AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಧೋನಿ ಸಿಕ್ಸ್​ನಿಂದ ನಾವು ಗೆದ್ದೆವು ಎಂದ DK

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಫಾಫ್ ಪಡೆ 27 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕೊನೆಯ ಪಂದ್ಯದ ಮೂಲಕ ಪ್ಲೇಆಫ್ ಹಂತಕ್ಕೇರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:21 PM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಸಿಎಸ್​ಕೆ (CSK) ವಿರುದ್ಧ ಜಯ ಸಾಧಿಸಿ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ನಿರ್ಣಾಯಕವಾಗಿದ್ದ ಈ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ಅಂತಿಮ ಓವರ್​ನಲ್ಲಿ ಆರ್​ಸಿಬಿ ಗೆದ್ದು ಬೀಗಿದ್ದು ವಿಶೇಷ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಸಿಎಸ್​ಕೆ (CSK) ವಿರುದ್ಧ ಜಯ ಸಾಧಿಸಿ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ನಿರ್ಣಾಯಕವಾಗಿದ್ದ ಈ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ಅಂತಿಮ ಓವರ್​ನಲ್ಲಿ ಆರ್​ಸಿಬಿ ಗೆದ್ದು ಬೀಗಿದ್ದು ವಿಶೇಷ.

1 / 6
ಅದರಲ್ಲೂ ಕೊನೆಯ ಓವರ್​ನಲ್ಲಿ ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಸಿಕ್ಸರ್​ನಿಂದ​ ಆರ್​ಸಿಬಿ ಗೆಲ್ಲುವಂತಾಗಿದ್ದು ವಿಶೇಷ.

ಅದರಲ್ಲೂ ಕೊನೆಯ ಓವರ್​ನಲ್ಲಿ ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಸಿಕ್ಸರ್​ನಿಂದ​ ಆರ್​ಸಿಬಿ ಗೆಲ್ಲುವಂತಾಗಿದ್ದು ವಿಶೇಷ.

2 / 6
ಅಂದರೆ ಧೋನಿ ಬಾರಿಸಿದ ಸಿಕ್ಸ್ 110 ಮೀಟರ್ ದೂರಕ್ಕೆ ಹೋಗಿದ್ದಲ್ಲದೆ, ಸ್ಟೇಡಿಯಂ ಛಾವಣಿಯನ್ನೂ ದಾಟಿತು. ಪರಿಣಾಮ ಅಂಪೈರ್​ ಹೊಸ ಚೆಂಡನ್ನು ತರಿಸಿಕೊಂಡರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು.

ಅಂದರೆ ಧೋನಿ ಬಾರಿಸಿದ ಸಿಕ್ಸ್ 110 ಮೀಟರ್ ದೂರಕ್ಕೆ ಹೋಗಿದ್ದಲ್ಲದೆ, ಸ್ಟೇಡಿಯಂ ಛಾವಣಿಯನ್ನೂ ದಾಟಿತು. ಪರಿಣಾಮ ಅಂಪೈರ್​ ಹೊಸ ಚೆಂಡನ್ನು ತರಿಸಿಕೊಂಡರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು.

3 / 6
ಈ ಮೊದಲು ಚೆಂಡು ಒದ್ದೆಯಾಗಿದೆ, ಹೊಸ ಬಾಲ್​ ಅನ್ನು ನೀಡುವಂತೆ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಅಂಪೈರ್​ಗೆ ಹಲವು ಬಾರಿ ಮನವಿ ಮಾಡಿದ್ದರೂ, ಆ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಧೋನಿ ಬಾರಿಸಿದ ಚೆಂಡು ಕಳೆದು ಹೋಗಿದ್ದರಿಂದ ಈ ಬಾರಿ ಚೆಂಡನ್ನು ಬದಲಿಸಬೇಕಾದ ಅನಿವಾರ್ಯತೆ ಅಂಪೈರ್​ ಮುಂದಿತ್ತು.

