AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಲ್ಲಿ ಅಪರೂಪದ ದಾಖಲೆ ಬರೆದ ರವೀಂದ್ರ ಜಡೇಜಾ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಇತಿಹಾಸದಲ್ಲಿ ಯಾರೂ ಬರೆಯದ ವಿಶೇಷ ದಾಖಲೆಯೊಂದನ್ನು ರವೀಂದ್ರ ಜಡೇಜಾ ನಿರ್ಮಿಸಿದ್ದಾರೆ. ಅದು ಕೂಡ ತಮ್ಮ ಆಲ್​ರೌಂಡರ್​ ಆಟದೊಂದಿಗೆ ಎಂಬುದು ವಿಶೇಷ. ಐಪಿಎಲ್​ನಲ್ಲಿ ಸಿಎಸ್​ಕೆ ಆಲ್​ರೌಂಡರ್ ಬರೆದ ಅಪರೂಪದ ದಾಖಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Apr 09, 2024 | 3:55 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 22ನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ರವೀಂದ್ರ ಜಡೇಜಾ (Ravindra Jadeja) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಐಪಿಎಲ್​ನಲ್ಲಿ ಇದುವರೆಗೆ ಯಾರೂ ಸಹ ಬರೆಯದ ದಾಖಲೆ ನಿರ್ಮಿಸುವ ಮೂಲಕ ಎಂಬುದು ವಿಶೇಷ. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಮಾಡಿತು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 22ನೇ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ರವೀಂದ್ರ ಜಡೇಜಾ (Ravindra Jadeja) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಐಪಿಎಲ್​ನಲ್ಲಿ ಇದುವರೆಗೆ ಯಾರೂ ಸಹ ಬರೆಯದ ದಾಖಲೆ ನಿರ್ಮಿಸುವ ಮೂಲಕ ಎಂಬುದು ವಿಶೇಷ. ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡವು ಮೊದಲು ಬೌಲಿಂಗ್ ಮಾಡಿತು.

1 / 5
ಅದರಂತೆ ಅತ್ಯುತ್ತಮ ಸ್ಪಿನ್ ದಾಳಿ ಸಂಘಟಿಸಿದ ರವೀಂದ್ರ ಜಡೇಜಾ 4 ಓವರ್​ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹಾಗೆಯೇ ಈ ಪಂದ್ಯದಲ್ಲಿ ಜಡೇಜಾ 2 ಅತ್ಯುತ್ತಮ ಕ್ಯಾಚ್​ಗಳನ್ನು ಸಹ ಹಿಡಿದಿದ್ದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್​ಗಳನ್ನು ಹಿಡಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

ಅದರಂತೆ ಅತ್ಯುತ್ತಮ ಸ್ಪಿನ್ ದಾಳಿ ಸಂಘಟಿಸಿದ ರವೀಂದ್ರ ಜಡೇಜಾ 4 ಓವರ್​ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರು. ಹಾಗೆಯೇ ಈ ಪಂದ್ಯದಲ್ಲಿ ಜಡೇಜಾ 2 ಅತ್ಯುತ್ತಮ ಕ್ಯಾಚ್​ಗಳನ್ನು ಸಹ ಹಿಡಿದಿದ್ದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ 100 ಕ್ಯಾಚ್​ಗಳನ್ನು ಹಿಡಿದ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

2 / 5
ಅಲ್ಲದೆ ಐಪಿಎಲ್​ನಲ್ಲಿ 1000+ ರನ್, 100 ಕ್ಯಾಚ್ ಹಾಗೂ 100+ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಯಾರು ಮಾಡದ ವಿಶೇಷ ಸಾಧನೆಯನ್ನು ಮಾಡಿದರು.

ಅಲ್ಲದೆ ಐಪಿಎಲ್​ನಲ್ಲಿ 1000+ ರನ್, 100 ಕ್ಯಾಚ್ ಹಾಗೂ 100+ ವಿಕೆಟ್ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಯಾರು ಮಾಡದ ವಿಶೇಷ ಸಾಧನೆಯನ್ನು ಮಾಡಿದರು.

3 / 5
ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಗುಜರಾತ್ ಲಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಜಡೇಜಾ 156 ವಿಕೆಟ್ಸ್​, 2776 ರನ್ಸ್​ ಹಾಗೂ 100 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಐಪಿಎಲ್​ನ ಅತ್ಯಂತ ಬೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಗುಜರಾತ್ ಲಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿದಿರುವ ಜಡೇಜಾ 156 ವಿಕೆಟ್ಸ್​, 2776 ರನ್ಸ್​ ಹಾಗೂ 100 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಐಪಿಎಲ್​ನ ಅತ್ಯಂತ ಬೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 141 ರನ್​ಗಳಿಸಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 17.4 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 141 ರನ್​ಗಳಿಸಿ, 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

5 / 5
Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