Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 5785 ದಿನಗಳ ಬಳಿಕವೂ ಹಳೆಯ ಅಧ್ಯಾಯ ಮುಂದುವರೆಸಿದ RCB

IPL 2024: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) ಉದ್ಘಾಟನಾ ಪಂದ್ಯದಲ್ಲಿ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಿಎಸ್​ಕೆ ಆಘಾತ ನೀಡಿದೆ. ಮೊದಲ ಪಂದ್ಯದಲ್ಲೇ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ ಸೂಪರ್​ ಆಗಿಯೇ ಐಪಿಎಲ್ ಅಭಿಯಾನ ಆರಂಭಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 23, 2024 | 6:29 AM

ಇದು RCBಯ ಹೊಸ ಅಧ್ಯಾಯ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ (IPL 2024) ಅಭಿಯಾನ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 5785 ದಿನಗಳ ಬಳಿಕವೂ ಹಳೆಯ ಅಧ್ಯಾಯವನ್ನು ಮುಂದುವರೆಸಿದೆ. ಅಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಮತ್ತೊಮ್ಮೆ ಆರ್​ಸಿಬಿ ಮುಗ್ಗರಿಸಿದೆ.

ಇದು RCBಯ ಹೊಸ ಅಧ್ಯಾಯ ಎಂಬ ಘೋಷವಾಕ್ಯದೊಂದಿಗೆ ಐಪಿಎಲ್ (IPL 2024) ಅಭಿಯಾನ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 5785 ದಿನಗಳ ಬಳಿಕವೂ ಹಳೆಯ ಅಧ್ಯಾಯವನ್ನು ಮುಂದುವರೆಸಿದೆ. ಅಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಮತ್ತೊಮ್ಮೆ ಆರ್​ಸಿಬಿ ಮುಗ್ಗರಿಸಿದೆ.

1 / 6
ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

ಶುಕ್ರವಾರ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.

2 / 6
174 ರನ್​ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್​ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್​ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.

174 ರನ್​ಗಳ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.4 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್​ ಬಾರಿಸಿ ನಿರಾಯಾಸವಾಗಿ ಗೆಲುವು ದಾಖಲಿಸಿತು. ಈ ಜಯದೊಂದಿಗೆ ತವರಿನಲ್ಲಿ ಆರ್​ಸಿಬಿ ವಿರುದ್ಧದ ಗೆಲುವಿನ ನಾಗಾಲೋಟ ಮುಂದುವರೆಸಿದೆ.

3 / 6
ಅಂದರೆ ಆರ್​ಸಿಬಿ ತಂಡವು ಚೆನ್ನೈನಲ್ಲಿ ಗೆಲುವು ದಾಖಲಿಸಿ ಬರೋಬ್ಬರಿ 16 ವರ್ಷಗಳೇ ಕಳೆದಿವೆ. 2008 ರಲ್ಲಿ ಮೊದಲ ಜಯ ಸಾಧಿಸಿದ ಬಳಿಕ ಸಿಎಸ್​ಕೆ ವಿರುದ್ಧ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಮೈದಾನದಲ್ಲಿ ಗೆಲುವು ಕಂಡಿಲ್ಲ.

ಅಂದರೆ ಆರ್​ಸಿಬಿ ತಂಡವು ಚೆನ್ನೈನಲ್ಲಿ ಗೆಲುವು ದಾಖಲಿಸಿ ಬರೋಬ್ಬರಿ 16 ವರ್ಷಗಳೇ ಕಳೆದಿವೆ. 2008 ರಲ್ಲಿ ಮೊದಲ ಜಯ ಸಾಧಿಸಿದ ಬಳಿಕ ಸಿಎಸ್​ಕೆ ವಿರುದ್ಧ ಚೆಪಾಕ್ (ಎಂಎ ಚಿದಂಬರಂ ಸ್ಟೇಡಿಯಂ) ಮೈದಾನದಲ್ಲಿ ಗೆಲುವು ಕಂಡಿಲ್ಲ.

4 / 6
2008 ರಲ್ಲಿ ನಡೆದ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 126 ರನ್ ಕಲೆಹಾಕಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟದೊಂದಿಗೆ 112 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಆರ್​ಸಿಬಿ 14 ರನ್​ಗಳ ರೋಚಕ ಜಯ ಸಾಧಿಸಿತ್ತು. ಇದಾದ ಬಳಿಕ ಆರ್​ಸಿಬಿ ತಂಡವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಗೆಲುವು ದಾಖಲಿಸಿಲ್ಲ.

2008 ರಲ್ಲಿ ನಡೆದ ಆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 126 ರನ್ ಕಲೆಹಾಕಿದ್ದರು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟದೊಂದಿಗೆ 112 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಆರ್​ಸಿಬಿ 14 ರನ್​ಗಳ ರೋಚಕ ಜಯ ಸಾಧಿಸಿತ್ತು. ಇದಾದ ಬಳಿಕ ಆರ್​ಸಿಬಿ ತಂಡವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸಿಎಸ್​ಕೆ ವಿರುದ್ಧ ಗೆಲುವು ದಾಖಲಿಸಿಲ್ಲ.

5 / 6
ಇಂಟ್ರೆಸ್ಟಿಂಗ್ ವಿಷಯ ಎಂದರೆ, ಆರ್​ಸಿಬಿ ಚೆಪಾಕ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದಾಗ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರಲಿಲ್ಲ. ಸಿಎಸ್​ಕೆ ತಂಡದ ಈಗಿನ ಕೋಚ್ ಸ್ಟೀಫನ್ ಫ್ಲೆಮಿಂಗ್ ಅಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರಾಗಿದ್ದರು. ಇದೀಗ ಕಾಲವೇ ಉರುಳಿದಿದೆ. ಆದರೆ ಹೊಸ ಅಧ್ಯಾಯದೊಂದಿಗೆ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದ ಆರ್​ಸಿಬಿ 16 ವರ್ಷಗಳ ಹಳೆಯ ಅಧ್ಯಾಯವನ್ನೇ ಮುಂದುವರೆಸಿದೆ.

ಇಂಟ್ರೆಸ್ಟಿಂಗ್ ವಿಷಯ ಎಂದರೆ, ಆರ್​ಸಿಬಿ ಚೆಪಾಕ್​ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದಾಗ, ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿರಲಿಲ್ಲ. ಸಿಎಸ್​ಕೆ ತಂಡದ ಈಗಿನ ಕೋಚ್ ಸ್ಟೀಫನ್ ಫ್ಲೆಮಿಂಗ್ ಅಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರಾಗಿದ್ದರು. ಇದೀಗ ಕಾಲವೇ ಉರುಳಿದಿದೆ. ಆದರೆ ಹೊಸ ಅಧ್ಯಾಯದೊಂದಿಗೆ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದ ಆರ್​ಸಿಬಿ 16 ವರ್ಷಗಳ ಹಳೆಯ ಅಧ್ಯಾಯವನ್ನೇ ಮುಂದುವರೆಸಿದೆ.

6 / 6

Published On - 6:28 am, Sat, 23 March 24

Follow us
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು