Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB vs DC ಮ್ಯಾಚ್ ಫಿಕ್ಸ್: ನೆಟ್ಟಿಗರ ಗಂಭೀರ ಆರೋಪ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಟ್ಟು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಒಂದು ವೇಳೆ ಈ ಕ್ಯಾಚ್​ಗಳನ್ನು ಹಿಡಿದಿದ್ದರೆ ಆರ್​ಸಿಬಿ ತಂಡವನ್ನು ಕೇವಲ 150 ರನ್​ಗಳ ಒಳಗೆ ನಿಯಂತ್ರಿಸಬಹುದಿತ್ತು ಎಂದು ಅಕ್ಷರ್ ಪಟೇಲ್ ಹೇಳಿದ್ದಾರೆ. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ಕಳಪೆ ಫೀಲ್ಡಿಂಗ್ ಮುಳುವಾಗಿದೆ. ಇದರ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರ ಈ ಕಳಪೆಯಾಟದ ಬಗ್ಗೆ ಗಂಭೀರ ಆರೋಪಗಳು ಕೂಡ ಕೇಳಿ ಬರಲಾರಂಭಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: May 13, 2024 | 10:52 AM

IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್​ನ 62ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಂಗಾಮಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು.

IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್​ನ 62ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಂಗಾಮಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಆದರೆ ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು ಬರೋಬ್ಬರಿ 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದರು ಎಂಬುದೇ ಆಶ್ಚರ್ಯ.

ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಆದರೆ ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು ಬರೋಬ್ಬರಿ 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದರು ಎಂಬುದೇ ಆಶ್ಚರ್ಯ.

2 / 7
9ನೇ ಓವರ್​ನ 2ನೇ ಎಸೆತದಲ್ಲಿ ವಿಲ್ ಜಾಕ್ಸ್ ನೀಡಿದ ಕ್ಯಾಚ್​ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು. ಇದೇ ಓವರ್​ನ 5ನೇ ಎಸೆತದಲ್ಲಿ ರಜತ್ ಪಾಟಿದಾರ್ ಅವರ ಕ್ಯಾಚ್​ ಅನ್ನು ಶಾಯ್ ಹೋಪ್ ಕೈಬಿಟ್ಟಿದ್ದರು.

9ನೇ ಓವರ್​ನ 2ನೇ ಎಸೆತದಲ್ಲಿ ವಿಲ್ ಜಾಕ್ಸ್ ನೀಡಿದ ಕ್ಯಾಚ್​ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು. ಇದೇ ಓವರ್​ನ 5ನೇ ಎಸೆತದಲ್ಲಿ ರಜತ್ ಪಾಟಿದಾರ್ ಅವರ ಕ್ಯಾಚ್​ ಅನ್ನು ಶಾಯ್ ಹೋಪ್ ಕೈಬಿಟ್ಟಿದ್ದರು.

3 / 7
ಇನ್ನು 10ನೇ ಓವರ್​ನ 4ನೇ ಎಸೆತದಲ್ಲಿ ಜಾಕ್ಸ್ ಬಾರಿಸಿದ ಚೆಂಡನ್ನು ಹಿಡಿಯುವಲ್ಲಿ ಟ್ರಿಸ್ಟಾನ್ ಸ್ಟಬ್ಸ್ ವಿಫಲರಾಗಿದ್ದರು. ಹಾಗೆಯೇ 10ನೇ ಓವರ್​ನ ಮೊದಲ ಎಸೆತದಲ್ಲಿ ರಜತ್ ಪಾಟಿದಾರ್ ನೀಡಿದ ಸುಲಭ ಕ್ಯಾಚ್ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು.

ಇನ್ನು 10ನೇ ಓವರ್​ನ 4ನೇ ಎಸೆತದಲ್ಲಿ ಜಾಕ್ಸ್ ಬಾರಿಸಿದ ಚೆಂಡನ್ನು ಹಿಡಿಯುವಲ್ಲಿ ಟ್ರಿಸ್ಟಾನ್ ಸ್ಟಬ್ಸ್ ವಿಫಲರಾಗಿದ್ದರು. ಹಾಗೆಯೇ 10ನೇ ಓವರ್​ನ ಮೊದಲ ಎಸೆತದಲ್ಲಿ ರಜತ್ ಪಾಟಿದಾರ್ ನೀಡಿದ ಸುಲಭ ಕ್ಯಾಚ್ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು.

