AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಗೆಲ್ಲಲ್ಲ, ಪ್ಲೇಆಫ್​ ಪ್ರವೇಶಿಸಲ್ಲ ಎಂದ ಐವರು ಮಾಜಿ ಕ್ರಿಕೆಟಿಗರು

IPL 2024 RCB vs CSK: ಐಪಿಎಲ್​ನಲ್ಲಿ RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 10 ಮ್ಯಾಚ್​ಗಳಲ್ಲಿ ಮಾತ್ರ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 21 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಝಾಹಿರ್ ಯೂಸುಫ್
|

Updated on:May 16, 2024 | 1:47 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಸೀಸನ್​ 17 ರ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 65 ಪಂದ್ಯಗಳ ಮುಕ್ತಾಯದ ಬಳಿಕ ಪ್ಲೇಆಫ್ ಪ್ರವೇಶಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಇನ್ನುಳಿದ 2 ಸ್ಥಾನಗಳಿಗಾಗಿ ಸನ್​ರೈಸರ್ಸ್​ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಸೀಸನ್​ 17 ರ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 65 ಪಂದ್ಯಗಳ ಮುಕ್ತಾಯದ ಬಳಿಕ ಪ್ಲೇಆಫ್ ಪ್ರವೇಶಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಇನ್ನುಳಿದ 2 ಸ್ಥಾನಗಳಿಗಾಗಿ ಸನ್​ರೈಸರ್ಸ್​ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

1 / 8
ಈ ಪೈಪೋಟಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 2 ತಂಡಗಳಾವುವು ಎಂಬುದೇ ಕುತೂಹಲ. ಈ ಕುತೂಹಲವನ್ನು ತಣಿಸುವಂತೆ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಅಂಬಾಟಿ ರಾಯುಡು, ಮೊಹಮ್ಮದ್ ಕೈಫ್, ಮ್ಯಾಥ್ಯೂ ಹೇಡನ್ ಮತ್ತು ಟಾಮ್ ಮೂಡಿ ಟಾಪ್-4 ತಂಡಗಳನ್ನು ಹೆಸರಿಸಿದ್ದಾರೆ.

ಈ ಪೈಪೋಟಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 2 ತಂಡಗಳಾವುವು ಎಂಬುದೇ ಕುತೂಹಲ. ಈ ಕುತೂಹಲವನ್ನು ತಣಿಸುವಂತೆ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಅಂಬಾಟಿ ರಾಯುಡು, ಮೊಹಮ್ಮದ್ ಕೈಫ್, ಮ್ಯಾಥ್ಯೂ ಹೇಡನ್ ಮತ್ತು ಟಾಮ್ ಮೂಡಿ ಟಾಪ್-4 ತಂಡಗಳನ್ನು ಹೆಸರಿಸಿದ್ದಾರೆ.

2 / 8
ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿರುವ ಇರ್ಫಾನ್ ಪಠಾಣ್, ಆರ್​ಸಿಬಿ ಮತ್ತು ಸಿಎಸ್​ಕೆ ನಡುವಣ ಮುಖಾಮುಖಿಯಲ್ಲಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲಲಿದೆ. ಈ ಮೂಲಕ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಅದರಂತೆ ಟಾಪ್-4 ನಲ್ಲಿ ಕೆಕೆಆರ್, ಆರ್​ಆರ್​, ಸಿಎಸ್​ಕೆ, ಎಸ್​ಆರ್​ಹೆಚ್ ತಂಡಗಳು ಕಾಣಿಸಿಕೊಳ್ಳಲಿದೆ ಎಂದಿದ್ದಾರೆ.

ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿರುವ ಇರ್ಫಾನ್ ಪಠಾಣ್, ಆರ್​ಸಿಬಿ ಮತ್ತು ಸಿಎಸ್​ಕೆ ನಡುವಣ ಮುಖಾಮುಖಿಯಲ್ಲಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲಲಿದೆ. ಈ ಮೂಲಕ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಅದರಂತೆ ಟಾಪ್-4 ನಲ್ಲಿ ಕೆಕೆಆರ್, ಆರ್​ಆರ್​, ಸಿಎಸ್​ಕೆ, ಎಸ್​ಆರ್​ಹೆಚ್ ತಂಡಗಳು ಕಾಣಿಸಿಕೊಳ್ಳಲಿದೆ ಎಂದಿದ್ದಾರೆ.

