AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB 11 ಬ್ಯಾಟರ್​ಗಳೊಂದಿಗೆ ಕಣಕ್ಕಿಳಿಯಲಿ..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆರ್​ಸಿಬಿ ಇದುವರೆಗೆ 7 ಪಂದ್ಯಗಳನ್ನಾಡಿದೆ. ಈ ಏಳು ಪಂದ್ಯಗಳಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮಾತ್ರ ಗೆದ್ದಿದೆ. ಇನ್ನುಳಿದಂತೆ ಸಿಎಸ್​ಕೆ, ಲಕ್ನೋ ಸೂಪರ್ ಜೈಂಟ್ಸ್, ಕೆಕೆಆರ್, ರಾಜಸ್ಥಾನ್ ರಾಯಲ್ಸ್, ಸನ್​ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ಸೋಲನುಭವಿಸಿದೆ.

TV9 Web
| Edited By: |

Updated on: Apr 18, 2024 | 9:55 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯಗಳಲ್ಲಿ 11 ಬ್ಯಾಟರ್​ಗಳೊಂದಿಗೆ ಕಣಕ್ಕಿಳಿಯುವುದು ಉತ್ತಮ ಎಂದಿದ್ದಾರೆ ಮಾಜಿ ಆಟಗಾರ ಕ್ರಿಸ್ ಶ್ರೀಕಾಂತ್. ಆರ್​ಸಿಬಿ ತಂಡದ ಸದ್ಯದ ಪರಿಸ್ಥಿತಿ ನೋಡಿದರೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಹನ್ನೊಂದು ಬ್ಯಾಟ್ಸ್​ಮನ್ ಆಡುವುದು ಒಳ್ಳೆದು ಶ್ರೀಕಾಂತ್ ವ್ಯಂಗ್ಯವಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಪಂದ್ಯಗಳಲ್ಲಿ 11 ಬ್ಯಾಟರ್​ಗಳೊಂದಿಗೆ ಕಣಕ್ಕಿಳಿಯುವುದು ಉತ್ತಮ ಎಂದಿದ್ದಾರೆ ಮಾಜಿ ಆಟಗಾರ ಕ್ರಿಸ್ ಶ್ರೀಕಾಂತ್. ಆರ್​ಸಿಬಿ ತಂಡದ ಸದ್ಯದ ಪರಿಸ್ಥಿತಿ ನೋಡಿದರೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಹನ್ನೊಂದು ಬ್ಯಾಟ್ಸ್​ಮನ್ ಆಡುವುದು ಒಳ್ಳೆದು ಶ್ರೀಕಾಂತ್ ವ್ಯಂಗ್ಯವಾಡಿದ್ದಾರೆ.

1 / 5
ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ ಆರ್​ಸಿಬಿ ಬೌಲರ್​ಗಳು 287 ರನ್​ಗಳನ್ನು ಬಿಟ್ಟು ಕೊಟ್ಟಿದ್ದಾರೆ. ಈ ಬೌಲರ್​ಗಳಿಗಿಂತ ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವುದು ಉತ್ತಮ. ಅವರ ಜೊತೆಗೆ ಕ್ಯಾಮರೋನ್ ಗ್ರೀನ್ 4 ಓವರ್ ಎಸೆಯುತ್ತಾರೆ. ಹಾಗೆಯೇ ಫಾಫ್ ಡುಪ್ಲೆಸಿಸ್ 2 ಓವರ್ ಬೌಲ್ ಮಾಡಲಿ. ಹೀಗೆ ಯಾರಿಗೆಲ್ಲಾ ಬೌಲಿಂಗ್ ಬರುತ್ತೆ ಅವರೆಲ್ಲಾ ಓವರ್ ಎಸೆಯಲಿ.

ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧ ಆರ್​ಸಿಬಿ ಬೌಲರ್​ಗಳು 287 ರನ್​ಗಳನ್ನು ಬಿಟ್ಟು ಕೊಟ್ಟಿದ್ದಾರೆ. ಈ ಬೌಲರ್​ಗಳಿಗಿಂತ ವಿರಾಟ್ ಕೊಹ್ಲಿ ಬೌಲಿಂಗ್ ಮಾಡುವುದು ಉತ್ತಮ. ಅವರ ಜೊತೆಗೆ ಕ್ಯಾಮರೋನ್ ಗ್ರೀನ್ 4 ಓವರ್ ಎಸೆಯುತ್ತಾರೆ. ಹಾಗೆಯೇ ಫಾಫ್ ಡುಪ್ಲೆಸಿಸ್ 2 ಓವರ್ ಬೌಲ್ ಮಾಡಲಿ. ಹೀಗೆ ಯಾರಿಗೆಲ್ಲಾ ಬೌಲಿಂಗ್ ಬರುತ್ತೆ ಅವರೆಲ್ಲಾ ಓವರ್ ಎಸೆಯಲಿ.

