AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಧೋನಿ ಸಿಕ್ಸ್​ನಿಂದ ನಾವು ಗೆದ್ದೆವು ಎಂದ DK

IPL 2024 RCB vs CSK: ಐಪಿಎಲ್​ನ 68ನೇ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಆರ್​ಸಿಬಿ ಪಾಲಿಗೆ ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಫಾಫ್ ಪಡೆ 27 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕೊನೆಯ ಪಂದ್ಯದ ಮೂಲಕ ಪ್ಲೇಆಫ್ ಹಂತಕ್ಕೇರುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:21 PM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಸಿಎಸ್​ಕೆ (CSK) ವಿರುದ್ಧ ಜಯ ಸಾಧಿಸಿ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ನಿರ್ಣಾಯಕವಾಗಿದ್ದ ಈ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ಅಂತಿಮ ಓವರ್​ನಲ್ಲಿ ಆರ್​ಸಿಬಿ ಗೆದ್ದು ಬೀಗಿದ್ದು ವಿಶೇಷ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ (IPL 2024) 68ನೇ ಪಂದ್ಯದಲ್ಲಿ ಸಿಎಸ್​ಕೆ (CSK) ವಿರುದ್ಧ ಜಯ ಸಾಧಿಸಿ ಆರ್​ಸಿಬಿ (RCB) ಪ್ಲೇಆಫ್ ಪ್ರವೇಶಿಸಿದೆ. ನಿರ್ಣಾಯಕವಾಗಿದ್ದ ಈ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಹೋರಾಟದಲ್ಲಿ ಅಂತಿಮ ಓವರ್​ನಲ್ಲಿ ಆರ್​ಸಿಬಿ ಗೆದ್ದು ಬೀಗಿದ್ದು ವಿಶೇಷ.

1 / 6
ಅದರಲ್ಲೂ ಕೊನೆಯ ಓವರ್​ನಲ್ಲಿ ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಸಿಕ್ಸರ್​ನಿಂದ​ ಆರ್​ಸಿಬಿ ಗೆಲ್ಲುವಂತಾಗಿದ್ದು ವಿಶೇಷ.

ಅದರಲ್ಲೂ ಕೊನೆಯ ಓವರ್​ನಲ್ಲಿ ಪ್ಲೇಆಫ್ ಹಂತಕ್ಕೇರಲು ಸಿಎಸ್​ಕೆ ತಂಡಕ್ಕೆ 17 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಮಹೇಂದ್ರ ಸಿಂಗ್ ಧೋನಿ ಲೆಗ್ ಸೈಡ್​ನತ್ತ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಸಿಕ್ಸರ್​ನಿಂದ​ ಆರ್​ಸಿಬಿ ಗೆಲ್ಲುವಂತಾಗಿದ್ದು ವಿಶೇಷ.

2 / 6
ಅಂದರೆ ಧೋನಿ ಬಾರಿಸಿದ ಸಿಕ್ಸ್ 110 ಮೀಟರ್ ದೂರಕ್ಕೆ ಹೋಗಿದ್ದಲ್ಲದೆ, ಸ್ಟೇಡಿಯಂ ಛಾವಣಿಯನ್ನೂ ದಾಟಿತು. ಪರಿಣಾಮ ಅಂಪೈರ್​ ಹೊಸ ಚೆಂಡನ್ನು ತರಿಸಿಕೊಂಡರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು.

ಅಂದರೆ ಧೋನಿ ಬಾರಿಸಿದ ಸಿಕ್ಸ್ 110 ಮೀಟರ್ ದೂರಕ್ಕೆ ಹೋಗಿದ್ದಲ್ಲದೆ, ಸ್ಟೇಡಿಯಂ ಛಾವಣಿಯನ್ನೂ ದಾಟಿತು. ಪರಿಣಾಮ ಅಂಪೈರ್​ ಹೊಸ ಚೆಂಡನ್ನು ತರಿಸಿಕೊಂಡರು. ಈ ಮೂಲಕ ಪಂದ್ಯವನ್ನು ಮುಂದುವರೆಸಲಾಯಿತು.

3 / 6
ಈ ಮೊದಲು ಚೆಂಡು ಒದ್ದೆಯಾಗಿದೆ, ಹೊಸ ಬಾಲ್​ ಅನ್ನು ನೀಡುವಂತೆ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಅಂಪೈರ್​ಗೆ ಹಲವು ಬಾರಿ ಮನವಿ ಮಾಡಿದ್ದರೂ, ಆ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಧೋನಿ ಬಾರಿಸಿದ ಚೆಂಡು ಕಳೆದು ಹೋಗಿದ್ದರಿಂದ ಈ ಬಾರಿ ಚೆಂಡನ್ನು ಬದಲಿಸಬೇಕಾದ ಅನಿವಾರ್ಯತೆ ಅಂಪೈರ್​ ಮುಂದಿತ್ತು.

