AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಿಂದ ಹಿಂದೆ ಸರಿದ ಇಂಗ್ಲೆಂಡ್​ನ ನಾಲ್ವರು ಆಟಗಾರರು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​) ಸೀಸನ್-17 ಆರಂಭಕ್ಕೂ ಮುನ್ನವೇ ಕೆಲ ಆಟಗಾರರು ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇವರಲ್ಲಿ ಬಹುತೇಕರು ಇಂಗ್ಲೆಂಡ್ ಆಟಗಾರರು ಎಂಬುದು ವಿಶೇಷ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಸ್ಥಾನ ಪಡೆದು ಇದೀಗ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ಐಪಿಎಲ್​ ಫ್ರಾಂಚೈಸಿಗಳು ಸಂಕಷ್ಟಕ್ಕೆ ಸಿಲುಕಿದೆ.

TV9 Web
| Edited By: |

Updated on: Mar 14, 2024 | 11:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನವೇ ಐಪಿಎಲ್ ಫ್ರಾಂಚೈಸಿಗಳಿಗೆ ಹೊಸ ಚಿಂತೆ ಶುರುವಾಗಿದೆ. ಅದು ಕೂಡ ಇಂಗ್ಲೆಂಡ್ ಆಟಗಾರರಿಂದ ಎಂಬುದು ವಿಶೇಷ. ಅಂದರೆ ಈ ಬಾರಿಯ ಹರಾಜಿನ ಮೂಲಕ ಆಯ್ಕೆಯಾಗಿದ್ದ ಇಂಗ್ಲೆಂಡ್​ನ ಕೆಲ ಆಟಗಾರರು ಇದೀಗ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನವೇ ಐಪಿಎಲ್ ಫ್ರಾಂಚೈಸಿಗಳಿಗೆ ಹೊಸ ಚಿಂತೆ ಶುರುವಾಗಿದೆ. ಅದು ಕೂಡ ಇಂಗ್ಲೆಂಡ್ ಆಟಗಾರರಿಂದ ಎಂಬುದು ವಿಶೇಷ. ಅಂದರೆ ಈ ಬಾರಿಯ ಹರಾಜಿನ ಮೂಲಕ ಆಯ್ಕೆಯಾಗಿದ್ದ ಇಂಗ್ಲೆಂಡ್​ನ ಕೆಲ ಆಟಗಾರರು ಇದೀಗ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

1 / 9
ಟೂರ್ನಿ ಆರಂಭಕ್ಕೆ ವಾರ ಮಾತ್ರ ಉಳಿದಿರುವಾಗ ದಿಢೀರ್ ಆಗಿ ಹಿಂದೆ ಸರಿದರೆ ಅದು ಫ್ರಾಂಚೈಸಿಗಳ ಪಾಲಿಗೆ ಹಿನ್ನಡೆಯನ್ನುಂಟು ಮಾಡುತ್ತದೆ. ಏಕೆಂದರೆ ಕೆಲವೇ ದಿನಗಳ ಅಂತರದಲ್ಲಿ ಸಮರ್ಥ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ತಂಡಗಳ ಮೇಲೆ ಇರಲಿದೆ. ಇದೇ ಕಾರಣದಿಂದಾಗಿ ಇದೀಗ ಇಂಗ್ಲೆಂಡ್‌ ಕ್ರಿಕೆಟಿಗರ ಈ ನಡೆಯಿಂದ ಬೇಸತ್ತಿರುವ ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐಗೆ ದೂರು ನೀಡಿವೆ.

ಟೂರ್ನಿ ಆರಂಭಕ್ಕೆ ವಾರ ಮಾತ್ರ ಉಳಿದಿರುವಾಗ ದಿಢೀರ್ ಆಗಿ ಹಿಂದೆ ಸರಿದರೆ ಅದು ಫ್ರಾಂಚೈಸಿಗಳ ಪಾಲಿಗೆ ಹಿನ್ನಡೆಯನ್ನುಂಟು ಮಾಡುತ್ತದೆ. ಏಕೆಂದರೆ ಕೆಲವೇ ದಿನಗಳ ಅಂತರದಲ್ಲಿ ಸಮರ್ಥ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ತಂಡಗಳ ಮೇಲೆ ಇರಲಿದೆ. ಇದೇ ಕಾರಣದಿಂದಾಗಿ ಇದೀಗ ಇಂಗ್ಲೆಂಡ್‌ ಕ್ರಿಕೆಟಿಗರ ಈ ನಡೆಯಿಂದ ಬೇಸತ್ತಿರುವ ಐಪಿಎಲ್ ಫ್ರಾಂಚೈಸಿಗಳು ಬಿಸಿಸಿಐಗೆ ದೂರು ನೀಡಿವೆ.