3 / 8
ಇನ್ನು ಅಂಬಾಟಿ ರಾಯುಡು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದಿದ್ದಾರೆ. ಈ ಮೂಲಕ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡವೇ ಗೆಲ್ಲಲಿದೆ ಎಂದು ಒತ್ತಿ ಹೇಳಿದ್ದಾರೆ.

ಇನ್ನು ಅಂಬಾಟಿ ರಾಯುಡು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದಿದ್ದಾರೆ. ಈ ಮೂಲಕ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡವೇ ಗೆಲ್ಲಲಿದೆ ಎಂದು ಒತ್ತಿ ಹೇಳಿದ್ದಾರೆ.

4 / 8
ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಕೂಡ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದು, ಆರ್​ಸಿಬಿ ವಿರುದ್ಧ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಕೂಡ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದು, ಆರ್​ಸಿಬಿ ವಿರುದ್ಧ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ತಿಳಿಸಿದ್ದಾರೆ.

5 / 8
ಇನ್ನು ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಹ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲ್ಲುವುದು ಕಷ್ಟಸಾಧ್ಯ ಎಂದಿದ್ದಾರೆ. ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶಿಸಲಿದೆ. ಈ ಮೂಲಕ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ಪ್ಲೇಆಫ್ ಪಂದ್ಯಗಳನ್ನಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಹ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲ್ಲುವುದು ಕಷ್ಟಸಾಧ್ಯ ಎಂದಿದ್ದಾರೆ. ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶಿಸಲಿದೆ. ಈ ಮೂಲಕ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ಪ್ಲೇಆಫ್ ಪಂದ್ಯಗಳನ್ನಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

6 / 8
ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಾಮ್ ಮೂಡಿ ಕೂಡ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ತಂಡಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದಿದ್ದಾರೆ. ನಿರ್ಣಾಯಕವಾಗಿರುವ ಪಂದ್ಯದಲ್ಲಿ ಆರ್​ಸಿಬಿಗೆ ಸೋಲುಣಿಸಿ ಸಿಎಸ್​ಕೆ ಪ್ಲೇಆಫ್ ಪ್ರವೇಶಿಸಲಿದೆ ಎಂದು ಟಾಮ್ ಮೂಡಿ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಾಮ್ ಮೂಡಿ ಕೂಡ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ತಂಡಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದಿದ್ದಾರೆ. ನಿರ್ಣಾಯಕವಾಗಿರುವ ಪಂದ್ಯದಲ್ಲಿ ಆರ್​ಸಿಬಿಗೆ ಸೋಲುಣಿಸಿ ಸಿಎಸ್​ಕೆ ಪ್ಲೇಆಫ್ ಪ್ರವೇಶಿಸಲಿದೆ ಎಂದು ಟಾಮ್ ಮೂಡಿ ಭವಿಷ್ಯ ನುಡಿದಿದ್ದಾರೆ.

7 / 8
ಅಂದರೆ ಕ್ರಿಕೆಟ್ ವಿಶ್ಲೇಷಕರ ಪ್ರಕಾರ ಆರ್​ಸಿಬಿ ಈ ಬಾರಿ ಪ್ಲೇಆಫ್ ಪ್ರವೇಶಿಸುವುದಿಲ್ಲ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

ಅಂದರೆ ಕ್ರಿಕೆಟ್ ವಿಶ್ಲೇಷಕರ ಪ್ರಕಾರ ಆರ್​ಸಿಬಿ ಈ ಬಾರಿ ಪ್ಲೇಆಫ್ ಪ್ರವೇಶಿಸುವುದಿಲ್ಲ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

8 / 8

Published On - 12:07 pm, Thu, 16 May 24

Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!