AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದಿಂದ ಹೊರನಡೆದ ಪ್ರಮುಖ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 18ನೇ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ಅಲಭ್ಯರಾಗಲಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರ ಸಿಎಸ್​ಕೆ ತಂಡವನ್ನು ತೊರೆದಿದ್ದು, ತವರಿಗೆ ಹಿಂತಿರುಗಿದ್ದಾರೆ. ಮುಂಬರುವ ಟಿ20 ವಿಶ್ವಕಪ್​ನ ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ತವರಿಗೆ ತೆರಳಿದ್ದು, ಹೀಗಾಗಿ ಶೀಘ್ರದಲ್ಲೇ ಹಿಂತಿರುಗುವ ಸಾಧ್ಯತೆಯಿಲ್ಲ.

TV9 Web
| Edited By: |

Updated on: Apr 03, 2024 | 1:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

1 / 6
ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

2 / 6
ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

3 / 6
ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

4 / 6
ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್