AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಅಂದು 1 ಕೋಟಿ ರೂ, ಇಂದು 53 ಲಕ್ಷ ರೂ. ದಂಡ..!

IPL 2024: ಐಪಿಎಲ್​ನಲ್ಲಿ ವಿರಾಟ್ ಕೊಹ್ಲಿ ಭಾರೀ ದಂಡದ ಶಿಕ್ಷೆಗೆ ಗುರಿಯಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಇಡೀ ಪಂದ್ಯದ ಶುಲ್ಕವನ್ನು ದಂಡವಾಗಿ ಪಾವತಿಸಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದ ವೇಳೆ ಅನುಚಿತವಾಗಿ ವರ್ತಿಸಿದ ಕಿಂಗ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.50 ರಷ್ಟು ಫೈನ್ ವಿಧಿಸಲಾಗಿದೆ.

TV9 Web
| Edited By: |

Updated on: Apr 23, 2024 | 4:30 PM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 36ನೇ ಪಂದ್ಯದಲ್ಲಿ ಅಂಪೈರ್ ಜೊತೆ ಅನುಚಿತವಾಗಿ ವರ್ತಿಸಿದ ವಿರಾಟ್ ಕೊಹ್ಲಿಗೆ (Virat Kohli) ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಅಂಪೈರ್ ನೀಡಿದ ಔಟ್ ತೀರ್ಪನ್ನು ಪ್ರಶ್ನಿಸಿ ಕೊಹ್ಲಿ ಮೈದಾನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 36ನೇ ಪಂದ್ಯದಲ್ಲಿ ಅಂಪೈರ್ ಜೊತೆ ಅನುಚಿತವಾಗಿ ವರ್ತಿಸಿದ ವಿರಾಟ್ ಕೊಹ್ಲಿಗೆ (Virat Kohli) ಪಂದ್ಯ ಶುಲ್ಕದ ಶೇ.50 ರಷ್ಟು ದಂಡ ವಿಧಿಸಲಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯದಲ್ಲಿ ಅಂಪೈರ್ ನೀಡಿದ ಔಟ್ ತೀರ್ಪನ್ನು ಪ್ರಶ್ನಿಸಿ ಕೊಹ್ಲಿ ಮೈದಾನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದರು.

1 / 5
ಹರ್ಷಿತ್ ರಾಣ ಎಸೆದ 3ನೇ ಓವರ್​ನ ಮೊದಲ ಎಸೆತವು ಬೀಮರ್ ರೂಪದಲ್ಲಿ ಮೂಡಿಬಂದಿತ್ತು. ಈ ಎಸೆತದಲ್ಲಿ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ ಕೊಹ್ಲಿ ಕ್ಯಾಚ್ ನೀಡಿದ್ದರು. ತಕ್ಷಣವೇ ಕೊಹ್ಲಿ ನೋಬಾಲ್​ಗಾಗಿ ರಿವ್ಯೂ ಮೊರೆ ಹೋದರು. ರಿವ್ಯೂನಲ್ಲಿ ಚೆಂಡು ವಿರಾಟ್ ಕೊಹ್ಲಿಯ ಸೊಂಟಕ್ಕಿಂತ ಮೇಲ್ಭಾಗದಲ್ಲಿರುವುದು ಕಂಡು ಬಂತು. ಆದರೆ ಅವರು ಕ್ರೀಸ್​ನಿಂದ ಹೊರಗೆ ನಿಂತು ಚೆಂಡನ್ನು ಎದುರಿಸಿದ್ದರು. ಹೀಗಾಗಿ ಮೂರನೇ ಅಂಪೈರ್ ಅದು ನೋಬಾಲ್ ಅಲ್ಲ, ಔಟ್ ಎಂದು ತೀರ್ಪು ನೀಡಿದ್ದರು.

ಹರ್ಷಿತ್ ರಾಣ ಎಸೆದ 3ನೇ ಓವರ್​ನ ಮೊದಲ ಎಸೆತವು ಬೀಮರ್ ರೂಪದಲ್ಲಿ ಮೂಡಿಬಂದಿತ್ತು. ಈ ಎಸೆತದಲ್ಲಿ ರಕ್ಷಣಾತ್ಮಕವಾಗಿ ಆಡಲು ಯತ್ನಿಸಿದ ಕೊಹ್ಲಿ ಕ್ಯಾಚ್ ನೀಡಿದ್ದರು. ತಕ್ಷಣವೇ ಕೊಹ್ಲಿ ನೋಬಾಲ್​ಗಾಗಿ ರಿವ್ಯೂ ಮೊರೆ ಹೋದರು. ರಿವ್ಯೂನಲ್ಲಿ ಚೆಂಡು ವಿರಾಟ್ ಕೊಹ್ಲಿಯ ಸೊಂಟಕ್ಕಿಂತ ಮೇಲ್ಭಾಗದಲ್ಲಿರುವುದು ಕಂಡು ಬಂತು. ಆದರೆ ಅವರು ಕ್ರೀಸ್​ನಿಂದ ಹೊರಗೆ ನಿಂತು ಚೆಂಡನ್ನು ಎದುರಿಸಿದ್ದರು. ಹೀಗಾಗಿ ಮೂರನೇ ಅಂಪೈರ್ ಅದು ನೋಬಾಲ್ ಅಲ್ಲ, ಔಟ್ ಎಂದು ತೀರ್ಪು ನೀಡಿದ್ದರು.

