AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 0, 0… ಅವೇಶ್ ಖಾನ್ ಹೊಸ ಫಿನಿಶರ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 31ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ರೋಚಕ ಜಯ ಸಾಧಿಸಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 224 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಕೊನೆಯ ಎಸೆತದಲ್ಲಿ 1 ರನ್ ಕಲೆಹಾಕುವ ಮೂಲಕ 2 ವಿಕೆಟ್​ಗಳ ರೋಚಕ ಗೆಲುವು ದಾಖಲಿಸಿತು.

TV9 Web
| Edited By: |

Updated on: Apr 17, 2024 | 10:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಹೊಸ ಫಿನಿಶರ್ ಅವೇಶ್ ಖಾನ್... ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅದು ಕೂಡ ಐಪಿಎಲ್​ನ ಹೊಸ ಫಿನಿಶರ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಹೊಸ ಫಿನಿಶರ್ ಅವೇಶ್ ಖಾನ್... ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರೋಚಕ ಗೆಲುವು ದಾಖಲಿಸುತ್ತಿದ್ದಂತೆ ಇತ್ತ ಅವೇಶ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದರು. ಅದು ಕೂಡ ಐಪಿಎಲ್​ನ ಹೊಸ ಫಿನಿಶರ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಎಂಬುದು ವಿಶೇಷ.

1 / 6
ಅಷ್ಟಕ್ಕೂ ಅವೇಶ್ ಖಾನ್ ಅವರನ್ನು ಈ ರೀತಿಯಲ್ಲಿ ಟ್ರೋಲ್ ಮಾಡಲು ಮುಖ್ಯ ಕಾರಣ, ಅವರು 2 ರಣರೋಚಕ ಪಂದ್ಯಗಳ ಗೆಲುವಿನ ಭಾಗವಾಗಿರುವುದು. ಅದು ಕೂಡ 0 ರನ್​ಗಳೊಂದಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

ಅಷ್ಟಕ್ಕೂ ಅವೇಶ್ ಖಾನ್ ಅವರನ್ನು ಈ ರೀತಿಯಲ್ಲಿ ಟ್ರೋಲ್ ಮಾಡಲು ಮುಖ್ಯ ಕಾರಣ, ಅವರು 2 ರಣರೋಚಕ ಪಂದ್ಯಗಳ ಗೆಲುವಿನ ಭಾಗವಾಗಿರುವುದು. ಅದು ಕೂಡ 0 ರನ್​ಗಳೊಂದಿಗೆ ಎಂಬುದು ಇಲ್ಲಿ ಮತ್ತೊಂದು ವಿಶೇಷ.

2 / 6
ಅಂದರೆ ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಅವೇಶ್ ಖಾನ್, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 1 ಬೈಸ್​ ರನ್ ಓಡುವ ಮೂಲಕ LSG ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಬೆನ್ನಲ್ಲೇ ಹೆಲ್ಮೆಟ್ ಎಸೆದು ಸಂಭ್ರಮಿಸಿ ಸಖತ್ ಟ್ರೋಲ್ ಆಗಿದ್ದರು.

ಅಂದರೆ ಐಪಿಎಲ್ 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿದ್ದ ಅವೇಶ್ ಖಾನ್, ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 1 ಬೈಸ್​ ರನ್ ಓಡುವ ಮೂಲಕ LSG ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದರು. ಈ ಗೆಲುವಿನ ಬೆನ್ನಲ್ಲೇ ಹೆಲ್ಮೆಟ್ ಎಸೆದು ಸಂಭ್ರಮಿಸಿ ಸಖತ್ ಟ್ರೋಲ್ ಆಗಿದ್ದರು.

3 / 6
ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಅವೇಶ್ ಖಾನ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ತಂಡ ರೋಚಕ ಗೆಲುವು ದಾಖಲಿಸುವಾಗ ಸಖತ್ ಆಗಿ ಸಂಭ್ರಮಿಸಿದ್ದಾರೆ. ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ 17.3 ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಅವೇಶ್ ಖಾನ್ ಒಂದೇ ಒಂದು ಬಾಲ್​ ಅನ್ನು ಎದುರಿಸಿಲ್ಲ ಎಂಬುದು.

