AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಿಂದ ಮೂವರು ಔಟ್: ಮತ್ತಿಬ್ಬರು ಡೌಟ್

IPL 2024: IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್ 17 ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಲಿದೆ. ಮೊದಲಾರ್ಧದ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಉಳಿದ ಮ್ಯಾಚ್​ಗಳ ದಿನಾಂಕವನ್ನು ಲೋಕಸಭಾ ಚುನಾವಣಾ ದಿನಾಂಕದ ಘೋಷಣೆಯ ಬಳಿಕ ನಿಗದಿ ಮಾಡಲಾಗುತ್ತದೆ.

TV9 Web
| Edited By: |

Updated on: Mar 02, 2024 | 3:28 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ವಿಶ್ವದ ಶ್ರೀಮಂತ ಲೀಗ್​ನಿಂದ ಈಗಾಗಲೇ ಮೂವರು ಆಟಗಾರರು ಹೊರಬಿದ್ದಿದ್ದಾರೆ. ಇನ್ನೂ ಕೆಲ ಆಟಗಾರರು ಗಾಯದಿಂದ ಬಳಲುತ್ತಿದ್ದು, ಅವರ ಪಾಲ್ಗೊಳ್ಳುವಿಕೆಯ ಬಗ್ಗೆ ಖಚಿತತೆಯಿಲ್ಲ. ಹಾಗಿದ್ರೆ ಐಪಿಎಲ್​ನಿಂದ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಮಾರ್ಚ್ 22 ರಿಂದ ಆರಂಭವಾಗಲಿರುವ ವಿಶ್ವದ ಶ್ರೀಮಂತ ಲೀಗ್​ನಿಂದ ಈಗಾಗಲೇ ಮೂವರು ಆಟಗಾರರು ಹೊರಬಿದ್ದಿದ್ದಾರೆ. ಇನ್ನೂ ಕೆಲ ಆಟಗಾರರು ಗಾಯದಿಂದ ಬಳಲುತ್ತಿದ್ದು, ಅವರ ಪಾಲ್ಗೊಳ್ಳುವಿಕೆಯ ಬಗ್ಗೆ ಖಚಿತತೆಯಿಲ್ಲ. ಹಾಗಿದ್ರೆ ಐಪಿಎಲ್​ನಿಂದ ಹೊರಬಿದ್ದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1 / 6
1- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವೇಗಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನಾಗಿ ವೆಸ್ಟ್ ಇಂಡೀಸ್​ನ ಶಮರ್ ಜೋಸೆಫ್ ಆಯ್ಕೆಯಾಗಿದ್ದಾರೆ.

1- ಮಾರ್ಕ್​ ವುಡ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವೇಗಿ ಮಾರ್ಕ್ ವುಡ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂಗ್ಲೆಂಡ್ ವೇಗಿ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರ ಬದಲಿ ಆಟಗಾರನಾಗಿ ವೆಸ್ಟ್ ಇಂಡೀಸ್​ನ ಶಮರ್ ಜೋಸೆಫ್ ಆಯ್ಕೆಯಾಗಿದ್ದಾರೆ.

2 / 6
2- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಕೆಲಸದ ಒತ್ತಡದ ಕಾರಣ ಅಟ್ಕಿನ್ಸನ್ ಕೂಡ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಶ್ರೀಲಂಕಾ ತಂಡದ ವೇಗಿ ದುಷ್ಮಂತ ಚಮೀರಾರನ್ನು ಕೆಕೆಆರ್ ಆಯ್ಕೆ ಮಾಡಿದೆ.

2- ಗಸ್ ಅಟ್ಕಿನ್ಸನ್: ಈ ಬಾರಿಯ ಐಪಿಎಲ್​ ಹರಾಜಿನಲ್ಲಿ ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಆಯ್ಕೆ ಮಾಡಿಕೊಂಡಿತ್ತು. ಆದರೀಗ ಕೆಲಸದ ಒತ್ತಡದ ಕಾರಣ ಅಟ್ಕಿನ್ಸನ್ ಕೂಡ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಶ್ರೀಲಂಕಾ ತಂಡದ ವೇಗಿ ದುಷ್ಮಂತ ಚಮೀರಾರನ್ನು ಕೆಕೆಆರ್ ಆಯ್ಕೆ ಮಾಡಿದೆ.

3 / 6
3- ಮೊಹಮ್ಮದ್ ಶಮಿ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿಸುವುದಿಲ್ಲ. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಬೌಲರ್ ಆಗಿರುವ ಶಮಿ ಹಿಮ್ಮಡಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಗುಜರಾತ್ ಟೈಟಾನ್ಸ್ ಬದಲಿ ಆಟಗಾರನನ್ನು ಹೆಸರಿಸಿಲ್ಲ.

3- ಮೊಹಮ್ಮದ್ ಶಮಿ: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಈ ಬಾರಿಯ ಐಪಿಎಲ್​ನಲ್ಲಿ ಕಣಕ್ಕಿಳಿಸುವುದಿಲ್ಲ. ಗುಜರಾತ್ ಟೈಟಾನ್ಸ್ ತಂಡದ ಪ್ರಮುಖ ಬೌಲರ್ ಆಗಿರುವ ಶಮಿ ಹಿಮ್ಮಡಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಕೂಡ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಗುಜರಾತ್ ಟೈಟಾನ್ಸ್ ಬದಲಿ ಆಟಗಾರನನ್ನು ಹೆಸರಿಸಿಲ್ಲ.

4 / 6
4- ಟಾಮ್ ಕರನ್: ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಟಾಮ್ ಕರನ್ ಕೂಡ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಕರನ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಐಪಿಎಲ್​ನಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.

4- ಟಾಮ್ ಕರನ್: ಆರ್​ಸಿಬಿ ತಂಡದಲ್ಲಿರುವ ಇಂಗ್ಲೆಂಡ್ ಆಲ್​ರೌಂಡರ್ ಟಾಮ್ ಕರನ್ ಕೂಡ ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ. ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಕರನ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ. ಹೀಗಾಗಿ ಐಪಿಎಲ್​ನಿಂದ ಹಿಂದೆ ಸರಿಯುವ ಸಾಧ್ಯತೆಯಿದೆ.

5 / 6
ಇನ್ನು ರಶೀದ್ ಖಾನ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಫಿಟ್​ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಾಗ್ಯೂ ಸೂರ್ಯಕುಮಾರ್ ಇದೀಗ ಅಭ್ಯಾಸವನ್ನು ಶುರು ಮಾಡಿಕೊಂಡಿದ್ದು, ಹೀಗಾಗಿ ಐಪಿಎಲ್​ಗೆ ವೇಳೆಗೆ ಸಂಪೂರ್ಣ ಫಿಟ್​ನೆಸ್ ಸಾಧಿಸುವ ನಿರೀಕ್ಷೆಯಿದೆ.

ಇನ್ನು ರಶೀದ್ ಖಾನ್ ಹಾಗೂ ಸೂರ್ಯಕುಮಾರ್ ಯಾದವ್ ಕೂಡ ಫಿಟ್​ನೆಸ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಾಗ್ಯೂ ಸೂರ್ಯಕುಮಾರ್ ಇದೀಗ ಅಭ್ಯಾಸವನ್ನು ಶುರು ಮಾಡಿಕೊಂಡಿದ್ದು, ಹೀಗಾಗಿ ಐಪಿಎಲ್​ಗೆ ವೇಳೆಗೆ ಸಂಪೂರ್ಣ ಫಿಟ್​ನೆಸ್ ಸಾಧಿಸುವ ನಿರೀಕ್ಷೆಯಿದೆ.

6 / 6
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