2 / 9
ಹೀಗೆ ಈ ಬಾರಿಯ ಐಪಿಎಲ್​ನಲ್ಲಿ ಸ್ಥಾನ ಪಡೆದು, ಇದೀಗ ಟೂರ್ನಿಯಿಂದ ಹಿಂದೆ ಸರಿದಿರುವ ಇಂಗ್ಲೆಂಡ್​ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಹೀಗೆ ಈ ಬಾರಿಯ ಐಪಿಎಲ್​ನಲ್ಲಿ ಸ್ಥಾನ ಪಡೆದು, ಇದೀಗ ಟೂರ್ನಿಯಿಂದ ಹಿಂದೆ ಸರಿದಿರುವ ಇಂಗ್ಲೆಂಡ್​ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 9
1- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ 1 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ ಇದೀಗ ಅಟ್ಕಿನ್ಸನ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಶ್ರೀಲಂಕಾದ ವೇಗಿ ದುಷ್ಮಂತ ಚಮೀರಾ ಕೆಕೆಆರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

1- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ತಂಡದ ವೇಗದ ಬೌಲರ್ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ 1 ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ ಇದೀಗ ಅಟ್ಕಿನ್ಸನ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಅವರ ಬದಲಿಗೆ ಶ್ರೀಲಂಕಾದ ವೇಗಿ ದುಷ್ಮಂತ ಚಮೀರಾ ಕೆಕೆಆರ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

4 / 9
2- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡವು ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ರಿಟೈನ್ ಮಾಡಿಕೊಂಡಿತ್ತು. ಆದರೆ ಐಪಿಎಲ್ ಸೀಸನ್-17 ರಿಂದ ಇದೀಗ ಮಾರ್ಕ್​ ವುಡ್ ಕೂಡ ಹೊರಗುಳಿದಿದ್ದಾರೆ. ಇವರ ಬದಲಿ ಆಟಗಾರನಾಗಿ ಇದೀಗ ಲಕ್ನೋ ಫ್ರಾಂಚೈಸಿ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

2- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡವು ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಅವರನ್ನು ಈ ಬಾರಿಯ ಐಪಿಎಲ್​ಗಾಗಿ ರಿಟೈನ್ ಮಾಡಿಕೊಂಡಿತ್ತು. ಆದರೆ ಐಪಿಎಲ್ ಸೀಸನ್-17 ರಿಂದ ಇದೀಗ ಮಾರ್ಕ್​ ವುಡ್ ಕೂಡ ಹೊರಗುಳಿದಿದ್ದಾರೆ. ಇವರ ಬದಲಿ ಆಟಗಾರನಾಗಿ ಇದೀಗ ಲಕ್ನೋ ಫ್ರಾಂಚೈಸಿ ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಅವರನ್ನು ಆಯ್ಕೆ ಮಾಡಿಕೊಂಡಿದೆ.

5 / 9
3- ಜೇಸನ್ ರಾಯ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆರಂಭಿಕನಾಗಿ ಸ್ಥಾನ ಪಡೆದಿದ್ದ ಇಂಗ್ಲೆಂಡ್ ಬ್ಯಾಟರ್ ಜೇಸನ್ ರಾಯ್ ಕೆಕೆಆರ್ ತಂಡಕ್ಕೆ ಕೈಕೊಟ್ಟಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹಿಂದೆ ಸರಿದಿರುವ ರಾಯ್ ಬದಲಿಗೆ ಇದೀಗ ಕೆಕೆಆರ್ ಫಿಲ್ ಸಾಲ್ಟ್ ಅವರನ್ನು ಆಯ್ಕೆ ಮಾಡಿದೆ.

3- ಜೇಸನ್ ರಾಯ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಆರಂಭಿಕನಾಗಿ ಸ್ಥಾನ ಪಡೆದಿದ್ದ ಇಂಗ್ಲೆಂಡ್ ಬ್ಯಾಟರ್ ಜೇಸನ್ ರಾಯ್ ಕೆಕೆಆರ್ ತಂಡಕ್ಕೆ ಕೈಕೊಟ್ಟಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹಿಂದೆ ಸರಿದಿರುವ ರಾಯ್ ಬದಲಿಗೆ ಇದೀಗ ಕೆಕೆಆರ್ ಫಿಲ್ ಸಾಲ್ಟ್ ಅವರನ್ನು ಆಯ್ಕೆ ಮಾಡಿದೆ.

6 / 9
4- ಹ್ಯಾರಿ ಬ್ರೂಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ಕೋಟಿ ರೂ. ನೀಡಿ ಖರೀದಿಸಿದ್ದ ಇಂಗ್ಲೆಂಡ್ ತಂಡದ ಸ್ಪೋಟಕ ಬ್ಯಾಟರ್ ವೈಯುಕ್ತಿಕ ಕಾರಣ ನೀಡಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅವರ ಬದಲಿ ಆಟಗಾರನ ಹುಡುಕಾಟದಲ್ಲಿ ನಿರತವಾಗಿದೆ.

4- ಹ್ಯಾರಿ ಬ್ರೂಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡವು 4 ಕೋಟಿ ರೂ. ನೀಡಿ ಖರೀದಿಸಿದ್ದ ಇಂಗ್ಲೆಂಡ್ ತಂಡದ ಸ್ಪೋಟಕ ಬ್ಯಾಟರ್ ವೈಯುಕ್ತಿಕ ಕಾರಣ ನೀಡಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅವರ ಬದಲಿ ಆಟಗಾರನ ಹುಡುಕಾಟದಲ್ಲಿ ನಿರತವಾಗಿದೆ.

