AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡದಿಂದ ಹೊರನಡೆದ ಪ್ರಮುಖ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 18ನೇ ಪಂದ್ಯಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ಅಲಭ್ಯರಾಗಲಿದ್ದಾರೆ. ಈಗಾಗಲೇ ಸ್ಟಾರ್ ಆಟಗಾರ ಸಿಎಸ್​ಕೆ ತಂಡವನ್ನು ತೊರೆದಿದ್ದು, ತವರಿಗೆ ಹಿಂತಿರುಗಿದ್ದಾರೆ. ಮುಂಬರುವ ಟಿ20 ವಿಶ್ವಕಪ್​ನ ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ತವರಿಗೆ ತೆರಳಿದ್ದು, ಹೀಗಾಗಿ ಶೀಘ್ರದಲ್ಲೇ ಹಿಂತಿರುಗುವ ಸಾಧ್ಯತೆಯಿಲ್ಲ.

TV9 Web
| Edited By: |

Updated on: Apr 03, 2024 | 1:57 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮುಸ್ತಫಿಜುರ್ ರೆಹಮಾನ್ ಅರ್ಧದಲ್ಲೇ ತವರಿಗೆ ಹಿಂತಿರುಗಿದ್ದಾರೆ.

1 / 6
ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

ಹೀಗಾಗಿ ಏಪ್ರಿಲ್ 5 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದಾರೆ. ಇದಾದ ಬಳಿಕ ಸಿಎಸ್​ಕೆ ತನ್ನ ಮುಂದಿನ ಪಂದ್ಯವನ್ನು ಏಪ್ರಿಲ್ 8 ರಂದು ಆಡಲಿದ್ದು, ಈ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ. ಈ ವೇಳೆಗೆ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟನೆ ಇಲ್ಲ.

2 / 6
ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

ಏಕೆಂದರೆ ಮುಸ್ತಫಿಜುರ್ ರೆಹಮಾನ್ ಸಿಎಸ್​ಕೆ ತಂಡವನ್ನು ತೊರೆದಿರುವುದು ವೀಸಾ ಸಂಬಂಧಿಸಿದ ಕೆಲಸಕ್ಕಾಗಿ ಎಂದು ತಿಳಿದು ಬಂದಿದೆ. ಮುಂಬರುವ T20 ವಿಶ್ವಕಪ್‌ಗಾಗಿ ಯುಎಸ್​ಎ ವೀಸಾ ಪಡೆಯಬೇಕಿದ್ದು, ಹೀಗಾಗಿ ಅವರು ಬಾಂಗ್ಲಾದೇಶ್​ಗೆ ತೆರಳಿದ್ದಾರೆ.

3 / 6
ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

ಇನ್ನು ಈ ಕೆಲಸ ಕಾರ್ಯಗಳು ಮುಗಿದ ಬಳಿಕವಷ್ಟೇ ಭಾರತಕ್ಕೆ ಮರಳಲಿದ್ದಾರೆ. ಹೀಗಾಗಿ ಮುಸ್ತಫಿಜುರ್ ರೆಹಮಾನ್ ಯಾವಾಗ ಸಿಎಸ್​ಕೆ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಇದಾಗ್ಯೂ ಏಪ್ರಿಲ್ 14 ರೊಳಗೆ ಹಿಂತಿರುಗಿದರೆ ಮಾತ್ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಬಹುದು.

4 / 6
ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಮುಸ್ತಫಿಜುರ್ ರೆಹಮಾನ್ ಅಗ್ರಸ್ಥಾನದಲ್ಲಿದ್ದಾರೆ. ಸಿಎಸ್​ಕೆ ಪರ ಇದೇ ಮೊದಲ ಬಾರಿಗೆ ಕಣಕ್ಕಿಳಿದಿರುವ ಫಿಜ್ 3 ಪಂದ್ಯಗಳಿಂದ ಒಟ್ಟು 7 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

5 / 6
ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

ಇನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಮುಸ್ತಫಿಜುರ್ ರೆಹಮಾನ್ ಅಲಭ್ಯರಾಗಲಿದ್ದು, ಅವರ ಬದಲಿಗೆ ಮೊಯೀನ್ ಅಲಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಬಹುದು.

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!