AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅಂದು 1 ಕೋಟಿ ರೂ, ಇಂದು 53 ಲಕ್ಷ ರೂ. ದಂಡ..!

IPL 2024: ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಭಾರೀ ದಂಡದ ಶಿಕ್ಷೆಗೆ ಗುರಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇಡೀ ಪಂದ್ಯದ ಶುಲ್ಕವನ್ನು ದಂಡವಾಗಿ ಪಾವತಿಸಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಅನುಚಿತವಾಗಿ ವರ್ತಿಸಿದ ಕಿಂಗ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ಫೈನ್ ವಿಧಿಸಲಾಗಿದೆ.

TV9 Web
| Edited By: |

Updated on: Apr 23, 2024 | 4:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 36ನೇ ಪಂದ್ಯದಲ್ಲಿ ಅಂಪೈರ್ ಜೊತೆ ಅನುಚಿತವಾಗಿ ವರ್ತಿಸಿದ ವಿರಾಟ್ ಕೊಹ್ಲಿಗೆ (Virat Kohli) ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಅಂಪೈರ್ ನೀಡಿದ ಔಟ್ ತೀರ್ಪನ್ನು ಪ್ರಶ್ನಿಸಿ ಕೊಹ್ಲಿ ಮೈದಾನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 36ನೇ ಪಂದ್ಯದಲ್ಲಿ ಅಂಪೈರ್ ಜೊತೆ ಅನುಚಿತವಾಗಿ ವರ್ತಿಸಿದ ವಿರಾಟ್ ಕೊಹ್ಲಿಗೆ (Virat Kohli) ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಅಂಪೈರ್ ನೀಡಿದ ಔಟ್ ತೀರ್ಪನ್ನು ಪ್ರಶ್ನಿಸಿ ಕೊಹ್ಲಿ ಮೈದಾನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದರು.

1 / 5
ಹರ್ಷಿತ್ ರಾಣ ಎಸೆದ 3ನೇ ಓವರ್​ನ ಮೊದಲ ಎಸೆತವು ಬೀಮರ್ ರೂಪದಲ್ಲಿ ಮೂಡಿಬಂದಿತ್ತು. ಈ ಎಸೆತದಲ್ಲಿ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ ಕೊಹ್ಲಿ ಕ್ಯಾಚ್ ನೀಡಿದ್ದರು. ತಕ್ಷಣವೇ ಕೊಹ್ಲಿ ನೋಬಾಲ್​ಗಾಗಿ ರಿವ್ಯೂ ಮೊರೆ ಹೋದರು. ರಿವ್ಯೂನಲ್ಲಿ ಚೆಂಡು ವಿರಾಟ್ ಕೊಹ್ಲಿಯ ಸೊಂಟಕ್ಕಿಂತ ಮೇಲ್ಭಾಗದಲ್ಲಿರುವುದು ಕಂಡು ಬಂತು. ಆದರೆ ಅವರು ಕ್ರೀಸ್​ನಿಂದ ಹೊರಗೆ ನಿಂತು ಚೆಂಡನ್ನು ಎದುರಿಸಿದ್ದರು. ಹೀಗಾಗಿ ಮೂರನೇ ಅಂಪೈರ್ ಅದು ನೋಬಾಲ್ ಅಲ್ಲ, ಔಟ್ ಎಂದು ತೀರ್ಪು ನೀಡಿದ್ದರು.

ಹರ್ಷಿತ್ ರಾಣ ಎಸೆದ 3ನೇ ಓವರ್​ನ ಮೊದಲ ಎಸೆತವು ಬೀಮರ್ ರೂಪದಲ್ಲಿ ಮೂಡಿಬಂದಿತ್ತು. ಈ ಎಸೆತದಲ್ಲಿ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ ಕೊಹ್ಲಿ ಕ್ಯಾಚ್ ನೀಡಿದ್ದರು. ತಕ್ಷಣವೇ ಕೊಹ್ಲಿ ನೋಬಾಲ್​ಗಾಗಿ ರಿವ್ಯೂ ಮೊರೆ ಹೋದರು. ರಿವ್ಯೂನಲ್ಲಿ ಚೆಂಡು ವಿರಾಟ್ ಕೊಹ್ಲಿಯ ಸೊಂಟಕ್ಕಿಂತ ಮೇಲ್ಭಾಗದಲ್ಲಿರುವುದು ಕಂಡು ಬಂತು. ಆದರೆ ಅವರು ಕ್ರೀಸ್​ನಿಂದ ಹೊರಗೆ ನಿಂತು ಚೆಂಡನ್ನು ಎದುರಿಸಿದ್ದರು. ಹೀಗಾಗಿ ಮೂರನೇ ಅಂಪೈರ್ ಅದು ನೋಬಾಲ್ ಅಲ್ಲ, ಔಟ್ ಎಂದು ತೀರ್ಪು ನೀಡಿದ್ದರು.

