AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಗೆಲ್ಲಲ್ಲ, ಪ್ಲೇಆಫ್​ ಪ್ರವೇಶಿಸಲ್ಲ ಎಂದ ಐವರು ಮಾಜಿ ಕ್ರಿಕೆಟಿಗರು

IPL 2024 RCB vs CSK: ಐಪಿಎಲ್​ನಲ್ಲಿ RCB ಮತ್ತು CSK ತಂಡಗಳು ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿರುವುದು ಕೇವಲ 10 ಮ್ಯಾಚ್​ಗಳಲ್ಲಿ ಮಾತ್ರ. ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 21 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿತ್ತು.

ಝಾಹಿರ್ ಯೂಸುಫ್
|

Updated on:May 16, 2024 | 1:47 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಸೀಸನ್​ 17 ರ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 65 ಪಂದ್ಯಗಳ ಮುಕ್ತಾಯದ ಬಳಿಕ ಪ್ಲೇಆಫ್ ಪ್ರವೇಶಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಇನ್ನುಳಿದ 2 ಸ್ಥಾನಗಳಿಗಾಗಿ ಸನ್​ರೈಸರ್ಸ್​ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಸೀಸನ್​ 17 ರ ಲೀಗ್ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. 65 ಪಂದ್ಯಗಳ ಮುಕ್ತಾಯದ ಬಳಿಕ ಪ್ಲೇಆಫ್ ಪ್ರವೇಶಿಸಿರುವುದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮಾತ್ರ. ಇನ್ನುಳಿದ 2 ಸ್ಥಾನಗಳಿಗಾಗಿ ಸನ್​ರೈಸರ್ಸ್​ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

1 / 8
ಈ ಪೈಪೋಟಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 2 ತಂಡಗಳಾವುವು ಎಂಬುದೇ ಕುತೂಹಲ. ಈ ಕುತೂಹಲವನ್ನು ತಣಿಸುವಂತೆ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಅಂಬಾಟಿ ರಾಯುಡು, ಮೊಹಮ್ಮದ್ ಕೈಫ್, ಮ್ಯಾಥ್ಯೂ ಹೇಡನ್ ಮತ್ತು ಟಾಮ್ ಮೂಡಿ ಟಾಪ್-4 ತಂಡಗಳನ್ನು ಹೆಸರಿಸಿದ್ದಾರೆ.

ಈ ಪೈಪೋಟಿಯಲ್ಲಿ ಪ್ಲೇಆಫ್ ಪ್ರವೇಶಿಸಲಿರುವ 2 ತಂಡಗಳಾವುವು ಎಂಬುದೇ ಕುತೂಹಲ. ಈ ಕುತೂಹಲವನ್ನು ತಣಿಸುವಂತೆ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಅಂಬಾಟಿ ರಾಯುಡು, ಮೊಹಮ್ಮದ್ ಕೈಫ್, ಮ್ಯಾಥ್ಯೂ ಹೇಡನ್ ಮತ್ತು ಟಾಮ್ ಮೂಡಿ ಟಾಪ್-4 ತಂಡಗಳನ್ನು ಹೆಸರಿಸಿದ್ದಾರೆ.

2 / 8
ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿರುವ ಇರ್ಫಾನ್ ಪಠಾಣ್, ಆರ್​ಸಿಬಿ ಮತ್ತು ಸಿಎಸ್​ಕೆ ನಡುವಣ ಮುಖಾಮುಖಿಯಲ್ಲಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲಲಿದೆ. ಈ ಮೂಲಕ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಅದರಂತೆ ಟಾಪ್-4 ನಲ್ಲಿ ಕೆಕೆಆರ್, ಆರ್​ಆರ್​, ಸಿಎಸ್​ಕೆ, ಎಸ್​ಆರ್​ಹೆಚ್ ತಂಡಗಳು ಕಾಣಿಸಿಕೊಳ್ಳಲಿದೆ ಎಂದಿದ್ದಾರೆ.

ಚಾನೆಲ್ ಚರ್ಚೆಯಲ್ಲಿ ಈ ಬಗ್ಗೆ ಮಾತನಾಡಿರುವ ಇರ್ಫಾನ್ ಪಠಾಣ್, ಆರ್​ಸಿಬಿ ಮತ್ತು ಸಿಎಸ್​ಕೆ ನಡುವಣ ಮುಖಾಮುಖಿಯಲ್ಲಿ ನನ್ನ ಪ್ರಕಾರ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲಲಿದೆ. ಈ ಮೂಲಕ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಅದರಂತೆ ಟಾಪ್-4 ನಲ್ಲಿ ಕೆಕೆಆರ್, ಆರ್​ಆರ್​, ಸಿಎಸ್​ಕೆ, ಎಸ್​ಆರ್​ಹೆಚ್ ತಂಡಗಳು ಕಾಣಿಸಿಕೊಳ್ಳಲಿದೆ ಎಂದಿದ್ದಾರೆ.

