AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಧೋನಿ ಸಿಕ್ಸ್​ನಿಂದ ನಾವು ಗೆದ್ದೆವು ಎಂದ DK

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಫಾಫ್ ಪಡೆ 27 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕೊನೆಯ ಪಂದ್ಯದ ಮೂಲಕ ಪ್ಲೇಆಫ್ ಹಂತಕ್ಕೇರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:21 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಸಿಎಸ್​ಕೆ (CSK) ವಿರುದ್ಧ ಜಯ ಸಾಧಿಸಿ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ನಿರ್ಣಾಯಕವಾಗಿದ್ದ ಈ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ಅಂತಿಮ ಓವರ್​ನಲ್ಲಿ ಆರ್​ಸಿಬಿ ಗೆದ್ದು ಬೀಗಿದ್ದು ವಿಶೇಷ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಸಿಎಸ್​ಕೆ (CSK) ವಿರುದ್ಧ ಜಯ ಸಾಧಿಸಿ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ನಿರ್ಣಾಯಕವಾಗಿದ್ದ ಈ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ಅಂತಿಮ ಓವರ್​ನಲ್ಲಿ ಆರ್​ಸಿಬಿ ಗೆದ್ದು ಬೀಗಿದ್ದು ವಿಶೇಷ.

1 / 6
ಅದರಲ್ಲೂ ಕೊನೆಯ ಓವರ್​ನಲ್ಲಿ ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಸಿಕ್ಸರ್​ನಿಂದ​ ಆರ್​ಸಿಬಿ ಗೆಲ್ಲುವಂತಾಗಿದ್ದು ವಿಶೇಷ.

ಅದರಲ್ಲೂ ಕೊನೆಯ ಓವರ್​ನಲ್ಲಿ ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಸಿಕ್ಸರ್​ನಿಂದ​ ಆರ್​ಸಿಬಿ ಗೆಲ್ಲುವಂತಾಗಿದ್ದು ವಿಶೇಷ.

2 / 6
ಅಂದರೆ ಧೋನಿ ಬಾರಿಸಿದ ಸಿಕ್ಸ್ 110 ಮೀಟರ್ ದೂರಕ್ಕೆ ಹೋಗಿದ್ದಲ್ಲದೆ, ಸ್ಟೇಡಿಯಂ ಛಾವಣಿಯನ್ನೂ ದಾಟಿತು. ಪರಿಣಾಮ ಅಂಪೈರ್​ ಹೊಸ ಚೆಂಡನ್ನು ತರಿಸಿಕೊಂಡರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು.

ಅಂದರೆ ಧೋನಿ ಬಾರಿಸಿದ ಸಿಕ್ಸ್ 110 ಮೀಟರ್ ದೂರಕ್ಕೆ ಹೋಗಿದ್ದಲ್ಲದೆ, ಸ್ಟೇಡಿಯಂ ಛಾವಣಿಯನ್ನೂ ದಾಟಿತು. ಪರಿಣಾಮ ಅಂಪೈರ್​ ಹೊಸ ಚೆಂಡನ್ನು ತರಿಸಿಕೊಂಡರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು.

3 / 6
ಈ ಮೊದಲು ಚೆಂಡು ಒದ್ದೆಯಾಗಿದೆ, ಹೊಸ ಬಾಲ್​ ಅನ್ನು ನೀಡುವಂತೆ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಅಂಪೈರ್​ಗೆ ಹಲವು ಬಾರಿ ಮನವಿ ಮಾಡಿದ್ದರೂ, ಆ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಧೋನಿ ಬಾರಿಸಿದ ಚೆಂಡು ಕಳೆದು ಹೋಗಿದ್ದರಿಂದ ಈ ಬಾರಿ ಚೆಂಡನ್ನು ಬದಲಿಸಬೇಕಾದ ಅನಿವಾರ್ಯತೆ ಅಂಪೈರ್​ ಮುಂದಿತ್ತು.