4 / 7
ಅಂದರೆ ಕೇವಲ 2 ಓವರ್​ಗಳ ಅಂತರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಇದೇ ಕಾರಣದಿಂದ ಇದೀಗ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಫಿಕ್ಸ್ ಆಗಿತ್ತಾ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಅಂದರೆ ಕೇವಲ 2 ಓವರ್​ಗಳ ಅಂತರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಇದೇ ಕಾರಣದಿಂದ ಇದೀಗ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಫಿಕ್ಸ್ ಆಗಿತ್ತಾ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

5 / 7
ಇದೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಸ್ಪೋಟಕ ದಾಂಡಿಗ ಟ್ರಿಸ್ಟಾನ್ ಸ್ಟಬ್ಸ್ ರನೌಟ್ ಆದ ರೀತಿ ಕೂಡ ಈ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ. ಏಕೆಂದರೆ ಸ್ಟ್ರೈಕ್​ನಲ್ಲಿದ್ದ ಅಕ್ಷರ್ ಪಟೇಲ್ ರನ್ ಕರೆ ನೀಡದಿದ್ದರೂ ಸ್ಟಬ್ಸ್ ಪಿಚ್​ನ ಮಧ್ಯ ಭಾಗದವರೆಗೂ ಓಡಿದ್ದು ಯಾಕೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಇದೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಸ್ಪೋಟಕ ದಾಂಡಿಗ ಟ್ರಿಸ್ಟಾನ್ ಸ್ಟಬ್ಸ್ ರನೌಟ್ ಆದ ರೀತಿ ಕೂಡ ಈ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ. ಏಕೆಂದರೆ ಸ್ಟ್ರೈಕ್​ನಲ್ಲಿದ್ದ ಅಕ್ಷರ್ ಪಟೇಲ್ ರನ್ ಕರೆ ನೀಡದಿದ್ದರೂ ಸ್ಟಬ್ಸ್ ಪಿಚ್​ನ ಮಧ್ಯ ಭಾಗದವರೆಗೂ ಓಡಿದ್ದು ಯಾಕೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

6 / 7
ಒಂದೆಡೆ 4 ಕ್ಯಾಚ್​ಗಳ ಡ್ರಾಪ್, ಮತ್ತೊಂದೆಡೆ ಸುಲಭ ರನೌಟ್​ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಅತ್ಯುತ್ತಮ ಫೀಲ್ಡರ್ ಎನಿಸಿಕೊಂಡಿರುವ ಅಕ್ಷರ್ ಪಟೇಲ್​ 2 ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿರುವುದು ಅಚ್ಚರಿ. ಹೀಗಾಗಿಯೇ RCB - DC ನಡುವಣ ಪಂದ್ಯ ಫಿಕ್ಸ್ ಎಂದು ನೆಟ್ಟಿಗರು ಆರೋಪಿಸುತ್ತಿದ್ದಾರೆ.

ಒಂದೆಡೆ 4 ಕ್ಯಾಚ್​ಗಳ ಡ್ರಾಪ್, ಮತ್ತೊಂದೆಡೆ ಸುಲಭ ರನೌಟ್​ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಅತ್ಯುತ್ತಮ ಫೀಲ್ಡರ್ ಎನಿಸಿಕೊಂಡಿರುವ ಅಕ್ಷರ್ ಪಟೇಲ್​ 2 ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿರುವುದು ಅಚ್ಚರಿ. ಹೀಗಾಗಿಯೇ RCB - DC ನಡುವಣ ಪಂದ್ಯ ಫಿಕ್ಸ್ ಎಂದು ನೆಟ್ಟಿಗರು ಆರೋಪಿಸುತ್ತಿದ್ದಾರೆ.

7 / 7
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್