ಈ ಮೊದಲು ಚೆಂಡು ಒದ್ದೆಯಾಗಿದೆ, ಹೊಸ ಬಾಲ್​ ಅನ್ನು ನೀಡುವಂತೆ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ ಅಂಪೈರ್​ಗೆ ಹಲವು ಬಾರಿ ಮನವಿ ಮಾಡಿದ್ದರೂ, ಆ ಮನವಿಯನ್ನು ತಿರಸ್ಕರಿಸಿದ್ದರು. ಆದರೆ ಧೋನಿ ಬಾರಿಸಿದ ಚೆಂಡು ಕಳೆದು ಹೋಗಿದ್ದರಿಂದ ಈ ಬಾರಿ ಚೆಂಡನ್ನು ಬದಲಿಸಬೇಕಾದ ಅನಿವಾರ್ಯತೆ ಅಂಪೈರ್​ ಮುಂದಿತ್ತು.

4 / 6
ಹೀಗಾಗಿ ಹೊಸ ಚೆಂಡನ್ನು ನೀಡಿದರು. ಹೊಸ ಬಾಲ್​ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಯಶ್ ದಯಾಳ್, ಸ್ಲೋ ಬಾಲ್ ಮತ್ತು ಯಾರ್ಕರ್ ಎಸೆತಗಳೊಂದಿಗೆ ಸಿಎಸ್​ಕೆ ಬ್ಯಾಟರ್​ಗಳನ್ನು ನಿಯಂತ್ರಿಸುವಲ್ಲಿ ಸಫಲರಾದರು. ಪರಿಣಾಮ ಕೊನೆಯ ಓವರ್​ನಲ್ಲಿ ಆರ್​ಸಿಬಿ ಕೇವಲ 7 ರನ್ ಮಾತ್ರ ನೀಡಿ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿತು.

ಹೀಗಾಗಿ ಹೊಸ ಚೆಂಡನ್ನು ನೀಡಿದರು. ಹೊಸ ಬಾಲ್​ನಲ್ಲಿ ಹಿಡಿತ ಸಾಧಿಸುವಲ್ಲಿ ಯಶಸ್ವಿಯಾದ ಯಶ್ ದಯಾಳ್, ಸ್ಲೋ ಬಾಲ್ ಮತ್ತು ಯಾರ್ಕರ್ ಎಸೆತಗಳೊಂದಿಗೆ ಸಿಎಸ್​ಕೆ ಬ್ಯಾಟರ್​ಗಳನ್ನು ನಿಯಂತ್ರಿಸುವಲ್ಲಿ ಸಫಲರಾದರು. ಪರಿಣಾಮ ಕೊನೆಯ ಓವರ್​ನಲ್ಲಿ ಆರ್​ಸಿಬಿ ಕೇವಲ 7 ರನ್ ಮಾತ್ರ ನೀಡಿ ಪ್ಲೇಆಫ್​ಗೆ ಅರ್ಹತೆ ಗಿಟ್ಟಿಸಿಕೊಂಡಿತು.

5 / 6
ಹೀಗೆ ಅದೃಷ್ಟದಿಂದ ಬದಲಾದ ಚೆಂಡಿನಿಂದಾಗಿ ನಾವು ಗೆಲ್ಲಲು ಸಾಧ್ಯವಾಯಿತು ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಡಿಕೆ, ಧೋನಿ ಮೈದಾನದ ಹೊರಗೆ ಸಿಕ್ಸ್ ಬಾರಿಸಿದ್ದು, ನಮ್ಮ ಪಾಲಿಗೆ ಅತ್ಯುತ್ತಮ ವಿಷಯ ಎಂದಿದ್ದಾರೆ. ಇದರಿಂದ ಚೆಂಡು ಬದಲಿಸಿದರು. ಅಲ್ಲದೆ ಹೊಸ ಚೆಂಡಿನೊಂದಿಗೆ ಯಶ್ ದಯಾಳ್ ಅದ್ಭುತವಾಗಿ ಬೌಲಿಂಗ್ ಮಾಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಹೀಗೆ ಅದೃಷ್ಟದಿಂದ ಬದಲಾದ ಚೆಂಡಿನಿಂದಾಗಿ ನಾವು ಗೆಲ್ಲಲು ಸಾಧ್ಯವಾಯಿತು ಎಂದು ದಿನೇಶ್ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ. ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಡಿಕೆ, ಧೋನಿ ಮೈದಾನದ ಹೊರಗೆ ಸಿಕ್ಸ್ ಬಾರಿಸಿದ್ದು, ನಮ್ಮ ಪಾಲಿಗೆ ಅತ್ಯುತ್ತಮ ವಿಷಯ ಎಂದಿದ್ದಾರೆ. ಇದರಿಂದ ಚೆಂಡು ಬದಲಿಸಿದರು. ಅಲ್ಲದೆ ಹೊಸ ಚೆಂಡಿನೊಂದಿಗೆ ಯಶ್ ದಯಾಳ್ ಅದ್ಭುತವಾಗಿ ಬೌಲಿಂಗ್ ಮಾಡಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

6 / 6

Published On - 12:07 pm, Sun, 19 May 24

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!