ಈ ಮೊದಲು ಚೆಂಡು ಒದ್ದೆಯಾಗಿದೆ, ಹೊಸ ಬಾಲ್​ ಅನ್ನು ನೀಡುವಂತೆ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಅಂಪೈರ್​ಗೆ ಹಲವು ಬಾರಿ ಮನವಿ ಮಾಡಿದ್ದರೂ, ಆ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಧೋನಿ ಬಾರಿಸಿದ ಚೆಂಡು ಕಳೆದು ಹೋಗಿದ್ದರಿಂದ ಈ ಬಾರಿ ಚೆಂಡನ್ನು ಬದಲಿಸಬೇಕಾದ ಅನಿವಾರ್ಯತೆ ಅಂಪೈರ್​ ಮುಂದಿತ್ತು.

4 / 6
ಹೀಗಾಗಿ ಹೊಸ ಚೆಂಡನ್ನು ನೀಡಿದರು. ಹೊಸ ಬಾಲ್​ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಯಶ್ ದಯಾಳ್, ಸ್ಲೋ ಬಾಲ್ ಮತ್ತು ಯಾರ್ಕರ್ ಎಸೆತಗಳೊಂದಿಗೆ ಸಿಎಸ್​ಕೆ ಬ್ಯಾಟರ್​ಗಳನ್ನು ನಿಯಂತ್ರಿಸುವಲ್ಲಿ ಸಫಲರಾದರು. ಪರಿಣಾಮ ಕೊನೆಯ ಓವರ್​ನಲ್ಲಿ ಆರ್​ಸಿಬಿ ಕೇವಲ 7 ರನ್ ಮಾತ್ರ ನೀಡಿ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿತು.

ಹೀಗಾಗಿ ಹೊಸ ಚೆಂಡನ್ನು ನೀಡಿದರು. ಹೊಸ ಬಾಲ್​ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಯಶ್ ದಯಾಳ್, ಸ್ಲೋ ಬಾಲ್ ಮತ್ತು ಯಾರ್ಕರ್ ಎಸೆತಗಳೊಂದಿಗೆ ಸಿಎಸ್​ಕೆ ಬ್ಯಾಟರ್​ಗಳನ್ನು ನಿಯಂತ್ರಿಸುವಲ್ಲಿ ಸಫಲರಾದರು. ಪರಿಣಾಮ ಕೊನೆಯ ಓವರ್​ನಲ್ಲಿ ಆರ್​ಸಿಬಿ ಕೇವಲ 7 ರನ್ ಮಾತ್ರ ನೀಡಿ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿತು.

5 / 6
ಹೀಗೆ ಅದೃಷ್ಟದಿಂದ ಬದಲಾದ ಚೆಂಡಿನಿಂದಾಗಿ ನಾವು ಗೆಲ್ಲಲು ಸಾಧ್ಯವಾಯಿತು ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಡಿಕೆ, ಧೋನಿ ಮೈದಾನದ ಹೊರಗೆ ಸಿಕ್ಸ್ ಬಾರಿಸಿದ್ದು, ನಮ್ಮ ಪಾಲಿಗೆ ಅತ್ಯುತ್ತಮ ವಿಷಯ ಎಂದಿದ್ದಾರೆ. ಇದರಿಂದ ಚೆಂಡು ಬದಲಿಸಿದರು. ಅಲ್ಲದೆ ಹೊಸ ಚೆಂಡಿನೊಂದಿಗೆ ಯಶ್ ದಯಾಳ್ ಅದ್ಭುತವಾಗಿ ಬೌಲಿಂಗ್ ಮಾಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಹೀಗೆ ಅದೃಷ್ಟದಿಂದ ಬದಲಾದ ಚೆಂಡಿನಿಂದಾಗಿ ನಾವು ಗೆಲ್ಲಲು ಸಾಧ್ಯವಾಯಿತು ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಡಿಕೆ, ಧೋನಿ ಮೈದಾನದ ಹೊರಗೆ ಸಿಕ್ಸ್ ಬಾರಿಸಿದ್ದು, ನಮ್ಮ ಪಾಲಿಗೆ ಅತ್ಯುತ್ತಮ ವಿಷಯ ಎಂದಿದ್ದಾರೆ. ಇದರಿಂದ ಚೆಂಡು ಬದಲಿಸಿದರು. ಅಲ್ಲದೆ ಹೊಸ ಚೆಂಡಿನೊಂದಿಗೆ ಯಶ್ ದಯಾಳ್ ಅದ್ಭುತವಾಗಿ ಬೌಲಿಂಗ್ ಮಾಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

6 / 6

Published On - 12:07 pm, Sun, 19 May 24

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು