AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ಬೌಲರ್​ಗಳಿಂದ RCB ಕಪ್ ಗೆಲ್ಲಲು ಸಾಧ್ಯವಿಲ್ಲ: ಮೈಕೆಲ್ ವಾನ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಆರ್​ಸಿಬಿ ಇದುವರೆಗೆ 3 ಪಂದ್ಯಗಳನ್ನಾಡಿದೆ. ಮೊದಲ ಮ್ಯಾಚ್​ನಲ್ಲಿ ಸಿಎಸ್​ಕೆ ವಿರುದ್ಧ ಸೋತಿದ್ದ ಆರ್​ಸಿಬಿ ತನ್ನ 2ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು ಮೂರನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಗ್ಗರಿಸಿದೆ. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದೆ.

TV9 Web
| Edited By: |

Updated on: Apr 01, 2024 | 11:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಆರಂಭದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಲೆಕ್ಕಾಚಾರಗಳು ತಲೆಕೆಳಗಾಗುವಂತೆ ಕಾಣುತ್ತಿದೆ. ಇದಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿರುವುದು. ಅಂದರೆ ತವರು ಮೈದಾನದಲ್ಲೇ ಆರ್​ಸಿಬಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ಆರಂಭದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಲೆಕ್ಕಾಚಾರಗಳು ತಲೆಕೆಳಗಾಗುವಂತೆ ಕಾಣುತ್ತಿದೆ. ಇದಕ್ಕೆ ಮುಖ್ಯ ಕಾರಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಹೀನಾಯವಾಗಿ ಸೋತಿರುವುದು. ಅಂದರೆ ತವರು ಮೈದಾನದಲ್ಲೇ ಆರ್​ಸಿಬಿಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ.

1 / 7
ಇದೇ ಕಾರಣದಿಂದಾಗಿ ಇದೀಗ ಈ ಬೌಲರ್​ಗಳನ್ನು ಇಟ್ಟುಕೊಂಡು ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್.

ಇದೇ ಕಾರಣದಿಂದಾಗಿ ಇದೀಗ ಈ ಬೌಲರ್​ಗಳನ್ನು ಇಟ್ಟುಕೊಂಡು ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕೆಲ್ ವಾನ್.

2 / 7
ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪವರ್​ಪ್ಲೇನಲ್ಲೇ 85 ರನ್​ಗಳನ್ನು ಬಿಟ್ಟುಕೊಟ್ಟಿದ್ದರು. ಅಲ್ಲದೆ 183 ರನ್​ಗಳ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 16.5 ಓವರ್​ಗಳಲ್ಲಿ ಚೇಸ್ ಮಾಡಿದ್ದರು. ಇಂತಹದೊಂದು ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೆನ್ನಲ್ಲೇ ಮೈಕೆಲ್ ವಾನ್, ಈ ಸಲ ಕೂಡ ಆರ್​ಸಿಬಿ ಕಪ್ ಗೆಲ್ಲುವುದು ಅಸಾಧ್ಯ ಎಂದಿದ್ದಾರೆ.

ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಪವರ್​ಪ್ಲೇನಲ್ಲೇ 85 ರನ್​ಗಳನ್ನು ಬಿಟ್ಟುಕೊಟ್ಟಿದ್ದರು. ಅಲ್ಲದೆ 183 ರನ್​ಗಳ ಗುರಿಯನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 16.5 ಓವರ್​ಗಳಲ್ಲಿ ಚೇಸ್ ಮಾಡಿದ್ದರು. ಇಂತಹದೊಂದು ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ ಬೆನ್ನಲ್ಲೇ ಮೈಕೆಲ್ ವಾನ್, ಈ ಸಲ ಕೂಡ ಆರ್​ಸಿಬಿ ಕಪ್ ಗೆಲ್ಲುವುದು ಅಸಾಧ್ಯ ಎಂದಿದ್ದಾರೆ.

3 / 7
ಏಕೆಂದರೆ ಆರ್​ಸಿಬಿ ತಂಡವು ಉತ್ತಮ ಬೌಲರ್​ಗಳನ್ನು ಹೊಂದಿಲ್ಲ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ವಿಜಯಕುಮಾರ್ ವೈಶಾಕ್ ಅವರನ್ನು ಹೊರತುಪಡಿಸಿದರೆ, ಉಳಿದೆಲ್ಲರೂ ದುಬಾರಿಯಾಗಿದ್ದರು. ಇಂತಹ ಬೌಲಿಂಗ್ ಲೈನಪ್​ನೊಂದಿಗೆ ಕಣಕ್ಕಿಳಿದರೆ ಆರ್​ಸಿಬಿ ಗೆಲ್ಲುವುದೇ ಕಷ್ಟ, ಅಂತಹದ್ರಲ್ಲಿ ಕಪ್ ಗೆಲ್ಲುವುದನ್ನು ನಿರೀಕ್ಷಿಸಬಾರದು ಎಂದು ವಾನ್ ಹೇಳಿದ್ದಾರೆ.

ಏಕೆಂದರೆ ಆರ್​ಸಿಬಿ ತಂಡವು ಉತ್ತಮ ಬೌಲರ್​ಗಳನ್ನು ಹೊಂದಿಲ್ಲ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ವಿಜಯಕುಮಾರ್ ವೈಶಾಕ್ ಅವರನ್ನು ಹೊರತುಪಡಿಸಿದರೆ, ಉಳಿದೆಲ್ಲರೂ ದುಬಾರಿಯಾಗಿದ್ದರು. ಇಂತಹ ಬೌಲಿಂಗ್ ಲೈನಪ್​ನೊಂದಿಗೆ ಕಣಕ್ಕಿಳಿದರೆ ಆರ್​ಸಿಬಿ ಗೆಲ್ಲುವುದೇ ಕಷ್ಟ, ಅಂತಹದ್ರಲ್ಲಿ ಕಪ್ ಗೆಲ್ಲುವುದನ್ನು ನಿರೀಕ್ಷಿಸಬಾರದು ಎಂದು ವಾನ್ ಹೇಳಿದ್ದಾರೆ.

4 / 7
ಒಂದಾರ್ಥದಲ್ಲಿ ಮೈಕೆಲ್ ವಾನ್ ಹೇಳಿರುವುದು ಕೂಡ ನಿಜ ಎಂದೇ ಹೇಳಬಹುದು. ಏಕೆಂದರೆ ಮೊದಲ ಪಂದ್ಯದಲ್ಲಿ ಆರ್​ಸಿಬಿ ನೀಡಿದ 174 ರನ್​ಗಳನ್ನು ಸಿಎಸ್​ಕೆ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿತ್ತು. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ ಬೌಲರ್​ಗಳು 176 ರನ್​ ಬಿಟ್ಟುಕೊಟ್ಟಿದ್ದರು.

ಒಂದಾರ್ಥದಲ್ಲಿ ಮೈಕೆಲ್ ವಾನ್ ಹೇಳಿರುವುದು ಕೂಡ ನಿಜ ಎಂದೇ ಹೇಳಬಹುದು. ಏಕೆಂದರೆ ಮೊದಲ ಪಂದ್ಯದಲ್ಲಿ ಆರ್​ಸಿಬಿ ನೀಡಿದ 174 ರನ್​ಗಳನ್ನು ಸಿಎಸ್​ಕೆ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿತ್ತು. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆರ್​ಸಿಬಿ ಬೌಲರ್​ಗಳು 176 ರನ್​ ಬಿಟ್ಟುಕೊಟ್ಟಿದ್ದರು.

5 / 7
ಇದೀಗ ಕೆಕೆಆರ್ ಕೂಡ ಆರ್​ಸಿಬಿ ಬೌಲರ್​ಗಳ ವಿರುದ್ಧ ಪರಾಕ್ರಮ ಮರೆದಿದ್ದಾರೆ. ಹೀಗಾಗಿಯೇ ಮೈಕೆಲ್ ವಾನ್, ಆರ್​ಸಿಬಿ ತಂಡವು ಇಂತಹ ಬೌಲಿಂಗ್​ನಿಂದ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದಾರೆ.

ಇದೀಗ ಕೆಕೆಆರ್ ಕೂಡ ಆರ್​ಸಿಬಿ ಬೌಲರ್​ಗಳ ವಿರುದ್ಧ ಪರಾಕ್ರಮ ಮರೆದಿದ್ದಾರೆ. ಹೀಗಾಗಿಯೇ ಮೈಕೆಲ್ ವಾನ್, ಆರ್​ಸಿಬಿ ತಂಡವು ಇಂತಹ ಬೌಲಿಂಗ್​ನಿಂದ ಕಪ್ ಗೆಲ್ಲಲು ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದಾರೆ.

6 / 7
RCB ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ವೇಳೆ ಆರ್​ಸಿಬಿ ತನ್ನ ಬೌಲಿಂಗ್ ಲೈನಪ್ ಬದಲಿಸಲಿದೆಯಾ ಕಾದು ನೋಡಬೇಕಿದೆ.

RCB ತಂಡವು ತನ್ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ವೇಳೆ ಆರ್​ಸಿಬಿ ತನ್ನ ಬೌಲಿಂಗ್ ಲೈನಪ್ ಬದಲಿಸಲಿದೆಯಾ ಕಾದು ನೋಡಬೇಕಿದೆ.

7 / 7
Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!