2 / 5
ಈ ತೀರ್ಪು ಪ್ರಕಟವಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಫೀಲ್ಡ್​ ಅಂಪೈರ್​ಗಳ ಜೊತೆ ವಾಗ್ವಾದಕ್ಕಿಳಿದರು. ಅಲ್ಲದೆ ಆಕ್ರೋಶದೊಂದಿಗೆ ಪೆವಿಲಿಯನ್​ಗೆ ಮರಳಿದ ಕೊಹ್ಲಿ ಕಸದ ಡಬ್ಬಿಯನ್ನು ಕೈಯಿಂದ ಗುದ್ದುವ ಮೂಲಕ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮ್ಯಾಚ್ ರೆಫರಿ ಇದೀಗ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿದೆ. ಅದರಂತೆ ಕೊಹ್ಲಿ 53 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ.

ಈ ತೀರ್ಪು ಪ್ರಕಟವಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಫೀಲ್ಡ್​ ಅಂಪೈರ್​ಗಳ ಜೊತೆ ವಾಗ್ವಾದಕ್ಕಿಳಿದರು. ಅಲ್ಲದೆ ಆಕ್ರೋಶದೊಂದಿಗೆ ಪೆವಿಲಿಯನ್​ಗೆ ಮರಳಿದ ಕೊಹ್ಲಿ ಕಸದ ಡಬ್ಬಿಯನ್ನು ಕೈಯಿಂದ ಗುದ್ದುವ ಮೂಲಕ ಡ್ರೆಸ್ಸಿಂಗ್​ ರೂಮ್​ಗೆ ತೆರಳಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮ್ಯಾಚ್ ರೆಫರಿ ಇದೀಗ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ.50 ರಷ್ಟು ದಂಡ ವಿಧಿಸಿದೆ. ಅದರಂತೆ ಕೊಹ್ಲಿ 53 ಲಕ್ಷ ರೂ. ದಂಡದ ಮೊತ್ತ ಪಾವತಿಸಬೇಕಿದೆ.

3 / 5
ಅಂದಹಾಗೆ ವಿರಾಟ್ ಕೊಹ್ಲಿ ಹೀಗೆ ಭಾರೀ ಮೊತ್ತವನ್ನು ದಂಡವಾಗಿ ಪಾವತಿಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದರು. ಈ ಘಟನೆ ಹಿನ್ನಲೆಯಲ್ಲಿ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿತ್ತು.

ಅಂದಹಾಗೆ ವಿರಾಟ್ ಕೊಹ್ಲಿ ಹೀಗೆ ಭಾರೀ ಮೊತ್ತವನ್ನು ದಂಡವಾಗಿ ಪಾವತಿಸುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಮೈದಾನದಲ್ಲೇ ಜಗಳವಾಡಿಕೊಂಡಿದ್ದರು. ಈ ಘಟನೆ ಹಿನ್ನಲೆಯಲ್ಲಿ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.100 ರಷ್ಟು ದಂಡ ವಿಧಿಸಲಾಗಿತ್ತು.

4 / 5
ಅದರಂತೆ ವಿರಾಟ್ ಕೊಹ್ಲಿ ತಮ್ಮ ಪಂದ್ಯದ ಶುಲ್ಕವಾದ 1.07 ಕೋಟಿ ರೂ. ದಂಡ ಪಾವತಿಸಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಅದರಂತೆ ಈ ಬಾರಿ 53 ಲಕ್ಷ ರೂ. ದಂಡ ಪಾವತಿಸಲಿದ್ದಾರೆ.

ಅದರಂತೆ ವಿರಾಟ್ ಕೊಹ್ಲಿ ತಮ್ಮ ಪಂದ್ಯದ ಶುಲ್ಕವಾದ 1.07 ಕೋಟಿ ರೂ. ದಂಡ ಪಾವತಿಸಿದ್ದರು. ಇದೀಗ ಮತ್ತೊಮ್ಮೆ ಕಿಂಗ್ ಕೊಹ್ಲಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಅದರಂತೆ ಈ ಬಾರಿ 53 ಲಕ್ಷ ರೂ. ದಂಡ ಪಾವತಿಸಲಿದ್ದಾರೆ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