ಈ ಮೊದಲು ಚೆಂಡು ಒದ್ದೆಯಾಗಿದೆ, ಹೊಸ ಬಾಲ್​ ಅನ್ನು ನೀಡುವಂತೆ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಅಂಪೈರ್​ಗೆ ಹಲವು ಬಾರಿ ಮನವಿ ಮಾಡಿದ್ದರೂ, ಆ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಧೋನಿ ಬಾರಿಸಿದ ಚೆಂಡು ಕಳೆದು ಹೋಗಿದ್ದರಿಂದ ಈ ಬಾರಿ ಚೆಂಡನ್ನು ಬದಲಿಸಬೇಕಾದ ಅನಿವಾರ್ಯತೆ ಅಂಪೈರ್​ ಮುಂದಿತ್ತು.

4 / 6
ಹೀಗಾಗಿ ಹೊಸ ಚೆಂಡನ್ನು ನೀಡಿದರು. ಹೊಸ ಬಾಲ್​ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಯಶ್ ದಯಾಳ್, ಸ್ಲೋ ಬಾಲ್ ಮತ್ತು ಯಾರ್ಕರ್ ಎಸೆತಗಳೊಂದಿಗೆ ಸಿಎಸ್​ಕೆ ಬ್ಯಾಟರ್​ಗಳನ್ನು ನಿಯಂತ್ರಿಸುವಲ್ಲಿ ಸಫಲರಾದರು. ಪರಿಣಾಮ ಕೊನೆಯ ಓವರ್​ನಲ್ಲಿ ಆರ್​ಸಿಬಿ ಕೇವಲ 7 ರನ್ ಮಾತ್ರ ನೀಡಿ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿತು.

ಹೀಗಾಗಿ ಹೊಸ ಚೆಂಡನ್ನು ನೀಡಿದರು. ಹೊಸ ಬಾಲ್​ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಯಶ್ ದಯಾಳ್, ಸ್ಲೋ ಬಾಲ್ ಮತ್ತು ಯಾರ್ಕರ್ ಎಸೆತಗಳೊಂದಿಗೆ ಸಿಎಸ್​ಕೆ ಬ್ಯಾಟರ್​ಗಳನ್ನು ನಿಯಂತ್ರಿಸುವಲ್ಲಿ ಸಫಲರಾದರು. ಪರಿಣಾಮ ಕೊನೆಯ ಓವರ್​ನಲ್ಲಿ ಆರ್​ಸಿಬಿ ಕೇವಲ 7 ರನ್ ಮಾತ್ರ ನೀಡಿ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿತು.

5 / 6
ಹೀಗೆ ಅದೃಷ್ಟದಿಂದ ಬದಲಾದ ಚೆಂಡಿನಿಂದಾಗಿ ನಾವು ಗೆಲ್ಲಲು ಸಾಧ್ಯವಾಯಿತು ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಡಿಕೆ, ಧೋನಿ ಮೈದಾನದ ಹೊರಗೆ ಸಿಕ್ಸ್ ಬಾರಿಸಿದ್ದು, ನಮ್ಮ ಪಾಲಿಗೆ ಅತ್ಯುತ್ತಮ ವಿಷಯ ಎಂದಿದ್ದಾರೆ. ಇದರಿಂದ ಚೆಂಡು ಬದಲಿಸಿದರು. ಅಲ್ಲದೆ ಹೊಸ ಚೆಂಡಿನೊಂದಿಗೆ ಯಶ್ ದಯಾಳ್ ಅದ್ಭುತವಾಗಿ ಬೌಲಿಂಗ್ ಮಾಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಹೀಗೆ ಅದೃಷ್ಟದಿಂದ ಬದಲಾದ ಚೆಂಡಿನಿಂದಾಗಿ ನಾವು ಗೆಲ್ಲಲು ಸಾಧ್ಯವಾಯಿತು ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಡಿಕೆ, ಧೋನಿ ಮೈದಾನದ ಹೊರಗೆ ಸಿಕ್ಸ್ ಬಾರಿಸಿದ್ದು, ನಮ್ಮ ಪಾಲಿಗೆ ಅತ್ಯುತ್ತಮ ವಿಷಯ ಎಂದಿದ್ದಾರೆ. ಇದರಿಂದ ಚೆಂಡು ಬದಲಿಸಿದರು. ಅಲ್ಲದೆ ಹೊಸ ಚೆಂಡಿನೊಂದಿಗೆ ಯಶ್ ದಯಾಳ್ ಅದ್ಭುತವಾಗಿ ಬೌಲಿಂಗ್ ಮಾಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

6 / 6

Published On - 12:07 pm, Sun, 19 May 24

Follow us
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