2 / 5
ಈ ತೀರ್ಪು ಪ್ರಕಟವಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಫೀಲ್ಡ್​ ಅಂಪೈರ್​ಗಳ ಜೊತೆ ವಾಗ್ವಾದಕ್ಕಿಳಿದರು. ಅಲ್ಲದೆ ಆಕ್ರೋಶದೊಂದಿಗೆ ಪೆವಿಲಿಯನ್​ಗೆ ಮರಳಿದ ಕೊಹ್ಲಿ ಕಸದ ಡಬ್ಬಿಯನ್ನು ಕೈಯಿಂದ ಗುದ್ದುವ ಮೂಲಕ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮ್ಯಾಚ್ ರೆಫರಿ ಇದೀಗ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿದೆ. ಅದರಂತೆ ಕೊಹ್ಲಿ 53 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ.

ಈ ತೀರ್ಪು ಪ್ರಕಟವಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಫೀಲ್ಡ್​ ಅಂಪೈರ್​ಗಳ ಜೊತೆ ವಾಗ್ವಾದಕ್ಕಿಳಿದರು. ಅಲ್ಲದೆ ಆಕ್ರೋಶದೊಂದಿಗೆ ಪೆವಿಲಿಯನ್​ಗೆ ಮರಳಿದ ಕೊಹ್ಲಿ ಕಸದ ಡಬ್ಬಿಯನ್ನು ಕೈಯಿಂದ ಗುದ್ದುವ ಮೂಲಕ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮ್ಯಾಚ್ ರೆಫರಿ ಇದೀಗ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿದೆ. ಅದರಂತೆ ಕೊಹ್ಲಿ 53 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ.

3 / 5
ಅಂದಹಾಗೆ ವಿರಾಟ್ ಕೊಹ್ಲಿ ಹೀಗೆ ಭಾರೀ ಮೊತ್ತವನ್ನು ದಂಡವಾಗಿ ಪಾವತಿಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದರು. ಈ ಘಟನೆ ಹಿನ್ನಲೆಯಲ್ಲಿ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿತ್ತು.

ಅಂದಹಾಗೆ ವಿರಾಟ್ ಕೊಹ್ಲಿ ಹೀಗೆ ಭಾರೀ ಮೊತ್ತವನ್ನು ದಂಡವಾಗಿ ಪಾವತಿಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದರು. ಈ ಘಟನೆ ಹಿನ್ನಲೆಯಲ್ಲಿ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿತ್ತು.

4 / 5
ಅದರಂತೆ ವಿರಾಟ್ ಕೊಹ್ಲಿ ತಮ್ಮ ಪಂದ್ಯದ ಶುಲ್ಕವಾದ 1.07 ಕೋಟಿ ರೂ. ದಂಡ ಪಾವತಿಸಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಅದರಂತೆ ಈ ಬಾರಿ 53 ಲಕ್ಷ ರೂ. ದಂಡ ಪಾವತಿಸಲಿದ್ದಾರೆ.

ಅದರಂತೆ ವಿರಾಟ್ ಕೊಹ್ಲಿ ತಮ್ಮ ಪಂದ್ಯದ ಶುಲ್ಕವಾದ 1.07 ಕೋಟಿ ರೂ. ದಂಡ ಪಾವತಿಸಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಅದರಂತೆ ಈ ಬಾರಿ 53 ಲಕ್ಷ ರೂ. ದಂಡ ಪಾವತಿಸಲಿದ್ದಾರೆ.

5 / 5
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್