7 / 9
ಇನ್ನು ಕೆಲ ಆಂಗ್ಲ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯಲಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೆ ಮೇ ತಿಂಗಳಲ್ಲಿ ಇಂಗ್ಲೆಂಡ್ ಪಾಕಿಸ್ತಾನ್ ವಿರುದ್ಧ ಟಿ20 ಸರಣಿ ಆಡಬೇಕಿದೆ. ಈ ಸರಣಿಯು ಮೇ 22 ರಂದು ಪ್ರಾರಂಭವಾಗಲಿದ್ದು, 2024ರ T20 ವಿಶ್ವಕಪ್‌ಗೆ ಮುಂಚಿತವಾಗಿ ಇದು ನಿರ್ಣಾಯಕ ಅಭ್ಯಾಸ ಸರಣಿಯಾಗಿದೆ. ಹೀಗಾಗಿ ಇಂಗ್ಲೆಂಡ್ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯುವ ಸಾಧ್ಯತೆಯಿದೆ.

ಇನ್ನು ಕೆಲ ಆಂಗ್ಲ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯಲಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೆ ಮೇ ತಿಂಗಳಲ್ಲಿ ಇಂಗ್ಲೆಂಡ್ ಪಾಕಿಸ್ತಾನ್ ವಿರುದ್ಧ ಟಿ20 ಸರಣಿ ಆಡಬೇಕಿದೆ. ಈ ಸರಣಿಯು ಮೇ 22 ರಂದು ಪ್ರಾರಂಭವಾಗಲಿದ್ದು, 2024ರ T20 ವಿಶ್ವಕಪ್‌ಗೆ ಮುಂಚಿತವಾಗಿ ಇದು ನಿರ್ಣಾಯಕ ಅಭ್ಯಾಸ ಸರಣಿಯಾಗಿದೆ. ಹೀಗಾಗಿ ಇಂಗ್ಲೆಂಡ್ ಆಟಗಾರರು ಅರ್ಧದಲ್ಲೇ ಐಪಿಎಲ್ ತೊರೆಯುವ ಸಾಧ್ಯತೆಯಿದೆ.

8 / 9
ಐಪಿಎಲ್​ನಲ್ಲಿರುವ ಇಂಗ್ಲೆಂಡ್ ಆಟಗಾರರು: ಮೊಯೀನ್ ಅಲಿ (ಚೆನ್ನೈ ಸೂಪರ್ ಕಿಂಗ್ಸ್​​), ಲಿಯಾಮ್ ಲಿವಿಂಗ್​ಸ್ಟೋನ್, ಸ್ಯಾಮ್ ಕರನ್, ಜಾನಿ ಬೈರ್‌ಸ್ಟೋವ್, ಕ್ರಿಸ್ ವೋಕ್ಸ್ (ಪಂಜಾಬ್ ಕಿಂಗ್ಸ್​), ಜೋಸ್ ಬಟ್ಲರ್, ಟಾಮ್ ಕೊಹ್ಲರ್-ಕ್ಯಾಡ್ಮೋರ್ (ರಾಜಸ್ಥಾನ್ ರಾಯಲ್ಸ್​), ವಿಲ್ ಜಾಕ್ಸ್, ರೀಸ್ ಟೋಪ್ಲಿ, ಟಾಮ್ ಕರನ್ (ಆರ್​ಸಿಬಿ), ಡೇವಿಡ್ ವಿಲ್ಲಿ (ಲಕ್ನೋ ಸೂಪರ್ ಜೈಂಟ್ಸ್​).

ಐಪಿಎಲ್​ನಲ್ಲಿರುವ ಇಂಗ್ಲೆಂಡ್ ಆಟಗಾರರು: ಮೊಯೀನ್ ಅಲಿ (ಚೆನ್ನೈ ಸೂಪರ್ ಕಿಂಗ್ಸ್​​), ಲಿಯಾಮ್ ಲಿವಿಂಗ್​ಸ್ಟೋನ್, ಸ್ಯಾಮ್ ಕರನ್, ಜಾನಿ ಬೈರ್‌ಸ್ಟೋವ್, ಕ್ರಿಸ್ ವೋಕ್ಸ್ (ಪಂಜಾಬ್ ಕಿಂಗ್ಸ್​), ಜೋಸ್ ಬಟ್ಲರ್, ಟಾಮ್ ಕೊಹ್ಲರ್-ಕ್ಯಾಡ್ಮೋರ್ (ರಾಜಸ್ಥಾನ್ ರಾಯಲ್ಸ್​), ವಿಲ್ ಜಾಕ್ಸ್, ರೀಸ್ ಟೋಪ್ಲಿ, ಟಾಮ್ ಕರನ್ (ಆರ್​ಸಿಬಿ), ಡೇವಿಡ್ ವಿಲ್ಲಿ (ಲಕ್ನೋ ಸೂಪರ್ ಜೈಂಟ್ಸ್​).

9 / 9
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?