AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB vs DC ಮ್ಯಾಚ್ ಫಿಕ್ಸ್: ನೆಟ್ಟಿಗರ ಗಂಭೀರ ಆರೋಪ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಟ್ಟು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಒಂದು ವೇಳೆ ಈ ಕ್ಯಾಚ್​ಗಳನ್ನು ಹಿಡಿದಿದ್ದರೆ ಆರ್​ಸಿಬಿ ತಂಡವನ್ನು ಕೇವಲ 150 ರನ್​ಗಳ ಒಳಗೆ ನಿಯಂತ್ರಿಸಬಹುದಿತ್ತು ಎಂದು ಅಕ್ಷರ್ ಪಟೇಲ್ ಹೇಳಿದ್ದಾರೆ. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಿಗೆ ಕಳಪೆ ಫೀಲ್ಡಿಂಗ್ ಮುಳುವಾಗಿದೆ. ಇದರ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರರ ಈ ಕಳಪೆಯಾಟದ ಬಗ್ಗೆ ಗಂಭೀರ ಆರೋಪಗಳು ಕೂಡ ಕೇಳಿ ಬರಲಾರಂಭಿಸಿದೆ.

TV9 Web
| Edited By: |

Updated on: May 13, 2024 | 10:52 AM

Share
IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್​ನ 62ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಂಗಾಮಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು.

IPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್​ನ 62ನೇ ಪಂದ್ಯದಲ್ಲಿ ಆರ್​ಸಿಬಿ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಂಗಾಮಿ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಆದರೆ ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು ಬರೋಬ್ಬರಿ 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದರು ಎಂಬುದೇ ಆಶ್ಚರ್ಯ.

ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಆದರೆ ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು ಬರೋಬ್ಬರಿ 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದರು ಎಂಬುದೇ ಆಶ್ಚರ್ಯ.

2 / 7
9ನೇ ಓವರ್​ನ 2ನೇ ಎಸೆತದಲ್ಲಿ ವಿಲ್ ಜಾಕ್ಸ್ ನೀಡಿದ ಕ್ಯಾಚ್​ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು. ಇದೇ ಓವರ್​ನ 5ನೇ ಎಸೆತದಲ್ಲಿ ರಜತ್ ಪಾಟಿದಾರ್ ಅವರ ಕ್ಯಾಚ್​ ಅನ್ನು ಶಾಯ್ ಹೋಪ್ ಕೈಬಿಟ್ಟಿದ್ದರು.

9ನೇ ಓವರ್​ನ 2ನೇ ಎಸೆತದಲ್ಲಿ ವಿಲ್ ಜಾಕ್ಸ್ ನೀಡಿದ ಕ್ಯಾಚ್​ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು. ಇದೇ ಓವರ್​ನ 5ನೇ ಎಸೆತದಲ್ಲಿ ರಜತ್ ಪಾಟಿದಾರ್ ಅವರ ಕ್ಯಾಚ್​ ಅನ್ನು ಶಾಯ್ ಹೋಪ್ ಕೈಬಿಟ್ಟಿದ್ದರು.

3 / 7
ಇನ್ನು 10ನೇ ಓವರ್​ನ 4ನೇ ಎಸೆತದಲ್ಲಿ ಜಾಕ್ಸ್ ಬಾರಿಸಿದ ಚೆಂಡನ್ನು ಹಿಡಿಯುವಲ್ಲಿ ಟ್ರಿಸ್ಟಾನ್ ಸ್ಟಬ್ಸ್ ವಿಫಲರಾಗಿದ್ದರು. ಹಾಗೆಯೇ 10ನೇ ಓವರ್​ನ ಮೊದಲ ಎಸೆತದಲ್ಲಿ ರಜತ್ ಪಾಟಿದಾರ್ ನೀಡಿದ ಸುಲಭ ಕ್ಯಾಚ್ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು.

ಇನ್ನು 10ನೇ ಓವರ್​ನ 4ನೇ ಎಸೆತದಲ್ಲಿ ಜಾಕ್ಸ್ ಬಾರಿಸಿದ ಚೆಂಡನ್ನು ಹಿಡಿಯುವಲ್ಲಿ ಟ್ರಿಸ್ಟಾನ್ ಸ್ಟಬ್ಸ್ ವಿಫಲರಾಗಿದ್ದರು. ಹಾಗೆಯೇ 10ನೇ ಓವರ್​ನ ಮೊದಲ ಎಸೆತದಲ್ಲಿ ರಜತ್ ಪಾಟಿದಾರ್ ನೀಡಿದ ಸುಲಭ ಕ್ಯಾಚ್ ಅನ್ನು ಅಕ್ಷರ್ ಪಟೇಲ್ ಕೈಚೆಲ್ಲಿದ್ದರು.