2 / 5
ಏಕೆಂದರೆ ಆರ್​ಸಿಬಿ ತಂಡದಲ್ಲಿರುವ ಬೌಲರ್​ಗಳು ಹೆಚ್ಚಿನ ರನ್ ನೀಡುತ್ತಿದ್ದಾರೆ. ಅವರನ್ನು ಬೌಲರ್​ಗಳಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸಿ ಯಾವುದೇ ಪ್ರಯೋಜನವಿಲ್ಲ. ಅದಕ್ಕಿಂತ ಉತ್ತಮ 11 ಬ್ಯಾಟ್ಸ್​ಮನ್​ಗಳು ಕಣಕ್ಕಿಳಿದು ಬೌಲಿಂಗ್​ ಮಾಡುವುದು. ಅವರು ನೀಡಿದ ರನ್​ಗಳನ್ನು ಅವರೇ ಚೇಸ್ ಮಾಡಬಹುದು. ಈ ಮೂಲಕ ಆರ್​ಸಿಬಿ ಸಂಪೂರ್ಣ ಬ್ಯಾಟ್ಸ್​ಮನ್​ಗಳೊಂದಿಗೆ ಕಣಕ್ಕಿಳಿದು ಪಂದ್ಯ ಗೆಲ್ಲಬಹುದು ಎಂದು ಕ್ರಿಸ್ ಶ್ರೀಕಾಂತ್ ಹೇಳಿದ್ದಾರೆ.

ಏಕೆಂದರೆ ಆರ್​ಸಿಬಿ ತಂಡದಲ್ಲಿರುವ ಬೌಲರ್​ಗಳು ಹೆಚ್ಚಿನ ರನ್ ನೀಡುತ್ತಿದ್ದಾರೆ. ಅವರನ್ನು ಬೌಲರ್​ಗಳಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸಿ ಯಾವುದೇ ಪ್ರಯೋಜನವಿಲ್ಲ. ಅದಕ್ಕಿಂತ ಉತ್ತಮ 11 ಬ್ಯಾಟ್ಸ್​ಮನ್​ಗಳು ಕಣಕ್ಕಿಳಿದು ಬೌಲಿಂಗ್​ ಮಾಡುವುದು. ಅವರು ನೀಡಿದ ರನ್​ಗಳನ್ನು ಅವರೇ ಚೇಸ್ ಮಾಡಬಹುದು. ಈ ಮೂಲಕ ಆರ್​ಸಿಬಿ ಸಂಪೂರ್ಣ ಬ್ಯಾಟ್ಸ್​ಮನ್​ಗಳೊಂದಿಗೆ ಕಣಕ್ಕಿಳಿದು ಪಂದ್ಯ ಗೆಲ್ಲಬಹುದು ಎಂದು ಕ್ರಿಸ್ ಶ್ರೀಕಾಂತ್ ಹೇಳಿದ್ದಾರೆ.

3 / 5
ಆರ್​ಸಿಬಿ ರೀಸ್ ಟೋಪ್ಲಿ, ಲಾಕಿ ಫರ್ಗುಸನ್ ಅವರಂತಹ ಬೌಲರ್​ಗಳನ್ನು ಖರೀದಿಸಿದ್ದಾರೆ. ಅದರಲ್ಲೂ ಫರ್ಗುಸನ್ ಯಾವತ್ತೂ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಇದೀಗ ಇವರನ್ನೆಲ್ಲಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸಲಾಗುತ್ತಿದೆ. ನನ್ನ ಪ್ರಕಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ 11 ಬ್ಯಾಟರ್​ಗಳನ್ನು ಕಣಕ್ಕಿಳಿಸಿ ಪಂದ್ಯ ಗೆಲ್ಲಲು ಪ್ರಯತ್ನಿಸುವುದು ಉತ್ತಮ ಎಂದು ಶ್ರೀಕಾಂತ್ ಸಲಹೆ ನೀಡಿದ್ದಾರೆ.

ಆರ್​ಸಿಬಿ ರೀಸ್ ಟೋಪ್ಲಿ, ಲಾಕಿ ಫರ್ಗುಸನ್ ಅವರಂತಹ ಬೌಲರ್​ಗಳನ್ನು ಖರೀದಿಸಿದ್ದಾರೆ. ಅದರಲ್ಲೂ ಫರ್ಗುಸನ್ ಯಾವತ್ತೂ ಐಪಿಎಲ್​ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಇದೀಗ ಇವರನ್ನೆಲ್ಲಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಣಕ್ಕಿಳಿಸಲಾಗುತ್ತಿದೆ. ನನ್ನ ಪ್ರಕಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ 11 ಬ್ಯಾಟರ್​ಗಳನ್ನು ಕಣಕ್ಕಿಳಿಸಿ ಪಂದ್ಯ ಗೆಲ್ಲಲು ಪ್ರಯತ್ನಿಸುವುದು ಉತ್ತಮ ಎಂದು ಶ್ರೀಕಾಂತ್ ಸಲಹೆ ನೀಡಿದ್ದಾರೆ.

4 / 5
ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 21 ರಂದು ನಡೆಯಲಿರುವ ಈ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವು ಆತಿಥ್ಯವಹಿಸಲಿದೆ. ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ದ್ವಿತೀಯಾರ್ಧದಲ್ಲಿ ಆರ್​ಸಿಬಿ ಸೋಲಿನ ಸೇಡು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

ಆರ್​ಸಿಬಿ ತನ್ನ ಮುಂದಿನ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 21 ರಂದು ನಡೆಯಲಿರುವ ಈ ಪಂದ್ಯಕ್ಕೆ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನವು ಆತಿಥ್ಯವಹಿಸಲಿದೆ. ಇದಕ್ಕೂ ಮುನ್ನ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ದ್ವಿತೀಯಾರ್ಧದಲ್ಲಿ ಆರ್​ಸಿಬಿ ಸೋಲಿನ ಸೇಡು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.

5 / 5
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್