AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮಿಂಚಿನ ವೇಗದೊಂದಿಗೆ ತನ್ನದೇ ದಾಖಲೆ ಮುರಿದ ಮಯಾಂಕ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್-17 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ವೇಗಿ ಮಯಾಂಕ್ ಯಾದವ್ ಸಂಚಲನ ಸೃಷ್ಟಿಸುತ್ತಿದ್ದಾರೆ. ಮೊದಲ ಪಂದ್ಯದಲ್ಲಿ 155.8 kmph ವೇಗದಲ್ಲಿ ಚೆಂಡೆಸೆದು ದಾಖಲೆ ಬರೆದಿದ್ದ ಮಯಾಂಕ್, ಇದೀಗ ತನ್ನದೇ ದಾಖಲೆಯನ್ನು ಮುರಿದು IPL 2024 ರಲ್ಲಿ ಅತೀ ವೇಗವಾಗಿ ಬೌಲಿಂಗ್ ಮಾಡಿದ ಹೊಸ ದಾಖಲೆ ಬರೆದಿದ್ದಾರೆ.

TV9 Web
| Edited By: |

Updated on: Apr 03, 2024 | 6:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ವೇಗಿ ಮಯಾಂಕ್ ಯಾದವ್ (Mayank Yadav).

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಯುವ ವೇಗಿ ಮಯಾಂಕ್ ಯಾದವ್ (Mayank Yadav).

1 / 7
ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಮಯಾಂಕ್ ಯಾದವ್ ನೀಡಿದ್ದು ಕೇವಲ 14 ರನ್​ಗಳು ಮಾತ್ರ. ಇನ್ನು ಗ್ಲೆನ್ ಮ್ಯಾಕ್ಸ್​ವೆಲ್, ಕ್ಯಾಮರೋನ್ ಗ್ರೀನ್ ಹಾಗೂ ರಜತ್ ಪಾಟಿದಾರ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಮಯಾಂಕ್ ಯಾದವ್ ನೀಡಿದ್ದು ಕೇವಲ 14 ರನ್​ಗಳು ಮಾತ್ರ. ಇನ್ನು ಗ್ಲೆನ್ ಮ್ಯಾಕ್ಸ್​ವೆಲ್, ಕ್ಯಾಮರೋನ್ ಗ್ರೀನ್ ಹಾಗೂ ರಜತ್ ಪಾಟಿದಾರ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.

2 / 7
ಅದರಲ್ಲೂ ಕ್ಯಾಮರೋನ್ ಗ್ರೀನ್​ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಸಂಚಲನ ಸೃಷ್ಟಿಸಿದ್ದರು. 8ನೇ ಓವರ್​ನ 4ನೇ ಎಸೆತವನ್ನು ಗ್ರೀನ್​ ಗುರುತಿಸುವಷ್ಟರಲ್ಲಿ ವಿಕೆಟ್​ ಅಲುಗಾಡಿತ್ತು, ಬೇಲ್ಸ್ ಎಗರಿತ್ತು. ಅಂತಹದೊಂದು ಬಿರುಗಾಳಿ ಎಸೆತವನ್ನು ಮಯಾಂಕ್ ಎಸೆದಿದ್ದರು.

ಅದರಲ್ಲೂ ಕ್ಯಾಮರೋನ್ ಗ್ರೀನ್​ ಅವರನ್ನು ಕ್ಲೀನ್ ಬೌಲ್ಡ್ ಮಾಡಿ ಸಂಚಲನ ಸೃಷ್ಟಿಸಿದ್ದರು. 8ನೇ ಓವರ್​ನ 4ನೇ ಎಸೆತವನ್ನು ಗ್ರೀನ್​ ಗುರುತಿಸುವಷ್ಟರಲ್ಲಿ ವಿಕೆಟ್​ ಅಲುಗಾಡಿತ್ತು, ಬೇಲ್ಸ್ ಎಗರಿತ್ತು. ಅಂತಹದೊಂದು ಬಿರುಗಾಳಿ ಎಸೆತವನ್ನು ಮಯಾಂಕ್ ಎಸೆದಿದ್ದರು.

