AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: SRH ವಿರುದ್ಧದ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಆಟಗಾರರು ಅಲಭ್ಯ..!

IPL 2024: ಪಂಜಾಬ್ ಕಿಂಗ್ಸ್ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಎಸ್​ಆರ್​ಹೆಚ್​ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಸನ್​ರೈಸರ್ಸ್ ಹೈದರಾಬಾದ್ ತಂಡ ಪ್ಲೇಆಫ್ ಆಡಲಿರುವುದು ಖಚಿತವಾಗಲಿದೆ. ಆದರೆ ಅತ್ತ ಈ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಪ್ರಮುಖ ಅಲಭ್ಯರಾಗಲಿರುವುದು ಎಸ್​ಆರ್​ಹೆಚ್ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ.

ಝಾಹಿರ್ ಯೂಸುಫ್
|

Updated on:May 16, 2024 | 1:46 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 69ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಮೇ 19 ರಂದು ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಆಟಗಾರರು ಅಲಭ್ಯರಾಗಲಿದ್ದಾರೆ. ಆ ಆಟಗಾರರು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 69ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು ಮುಖಾಮುಖಿಯಾಗಲಿದೆ. ಮೇ 19 ರಂದು ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಪಂಜಾಬ್ ಕಿಂಗ್ಸ್ ತಂಡದ 6 ಆಟಗಾರರು ಅಲಭ್ಯರಾಗಲಿದ್ದಾರೆ. ಆ ಆಟಗಾರರು ಯಾರೆಲ್ಲಾ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

1 / 7
1- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಅವರು ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯಕ್ಕೂ ಅವರು ಅಲಭ್ಯರಾಗಲಿದ್ದಾರೆ.

1- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಭುಜದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಅವರು ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಅಲ್ಲದೆ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ನಡೆಯಲಿರುವ ಕೊನೆಯ ಪಂದ್ಯಕ್ಕೂ ಅವರು ಅಲಭ್ಯರಾಗಲಿದ್ದಾರೆ.

2 / 7
2- ಸ್ಯಾಮ್ ಕರನ್: ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರನ್ ತವರಿಗೆ ಮರಳಲಿದ್ದಾರೆ. ಮೇ 21 ರಿಂದ ಇಂಗ್ಲೆಂಡ್-ಪಾಕಿಸ್ತಾನ್ ನಡುವಣ ಟಿ20 ಸರಣಿ ಶುರುವಾಗಲಿದ್ದು, ಹೀಗಾಗಿ ಕರನ್ ತವರಿಗೆ ಹಿಂತಿರುಗಲಿದ್ದಾರೆ.

2- ಸ್ಯಾಮ್ ಕರನ್: ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರನ್ ತವರಿಗೆ ಮರಳಲಿದ್ದಾರೆ. ಮೇ 21 ರಿಂದ ಇಂಗ್ಲೆಂಡ್-ಪಾಕಿಸ್ತಾನ್ ನಡುವಣ ಟಿ20 ಸರಣಿ ಶುರುವಾಗಲಿದ್ದು, ಹೀಗಾಗಿ ಕರನ್ ತವರಿಗೆ ಹಿಂತಿರುಗಲಿದ್ದಾರೆ.

3 / 7
3- ಜಾನಿ ಬೈರ್​ಸ್ಟೋವ್: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಕೂಡ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಸಹ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ.

3- ಜಾನಿ ಬೈರ್​ಸ್ಟೋವ್: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಾನಿ ಬೈರ್​ಸ್ಟೋವ್ ಕೂಡ ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ಸಹ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ.

4 / 7
4- ಕಗಿಸೊ ರಬಾಡ: ಪಂಜಾಬ್ ಕಿಂಗ್ಸ್ ತಂಡದ ವೇಗದ ಬೌಲರ್​ ಕಗಿಸೊ ರಬಾಡ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

4- ಕಗಿಸೊ ರಬಾಡ: ಪಂಜಾಬ್ ಕಿಂಗ್ಸ್ ತಂಡದ ವೇಗದ ಬೌಲರ್​ ಕಗಿಸೊ ರಬಾಡ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

5 / 7
5- ಲಿಯಾಮ್ ಲಿವಿಂಗ್​ಸ್ಟೋನ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ತವರಿಗೆ ಮರಳಿದ್ದಾರೆ. ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಲಿವಿಂಗ್​ಸ್ಟೋನ್ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ.

5- ಲಿಯಾಮ್ ಲಿವಿಂಗ್​ಸ್ಟೋನ್: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ಆಲ್​ರೌಂಡರ್ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ತವರಿಗೆ ಮರಳಿದ್ದಾರೆ. ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಲಿವಿಂಗ್​ಸ್ಟೋನ್ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ.

6 / 7
6- ಕ್ರಿಸ್ ವೋಕ್ಸ್​: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಕೂಡ ಪಾಕಿಸ್ತಾನ್ ವಿರುದ್ಧ ಸರಣಿಗೆ ತವರಿಗೆ ಹಿಂತಿರುಗಲಿದ್ದಾರೆ. ಹೀಗಾಗಿ ಅವರು ಕೂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

6- ಕ್ರಿಸ್ ವೋಕ್ಸ್​: ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಕೂಡ ಪಾಕಿಸ್ತಾನ್ ವಿರುದ್ಧ ಸರಣಿಗೆ ತವರಿಗೆ ಹಿಂತಿರುಗಲಿದ್ದಾರೆ. ಹೀಗಾಗಿ ಅವರು ಕೂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ.

7 / 7

Published On - 7:21 am, Thu, 16 May 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