AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಎಲಿಮಿನೇಟರ್ ಪಂದ್ಯದಲ್ಲಿ RCB ಗೆದ್ದ ಇತಿಹಾಸವಿದೆಯೇ? ಇಲ್ಲಿದೆ ಮಾಹಿತಿ

IPL 2024: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೇ 22 ರಂದು ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಆರ್​ಸಿಬಿ ತಂಡದ ಫೈನಲ್ ಆಸೆ ಜೀವಂತವಿರಲಿದೆ. ಹೀಗಾಗಿ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಝಾಹಿರ್ ಯೂಸುಫ್
|

Updated on:May 20, 2024 | 8:47 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಮೂರು ಬಾರಿ ಮಾತ್ರ ಫೈನಲ್ ಆಡಿದೆ. ಆದರೆ 16 ಸೀಸನ್​​ಗಳಲ್ಲಿ 14 ಪ್ಲೇಆಫ್ ಪಂದ್ಯಗಳನ್ನಾಡಿದೆ. ಈ ವೇಳೆ ಎಲಿಮಿನೇಟರ್ ಪಂದ್ಯವಾಡಿದ್ದು ಕೇವಲ 4 ಬಾರಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೇವಲ ಮೂರು ಬಾರಿ ಮಾತ್ರ ಫೈನಲ್ ಆಡಿದೆ. ಆದರೆ 16 ಸೀಸನ್​​ಗಳಲ್ಲಿ 14 ಪ್ಲೇಆಫ್ ಪಂದ್ಯಗಳನ್ನಾಡಿದೆ. ಈ ವೇಳೆ ಎಲಿಮಿನೇಟರ್ ಪಂದ್ಯವಾಡಿದ್ದು ಕೇವಲ 4 ಬಾರಿ ಮಾತ್ರ.

1 / 6
ಆರ್​ಸಿಬಿ ತಂಡವು ಮೊದಲ ಬಾರಿಗೆ ಎಲಿಮಿನೇಟರ್ ಪಂದ್ಯವಾಡಿದ್ದ್ದು 2015 ರಲ್ಲಿ. ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಆರ್​ಆರ್​ ತಂಡಗಳು ಮುಖಾಮುಖಿಯಾಗಿದ್ದವು. ನಿರ್ಣಾಯಕ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋಲನುಭವಿಸಿತು.

ಆರ್​ಸಿಬಿ ತಂಡವು ಮೊದಲ ಬಾರಿಗೆ ಎಲಿಮಿನೇಟರ್ ಪಂದ್ಯವಾಡಿದ್ದ್ದು 2015 ರಲ್ಲಿ. ಈ ಪಂದ್ಯದಲ್ಲಿ ಆರ್​ಸಿಬಿ ಮತ್ತು ಆರ್​ಆರ್​ ತಂಡಗಳು ಮುಖಾಮುಖಿಯಾಗಿದ್ದವು. ನಿರ್ಣಾಯಕ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಸೋಲನುಭವಿಸಿತು.

2 / 6
2020 ರಲ್ಲಿ ಆರ್​ಸಿಬಿ ತಂಡವು 4ನೇ ಸ್ಥಾನದೊಂದಿಗೆ ಎಲಿಮಿನೇಟರ್ ರೌಂಡ್​ಗೆ ಪ್ರವೇಶಿಸಿತ್ತು. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್​ಗಳ ಸೋಲನುಭವಿಸಿತ್ತು.

2020 ರಲ್ಲಿ ಆರ್​ಸಿಬಿ ತಂಡವು 4ನೇ ಸ್ಥಾನದೊಂದಿಗೆ ಎಲಿಮಿನೇಟರ್ ರೌಂಡ್​ಗೆ ಪ್ರವೇಶಿಸಿತ್ತು. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಈ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್​ಗಳ ಸೋಲನುಭವಿಸಿತ್ತು.

3 / 6
ಇದಾದ ಬಳಿಕ 2021 ರಲ್ಲಿ ಮತ್ತೊಮ್ಮೆ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್​ಸಿಬಿ ತಂಡ ಜಯಗಳಿಸಲು ವಿಫಲವಾಯಿತು.

ಇದಾದ ಬಳಿಕ 2021 ರಲ್ಲಿ ಮತ್ತೊಮ್ಮೆ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್​ಸಿಬಿ ತಂಡ ಜಯಗಳಿಸಲು ವಿಫಲವಾಯಿತು.

4 / 6
ಇನ್ನು 2022 ರಲ್ಲಿ ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿ ಆರ್​ಸಿಬಿ ತಂಡಕ್ಕೆ ಎದುರಾಳಿಯಾಗಿ ಸಿಕ್ಕಿದ್ದು ಲಕ್ನೋ ಸೂಪರ್ ಜೈಂಟ್ಸ್​. LSG ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿತು.

ಇನ್ನು 2022 ರಲ್ಲಿ ಮತ್ತೊಮ್ಮೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಈ ಬಾರಿ ಆರ್​ಸಿಬಿ ತಂಡಕ್ಕೆ ಎದುರಾಳಿಯಾಗಿ ಸಿಕ್ಕಿದ್ದು ಲಕ್ನೋ ಸೂಪರ್ ಜೈಂಟ್ಸ್​. LSG ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ಆದರೆ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿತು.

5 / 6
ಅಂದರೆ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ತಂಡವು ನಾಲ್ಕು ಬಾರಿ ಮಾತ್ರ ಎಲಿಮಿನೇಟರ್ ಪಂದ್ಯವಾಡಿದ್ದು, ಈ ವೇಳೆ ಎರಡು ಬಾರಿ ಜಯ ಸಾಧಿಸಿದೆ. ಇದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಒಮ್ಮೆಯೂ ಫೈನಲ್​ಗೆ ತಲುಪಿಲ್ಲ. ಆದರೆ ಈ ಬಾರಿ ಸತತ ಗೆಲುವುಗಳೊಂದಿಗೆ ಹೊಸ ಹುಮ್ಮಸ್ಸಿನಲ್ಲಿರುವ ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಅಂದರೆ ಐಪಿಎಲ್​ ಇತಿಹಾಸದಲ್ಲಿ ಆರ್​ಸಿಬಿ ತಂಡವು ನಾಲ್ಕು ಬಾರಿ ಮಾತ್ರ ಎಲಿಮಿನೇಟರ್ ಪಂದ್ಯವಾಡಿದ್ದು, ಈ ವೇಳೆ ಎರಡು ಬಾರಿ ಜಯ ಸಾಧಿಸಿದೆ. ಇದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಒಮ್ಮೆಯೂ ಫೈನಲ್​ಗೆ ತಲುಪಿಲ್ಲ. ಆದರೆ ಈ ಬಾರಿ ಸತತ ಗೆಲುವುಗಳೊಂದಿಗೆ ಹೊಸ ಹುಮ್ಮಸ್ಸಿನಲ್ಲಿರುವ ಆರ್​ಸಿಬಿ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದು ಪ್ರಶಸ್ತಿ ಮುಡಿಗೇರಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 6

Published On - 7:52 pm, Mon, 20 May 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್