3 / 8
ಇನ್ನು ಅಂಬಾಟಿ ರಾಯುಡು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದಿದ್ದಾರೆ. ಈ ಮೂಲಕ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡವೇ ಗೆಲ್ಲಲಿದೆ ಎಂದು ಒತ್ತಿ ಹೇಳಿದ್ದಾರೆ.

ಇನ್ನು ಅಂಬಾಟಿ ರಾಯುಡು ಕೂಡ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದಿದ್ದಾರೆ. ಈ ಮೂಲಕ ಆರ್​ಸಿಬಿ ವಿರುದ್ಧ ಸಿಎಸ್​ಕೆ ತಂಡವೇ ಗೆಲ್ಲಲಿದೆ ಎಂದು ಒತ್ತಿ ಹೇಳಿದ್ದಾರೆ.

4 / 8
ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಕೂಡ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದು, ಆರ್​ಸಿಬಿ ವಿರುದ್ಧ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ತಿಳಿಸಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಕೂಡ ಇದೇ ಅಭಿಪ್ರಾಯವನ್ನು ಮುಂದಿಟ್ಟಿದ್ದು, ಆರ್​ಸಿಬಿ ವಿರುದ್ಧ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್​, ಸನ್​ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಪ್ಲೇಆಫ್ ಆಡಲಿದೆ ಎಂದು ತಿಳಿಸಿದ್ದಾರೆ.

5 / 8
ಇನ್ನು ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಹ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲ್ಲುವುದು ಕಷ್ಟಸಾಧ್ಯ ಎಂದಿದ್ದಾರೆ. ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶಿಸಲಿದೆ. ಈ ಮೂಲಕ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ಪ್ಲೇಆಫ್ ಪಂದ್ಯಗಳನ್ನಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಭಾರತ ತಂಡದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಹ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲ್ಲುವುದು ಕಷ್ಟಸಾಧ್ಯ ಎಂದಿದ್ದಾರೆ. ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ಗೆಲ್ಲುವ ಮೂಲಕ ಪ್ಲೇಆಫ್​ ಪ್ರವೇಶಿಸಲಿದೆ. ಈ ಮೂಲಕ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ಪ್ಲೇಆಫ್ ಪಂದ್ಯಗಳನ್ನಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

6 / 8
ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಾಮ್ ಮೂಡಿ ಕೂಡ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ತಂಡಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದಿದ್ದಾರೆ. ನಿರ್ಣಾಯಕವಾಗಿರುವ ಪಂದ್ಯದಲ್ಲಿ ಆರ್​ಸಿಬಿಗೆ ಸೋಲುಣಿಸಿ ಸಿಎಸ್​ಕೆ ಪ್ಲೇಆಫ್ ಪ್ರವೇಶಿಸಲಿದೆ ಎಂದು ಟಾಮ್ ಮೂಡಿ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಾಮ್ ಮೂಡಿ ಕೂಡ ಕೆಕೆಆರ್, ಆರ್​​ಆರ್​, ಎಸ್​ಆರ್​ಹೆಚ್ ಮತ್ತು ಸಿಎಸ್​ಕೆ ತಂಡಗಳು ಟಾಪ್-4 ನಲ್ಲಿ ಕಾಣಿಸಿಕೊಳ್ಳಲಿದೆ ಎಂದಿದ್ದಾರೆ. ನಿರ್ಣಾಯಕವಾಗಿರುವ ಪಂದ್ಯದಲ್ಲಿ ಆರ್​ಸಿಬಿಗೆ ಸೋಲುಣಿಸಿ ಸಿಎಸ್​ಕೆ ಪ್ಲೇಆಫ್ ಪ್ರವೇಶಿಸಲಿದೆ ಎಂದು ಟಾಮ್ ಮೂಡಿ ಭವಿಷ್ಯ ನುಡಿದಿದ್ದಾರೆ.

7 / 8
ಅಂದರೆ ಕ್ರಿಕೆಟ್ ವಿಶ್ಲೇಷಕರ ಪ್ರಕಾರ ಆರ್​ಸಿಬಿ ಈ ಬಾರಿ ಪ್ಲೇಆಫ್ ಪ್ರವೇಶಿಸುವುದಿಲ್ಲ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

ಅಂದರೆ ಕ್ರಿಕೆಟ್ ವಿಶ್ಲೇಷಕರ ಪ್ರಕಾರ ಆರ್​ಸಿಬಿ ಈ ಬಾರಿ ಪ್ಲೇಆಫ್ ಪ್ರವೇಶಿಸುವುದಿಲ್ಲ. ಇದಾಗ್ಯೂ ಅಂತಿಮ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಆರ್​ಸಿಬಿ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದೆಯಾ ಕಾದು ನೋಡಬೇಕಿದೆ.

8 / 8

Published On - 12:07 pm, Thu, 16 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್