ಇದೀಗ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಅವೇಶ್ ಖಾನ್, ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಆರ್​ ತಂಡ ರೋಚಕ ಗೆಲುವು ದಾಖಲಿಸುವಾಗ ಸಖತ್ ಆಗಿ ಸಂಭ್ರಮಿಸಿದ್ದಾರೆ. ಇಲ್ಲಿ ಇಂಟ್ರೆಸ್ಟಿಂಗ್ ವಿಷಯ ಎಂದರೆ 17.3 ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದ ಅವೇಶ್ ಖಾನ್ ಒಂದೇ ಒಂದು ಬಾಲ್​ ಅನ್ನು ಎದುರಿಸಿಲ್ಲ ಎಂಬುದು.

4 / 6
ಅಂದರೆ ಕೊನೆಯ ಮೂರು ಓವರ್​ಗಳಲ್ಲಿ ಜೋಸ್ ಬಟ್ಲರ್ ಸ್ಟ್ರೈಕ್ ಬದಲಿಸಿರಲಿಲ್ಲ. ಈ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇತ್ತ 18ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದರೂ ಒಂದೆಡೆ ನಿಂತ ಅವೇಶ್ ಖಾನ್ ಅಜೇಯ ಶೂನ್ಯದೊಂದಿಗೆ ಮರಳಿದ್ದರು.

ಅಂದರೆ ಕೊನೆಯ ಮೂರು ಓವರ್​ಗಳಲ್ಲಿ ಜೋಸ್ ಬಟ್ಲರ್ ಸ್ಟ್ರೈಕ್ ಬದಲಿಸಿರಲಿಲ್ಲ. ಈ ಮೂಲಕ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಇತ್ತ 18ನೇ ಓವರ್​ ವೇಳೆ ಕ್ರೀಸ್​ಗೆ ಆಗಮಿಸಿದರೂ ಒಂದೆಡೆ ನಿಂತ ಅವೇಶ್ ಖಾನ್ ಅಜೇಯ ಶೂನ್ಯದೊಂದಿಗೆ ಮರಳಿದ್ದರು.

5 / 6
ಇದರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವನ್ನು ಸಖತ್ತಾಗಿ ಸಂಭ್ರಮಿಸಿದ ಅವೇಶ್ ಖಾನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ನೈಸ್ ಆಗಿ ಟ್ರೋಲ್ ಮಾಡಿದೆ. 2023 ರಲ್ಲಿ 0, 2024 ರಲ್ಲೂ 0.. ಅವೇಶ್ ಖಾನ್ ದಿ ಫಿನಿಶರ್ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ LSG ತನ್ನ ಮಾಜಿ ಆಟಗಾರನ ಕಾಲೆಳೆದಿದೆ. ಇದೀಗ ಈ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದ್ದು, ಅವೇಶ್ ಖಾನ್ ದಿ ಫಿನಿಶರ್ ಎಂದು ಆರ್​ಆರ್ ತಂಡದ ಆಟಗಾರನನ್ನು ಟ್ರೋಲ್ ಮಾಡಲಾಗುತ್ತಿದೆ.

ಇದರ ನಡುವೆ ರಾಜಸ್ಥಾನ್ ರಾಯಲ್ಸ್ ತಂಡದ ಗೆಲುವನ್ನು ಸಖತ್ತಾಗಿ ಸಂಭ್ರಮಿಸಿದ ಅವೇಶ್ ಖಾನ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್​ ನೈಸ್ ಆಗಿ ಟ್ರೋಲ್ ಮಾಡಿದೆ. 2023 ರಲ್ಲಿ 0, 2024 ರಲ್ಲೂ 0.. ಅವೇಶ್ ಖಾನ್ ದಿ ಫಿನಿಶರ್ ಎಂದು ಪೋಸ್ಟ್ ಹಂಚಿಕೊಳ್ಳುವ ಮೂಲಕ LSG ತನ್ನ ಮಾಜಿ ಆಟಗಾರನ ಕಾಲೆಳೆದಿದೆ. ಇದೀಗ ಈ ಸೋಷಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದ್ದು, ಅವೇಶ್ ಖಾನ್ ದಿ ಫಿನಿಶರ್ ಎಂದು ಆರ್​ಆರ್ ತಂಡದ ಆಟಗಾರನನ್ನು ಟ್ರೋಲ್ ಮಾಡಲಾಗುತ್ತಿದೆ.

6 / 6
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!