3 / 7
ಅಂದರೆ ಆ ಎಸೆತದ ವೇಗ ಬರೋಬ್ಬರಿ 156.7 kmph. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ವೇಗವಾಗಿ ಚೆಂಡೆಸೆದ ದಾಖಲೆಯನ್ನು ಮಯಾಂಕ್ ಯಾದವ್ ನಿರ್ಮಿಸಿದ್ದಾರೆ. ಅದು ಕೂಡ ತನ್ನದೇ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಅಂದರೆ ಆ ಎಸೆತದ ವೇಗ ಬರೋಬ್ಬರಿ 156.7 kmph. ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ವೇಗವಾಗಿ ಚೆಂಡೆಸೆದ ದಾಖಲೆಯನ್ನು ಮಯಾಂಕ್ ಯಾದವ್ ನಿರ್ಮಿಸಿದ್ದಾರೆ. ಅದು ಕೂಡ ತನ್ನದೇ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

4 / 7
ಅಂದರೆ ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಯಾಂಕ್ 155.8 kmph ವೇಗದಲ್ಲಿ ಚೆಂಡೆಸೆದಿದ್ದರು. ಇದೀಗ 156.7 kmph ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

ಅಂದರೆ ಇದಕ್ಕೂ ಮುನ್ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮಯಾಂಕ್ 155.8 kmph ವೇಗದಲ್ಲಿ ಚೆಂಡೆಸೆದಿದ್ದರು. ಇದೀಗ 156.7 kmph ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಅತ್ಯಂತ ವೇಗವಾಗಿ ಚೆಂಡೆಸೆದ 4ನೇ ಬೌಲರ್ ಎನಿಸಿಕೊಂಡಿದ್ದಾರೆ.

5 / 7
ಇನ್ನು ಐಪಿಎಲ್​ ಇತಿಹಾಸದಲ್ಲಿ ಅತ್ಯಂತ ವೇಗವಾಗಿ ಚೆಂಡೆಸೆದ ದಾಖಲೆ ಆಸ್ಟ್ರೇಲಿಯಾದ ಶಾನ್ ಟೈಟ್ ಹೆಸರಿನಲ್ಲಿದೆ. 2011 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಟೈಟ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 157.71 Kmph ವೇಗದಲ್ಲಿ ಚೆಂಡೆಸೆದು ದಾಖಲೆ ನಿರ್ಮಿಸಿದ್ದಾರೆ.

ಇನ್ನು ಐಪಿಎಲ್​ ಇತಿಹಾಸದಲ್ಲಿ ಅತ್ಯಂತ ವೇಗವಾಗಿ ಚೆಂಡೆಸೆದ ದಾಖಲೆ ಆಸ್ಟ್ರೇಲಿಯಾದ ಶಾನ್ ಟೈಟ್ ಹೆಸರಿನಲ್ಲಿದೆ. 2011 ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಟೈಟ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 157.71 Kmph ವೇಗದಲ್ಲಿ ಚೆಂಡೆಸೆದು ದಾಖಲೆ ನಿರ್ಮಿಸಿದ್ದಾರೆ.

6 / 7
ಇದೀಗ ತಮ್ಮ ಎರಡನೇ ಪಂದ್ಯದ ಮೂಲಕ 156.7 kmph ವೇಗವನ್ನು ತಲುಪಿರುವ 21 ವರ್ಷದ ಯುವ ವೇಗಿ ಮಯಾಂಕ್ ಯಾದವ್, ಮುಂಬರುವ ಪಂದ್ಯಗಳ ಮೂಲಕ ಶಾನ್ ಟೈಟ್ ಅವರ ಭರ್ಜರಿ ದಾಖಲೆಯನ್ನು ಮುರಿದರೂ ಅಚ್ಚರಿಪಡಬೇಕಿಲ್ಲ.

ಇದೀಗ ತಮ್ಮ ಎರಡನೇ ಪಂದ್ಯದ ಮೂಲಕ 156.7 kmph ವೇಗವನ್ನು ತಲುಪಿರುವ 21 ವರ್ಷದ ಯುವ ವೇಗಿ ಮಯಾಂಕ್ ಯಾದವ್, ಮುಂಬರುವ ಪಂದ್ಯಗಳ ಮೂಲಕ ಶಾನ್ ಟೈಟ್ ಅವರ ಭರ್ಜರಿ ದಾಖಲೆಯನ್ನು ಮುರಿದರೂ ಅಚ್ಚರಿಪಡಬೇಕಿಲ್ಲ.

7 / 7
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