4 / 7
ಅಂದರೆ ಕೇವಲ 2 ಓವರ್​ಗಳ ಅಂತರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಇದೇ ಕಾರಣದಿಂದ ಇದೀಗ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಫಿಕ್ಸ್ ಆಗಿತ್ತಾ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಅಂದರೆ ಕೇವಲ 2 ಓವರ್​ಗಳ ಅಂತರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡರ್​ಗಳು 4 ಕ್ಯಾಚ್​ಗಳನ್ನು ಕೈಚೆಲ್ಲಿದ್ದಾರೆ. ಇದೇ ಕಾರಣದಿಂದ ಇದೀಗ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ಫಿಕ್ಸ್ ಆಗಿತ್ತಾ ಎಂದು ನೆಟ್ಟಿಗರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

5 / 7
ಇದೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಸ್ಪೋಟಕ ದಾಂಡಿಗ ಟ್ರಿಸ್ಟಾನ್ ಸ್ಟಬ್ಸ್ ರನೌಟ್ ಆದ ರೀತಿ ಕೂಡ ಈ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ. ಏಕೆಂದರೆ ಸ್ಟ್ರೈಕ್​ನಲ್ಲಿದ್ದ ಅಕ್ಷರ್ ಪಟೇಲ್ ರನ್ ಕರೆ ನೀಡದಿದ್ದರೂ ಸ್ಟಬ್ಸ್ ಪಿಚ್​ನ ಮಧ್ಯ ಭಾಗದವರೆಗೂ ಓಡಿದ್ದು ಯಾಕೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

ಇದೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಸ್ಪೋಟಕ ದಾಂಡಿಗ ಟ್ರಿಸ್ಟಾನ್ ಸ್ಟಬ್ಸ್ ರನೌಟ್ ಆದ ರೀತಿ ಕೂಡ ಈ ಅನುಮಾನಗಳನ್ನು ಮತ್ತಷ್ಟು ಹೆಚ್ಚಿಸಿದೆ. ಏಕೆಂದರೆ ಸ್ಟ್ರೈಕ್​ನಲ್ಲಿದ್ದ ಅಕ್ಷರ್ ಪಟೇಲ್ ರನ್ ಕರೆ ನೀಡದಿದ್ದರೂ ಸ್ಟಬ್ಸ್ ಪಿಚ್​ನ ಮಧ್ಯ ಭಾಗದವರೆಗೂ ಓಡಿದ್ದು ಯಾಕೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ.

6 / 7
ಒಂದೆಡೆ 4 ಕ್ಯಾಚ್​ಗಳ ಡ್ರಾಪ್, ಮತ್ತೊಂದೆಡೆ ಸುಲಭ ರನೌಟ್​ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಅತ್ಯುತ್ತಮ ಫೀಲ್ಡರ್ ಎನಿಸಿಕೊಂಡಿರುವ ಅಕ್ಷರ್ ಪಟೇಲ್​ 2 ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿರುವುದು ಅಚ್ಚರಿ. ಹೀಗಾಗಿಯೇ RCB - DC ನಡುವಣ ಪಂದ್ಯ ಫಿಕ್ಸ್ ಎಂದು ನೆಟ್ಟಿಗರು ಆರೋಪಿಸುತ್ತಿದ್ದಾರೆ.

ಒಂದೆಡೆ 4 ಕ್ಯಾಚ್​ಗಳ ಡ್ರಾಪ್, ಮತ್ತೊಂದೆಡೆ ಸುಲಭ ರನೌಟ್​ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ. ಅದರಲ್ಲೂ ಅತ್ಯುತ್ತಮ ಫೀಲ್ಡರ್ ಎನಿಸಿಕೊಂಡಿರುವ ಅಕ್ಷರ್ ಪಟೇಲ್​ 2 ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿರುವುದು ಅಚ್ಚರಿ. ಹೀಗಾಗಿಯೇ RCB - DC ನಡುವಣ ಪಂದ್ಯ ಫಿಕ್ಸ್ ಎಂದು ನೆಟ್ಟಿಗರು ಆರೋಪಿಸುತ್ತಿದ್ದಾರೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