ಸೀಸನ್​ನ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಇದರೊಂದಿಗೆ ಕಳೆದ 16 ಸೀಸನ್​ಗಳಲ್ಲಿ ಸಾಧ್ಯವಾಗದ ಉತ್ತಮ ಆರಂಭವನ್ನು ಪಡೆಯುವಲ್ಲಿ ಕೆಕೆಆರ್ ಪಡೆ ಯಶಸ್ವಿಯಾಗಿದೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೆಕೆಆರ್ 106 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಐಪಿಎಲ್​ ಸೀಸನ್​ನ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ. ಇದರೊಂದಿಗೆ ಕಳೆದ 16 ಸೀಸನ್​ಗಳಲ್ಲಿ ಸಾಧ್ಯವಾಗದ ಉತ್ತಮ ಆರಂಭವನ್ನು ಪಡೆಯುವಲ್ಲಿ ಕೆಕೆಆರ್ ಪಡೆ ಯಶಸ್ವಿಯಾಗಿದೆ.

3 / 5
ಸದ್ಯ ಮೂರು ಗೆಲುವುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದು, ಒಟ್ಟು 6 ಅಂಕಗಳನ್ನು ಹೊಂದಿದೆ. ಹಾಗೆಯೇ ಕೆಕೆಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +2.518 ಇರುವುದು ವಿಶೇಷ. ಅಂದರೆ ಆರಂಭದಲ್ಲೇ ಉತ್ತಮ ರನ್ ರೇಟ್ ಸಂಪಾದಿಸುವಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಶಸ್ವಿಯಾಗಿದೆ.

ಸದ್ಯ ಮೂರು ಗೆಲುವುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದು, ಒಟ್ಟು 6 ಅಂಕಗಳನ್ನು ಹೊಂದಿದೆ. ಹಾಗೆಯೇ ಕೆಕೆಆರ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +2.518 ಇರುವುದು ವಿಶೇಷ. ಅಂದರೆ ಆರಂಭದಲ್ಲೇ ಉತ್ತಮ ರನ್ ರೇಟ್ ಸಂಪಾದಿಸುವಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಶಸ್ವಿಯಾಗಿದೆ.

4 / 5
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ತನ್ನ ಮುಂದಿನ ಪಂದ್ಯವನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಆಡಲಿದೆ. ಏಪ್ರಿಲ್ 8 ರಂದು ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಕೆಕೆಆರ್ ಆಟಗಾರರಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ತನ್ನ ಮುಂದಿನ ಪಂದ್ಯವನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಆಡಲಿದೆ. ಏಪ್ರಿಲ್ 8 ರಂದು ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲೂ ಕೆಕೆಆರ್ ಆಟಗಾರರಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!